Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಂಧಿರನ್'ಗೆ ದಿಡ್ಡಿ ಬಾಗಿಲು ತೆರೆದು ಕೆಎಫ್ಸಿಸಿ ಸ್ವಾಗತ!
ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮೇಲಿಟ್ಟಿದ್ದ ನಿರೀಕ್ಷೆಗಳು ಕಡೆಗೂ ಹುಸಿಯಾಗಿವೆ. ಯಾವುದೇ ಕಾರಣಕ್ಕ್ಕೂ 24ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ 'ಎಂಧಿರನ್' ಬಿಡುಗಡೆಗೆ ಅವಕಾಶ ಕಲ್ಪಿಸುವುದಿಲ್ಲ ಎಂಬ ನಂಬಿಕೆಗೆ ಕೆಎಫ್ಸಿಸಿ ಕೊಡಲಿ ಪೆಟ್ಟು ಕೊಟ್ಟಿದೆ. ರಾಜ್ಯದಾದ್ಯಂತ 35 ಚಿತ್ರಮಂದಿರಗಳಲ್ಲಿ 'ಎಂಧಿರನ್' ಚಿತ್ರ ಬಿಡುಗಡೆ ಫಿಲಂ ಚೇಂಬರ್ ಕಾರ್ಯಕಾರಿ ಸಮಿತಿ ಇಂದು (ಸೆ.29)ನಿರ್ಧಾರ ತೆಗೆದುಕೊಂಡಿತು. ಈ ಮೂಲಕ ಪರಭಾಷಾ ಚಿತ್ರವೊಂದಕ್ಕೆ ದಿಡ್ಡಿ ಬಾಗಿಲು ತೆರೆದು ಸ್ವಾಗತಿಸಿದಂತಾಗಿದೆ.
ಚಿತ್ರದ ನಾಯಕ ನಟ ಸೂಪರ್ ಸ್ಟಾರ್ ರಜನಿಕಾಂತ್ ಎಂಬ ಕಾರಣಕ್ಕೆ ಕೆಎಫ್ಸಿಸಿ ತಾನೇ ರೂಪಿಸಿದ ನೀತಿ ನಿಯಮಗಳನ್ನು ಗಾಳಿಗೆ ತೂರಿರುವುದು ಹಲವಾರು ಸಂದೇಹಗಳಿಗೆ ಎಡೆಮಾಡಿಕೊಟ್ಟಿದೆ. ರಾಜ್ಯದಲ್ಲಿ 'ಎಂಧಿರನ್' ಚಿತ್ರಕ್ಕೆ 35 ಚಿತ್ರಮಂದಿರಗಳಲ್ಲಿ ಬಿಡುಗಡೆಗೆ ಅವಕಾಶ ಕಲ್ಪಿಸಿರುವ ಬಗ್ಗೆ ಕರ್ನಾಟಕ ಚಲನಚಿತ್ರ ನಿರ್ಮಾಪರ ಸಂಘ ತತ್ ಕ್ಷಣ ಪ್ರತಿಕ್ರಿಯಿಸಿದ್ದು, ಮಂಡಳಿಯ ಧೋರಣೆಯನ್ನು ಖಂಡಿಸಿದ್ದಾರೆ.
ಈ ಸಂಬಂಧ ಬುಧವಾರ (ಸೆ.29) ಮಧ್ಯಾಹ್ನ ಸಭೆ ಸೇರುತ್ತಿರುವುದಾಗಿ ಕರ್ನಾಟಕ ನಿರ್ಮಾಪಕರ ಸಂಘದ ಅಧ್ಯಕ್ಷ ಕೆ ಸಿ ಎನ್ ಚಂದ್ರಶೇಖರ್ ತಿಳಿಸಿದ್ದಾರೆ. ರಾಜ್ಯದಲ್ಲಿ 'ಎಂಧಿರನ್' ಚಿತ್ರದ ಟಿಕೆಟ್ ಧರವನ್ನು ಹೆಚ್ಚಿಸಿರುವುದಾಗಿಯೂ ವಾಣಿಜ್ಯ ಮಂಡಳಿ ತಿಳಿಸಿದೆ. ಆದರೆ ಇದು ಎಷ್ಟು ಸಮಂಜಸ ಎಂದು ಕೆಸಿಎನ್ ಪ್ರಶ್ನಿಸಿದ್ದಾರೆ.
ಚಲನಚಿತ್ರ ವಾಣಿಜ್ಯ ಮಂಡಳಿಯ ಮೃದು ಧೋರಣೆ ಬಗ್ಗೆ ಹೋರಾಟ ಮಾಡಬೇಕಾಗುತ್ತದೆ. ಮಂಡಳಿಯ ಈ ತಾರತಮ್ಯವನ್ನು ಯಾವುದೇ ಕಾರಣಕ್ಕೂ ನಾವು ಒಪ್ಪುವುದಿಲ್ಲ. ಯಾವ ಕೋನದಲ್ಲಿ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ ಎಂಬುದು ನಮಗೆ ತಿಳಿದುಬಂದಿಲ್ಲ ಎಂದು ಕೆಸಿಎನ್ ಚಂದ್ರಶೇಖರ್ ಪ್ರತಿಕ್ರಿಯಿಸಿದ್ದಾರೆ.
ಪರಭಾಷಾ ಚಿತ್ರವೊಂದು ರಾಜ್ಯದಲ್ಲಿ 24ಕ್ಕಿಂತಲೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಬಿಡುಗಡೆಯಾವಂತಿಲ್ಲ ಎಂಬುದು ವಾಣಿಜ್ಯ ಮಂಡಳಿ ನಿಯಮ. ಈ ನಿಯಮವನ್ನು ಧಿಕ್ಕರಿಸಿದಾಗಲೆಲ್ಲಾ ಕೆಎಫ್ಸಿಸಿ ಹೋರಾಟ ಮನೋಭಾವ ತೋರಿದೆ. 'ರಾವಣ್' ಮತ್ತು 'ಕೈಟ್ಸ್' ಚಿತ್ರಗಳನ್ನು ಇಲ್ಲಿ ಉದಾಹರಿಸಬಹುದು. ಈಗ 'ಎಂಧಿರನ್' ಸಹ ತಮಿಳು, ತೆಲುಗು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ತೆರೆಕಾಣುತ್ತಿದೆ.
ಆದರೆ 'ಎಂಧಿರನ್' ಚಿತ್ರದ ವಿಚಾರದಲ್ಲಿ ಕೆಎಫ್ಸಿಸಿ ಎಡವುತ್ತಿರುವುದೇಕೆ? ಇದು ರಜನಿಕಾಂತ್ ಚಿತ್ರ ಎಂಬ ಕಾರಣವೆ? ನೀತಿ ನಿಯಮ ಎಂದರೆ ಎಲ್ಲರಿಗೂ ಒಂದೇ ತಾನೆ? ಹಾಗಿದ್ದೂ ಈ ತಾರತಮ್ಯ ಏಕೆ? ಎಂಬ ಪ್ರಶ್ನೆಗಳ ಸರಮಾಲೆಯೇ ಕೆಎಫ್ಸಿಯನ್ನು ಸುತ್ತುವರಿದಿವೆ. ಇಂದು ಸಂಜೆ 4 ಗಂಟೆಗೆ ಮತ್ತೊಂದು ಸುತ್ತಿನ ಮಾತುಕತೆ ನಡೆಸುವುದಾಗಿ ಫಿಲಂ ಚೇಂಬರ್ ಹೇಳಿದೆ.