Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಬ್ಬಿಂಗ್ ವಿವಾದ ಸುಳಿಯಲ್ಲಿ ಸಿಕ್ಕ ನಾಗಾಭರಣ
ಡಬ್ಬಿಂಗ್ ಚಿತ್ರಗಳ ಮೇಲೆ ನಿಷೇಧ ಹೇರುವುದು ಸರಿಯಿಲ್ಲ. ಕೂಡಲೇ ಹಿಂಪಡೆಯಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಮೀಕ್ಷಾ ವರದಿಯನ್ನು ನಾಗಾಭರಣ ನೇತೃತ್ವದ ಕನ್ನಡ ಚಲನಚಿತ್ರ ಅಕಾಡೆಮಿ ಹಿಂದಕ್ಕೆ ಪಡೆದಿದೆ.
ಚಲನಚಿತ್ರ ಅಕಾಡೆಮಿಯ ಸಮೀಕ್ಷಾ ವರದಿಯಲ್ಲಿ ಡಬ್ಬಿಂಗ್ ಕುರಿತು ನೀಡಲಾಗಿದ್ದ ಅಂಶಗಳಿಗೆ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ಸೇರಿದಂತೆ ಹಲವಾರು ಸಂಘಟನೆಗಳು ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದ್ದವು.
ಕನ್ನಡ ಚಿತ್ರೋದ್ಯಮದ ಬೆಳವಣಿಗೆ ದೃಷ್ಟಿಯಿಂದ ಬನವಾಸಿ ಬಳಗದವರು ಖಾಸಗಿಯಾಗಿ ಸಮೀಕ್ಷೆ ನಡೆಸಿದ್ದರು. ಅದರ ವರದಿಯನ್ನು ಅಕಾಡೆಮಿ ಸದಸ್ಯರ ಗಮನಕ್ಕೆ ತಾರದೆ ಯಥವತ್ತಾಗಿ ಮುದ್ರಿಸಲಾಗಿತ್ತು. ಈ ಕೃತ್ಯ ನನ್ನದೇ ನಿರ್ದೇಶನದಡಿಯಲ್ಲಿ ಹೊರ ಬಂದಿರುವುದರಿಂದ ನೈತಿಕ ಹೊಣೆ ಹೊತ್ತು ವರದಿಯನ್ನು ಹಿಂಪಡೆಯಲು ನಿರ್ಧರಿಸಿದ್ದೇನೆ ಎಂದು ಅಕಾಡೆಮಿ ಅಧ್ಯಕ್ಷ ಟಿಎಸ್ ನಾಗಾಭರಣ ಹೇಳಿದ್ದಾರೆ.
ಈ ಸಮೀಕ್ಷಾ ವರದಿಯ ಪುಟ ಸಂಖ್ಯೆ 17 ರ ಪ್ರಕಟಣೆಯಲ್ಲಿ ಯಾವುದೇ ದುರುದ್ದೇಶವಿಲ್ಲ. ಇದರಿಂದ ಉದ್ಯಮದವರಿಗೆ ನೋವುಂಟಾಗಿದ್ದರೆ ನನ್ನನ್ನು ಕ್ಷಮಿಸಿ ಎಂದು ನಾಗಾಭರಣ ಕೇಳಿಕೊಂಡಿದ್ದಾರೆ.
ಕರ್ನಾಟಕ ಚಲನಚಿತ್ರ ಅಕಾಡೆಮಿ ಜುಲೈ.26 ರಂದು ಅಕಾಡೆಮಿಯ ಪ್ರಥಮ ವಾರ್ಷಿಕೋತ್ಸವ ಹಾಗೂ ಬಿ.ಆರ್.ಪಂತುಲು ಜನ್ಮಶತಮಾನೋತ್ಸವದ ಅಂಗವಾಗಿ ಮೂರು ಪುಸ್ತಕಗಳನ್ನು ಹೊರತಂದಿದೆ. ಅದರಲ್ಲಿ ಕನ್ನಡ ಚಿತ್ರರಂಗ ಸಮೀಕ್ಷಾ ವರದಿಯಲ್ಲಿ ಪ್ರಸ್ತಾಪವಾಗಿರುವ ಡಬ್ಬಿಂಗ್ ನಿಷೇಧ ಹಿಂಪಡೆಯುವ ಬಗ್ಗೆ ಇರುವ ವರದಿ ಉದ್ಯಮದವರ ಕೆಂಗಣ್ಣಿಗೆ ಗುರಿಯಾಗಿದೆ.