Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರ ಇಲ್ಲ!
ಚಿತ್ರದ ಲಾಭ ಹಂಚಿಕೆಯ ವಿಷಯದಲ್ಲಿ ಮಲ್ಟಿಪ್ಲೆಕ್ಸ್ ಮತ್ತು ಚಿತ್ರ ನಿರ್ಮಾಪಕರು ವಿಭಿನ್ನ ನಿಲುವು ತಾಳಿರುವುದೇ ಇದಕ್ಕೆ ಕಾರಣ. ಈ ಬಗ್ಗೆ ಸಾಕಷ್ಟು ಮಾತುಕತೆ ನಡೆದರೂ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕರ್ನಾಟಕ ವಾಣಿಜ್ಯ ಮಂಡಳಿ ಈಗ ಸಿಟ್ಟಾಗಿದೆ. ಕನ್ನಡ ಚಿತ್ರಗಳನ್ನು ನೀವು ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡಬೇಡಿ. ಮೊದಲು ಅವರು ಇತ್ಯರ್ಥ ಮಾಡಿಕೊಡಲಿ ಎಂದು ಸಂಬಂಧಪಟ್ಟ ನಿರ್ಮಾಪಕರಿಗೆ ಚೇಂಬರ್ ಫರ್ಮಾನು ಹೊರಡಿಸಿದೆ.
ಇದರಿಂದಾಗಬಹುದಾದ ದೊಡ್ಡ ನಷ್ಟವನ್ನು ನಿರ್ಮಾಪಕರು ಆಗಲೇ ಅಂದಾಜಿಸಲು ಶುರು ಮಾಡಿದ್ದಾರೆ. ಅದಕ್ಕೆ ತಕ್ಕ ಮಾರ್ಗವನ್ನು ಕಂಡುಕೊಡಿ ಎಂದು ಚೇಂಬರ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಮಾತುಕತೆ ಫಲಪ್ರದವಾದರೆ ಮಾತ್ರ ಇಂದು (ಮೇ 29)ಬಿಡುಗಡೆಯಾರಿರುವ 'ಕಲಾಕಾರ್', 'ನನ್ನದೆಯ ಹಾಡು' ಮತ್ತು 'ಅಭಿಮಾನಿ' ಚಿತ್ರಗಳು ಮಲ್ಟಿಪ್ಲೆಕ್ಸ್ ಪ್ರೇಕ್ಷಕರನ್ನು ತಲುಪಲಿದೆ.
ಈ ವರ್ಷ ಬಿಡುಗಡೆಗೊಂಡ ಜಂಗ್ಲಿ, ಅಂಬಾರಿ, ಸವಾರಿ, ಜೋಷ್ ಚಿತ್ರಗಳು ಮಲ್ಟಿಪ್ಲೆಕ್ಸ್ ನಲ್ಲಿ ಉತ್ತಮ ಗಳಿಕೆ ಕಂಡಿರುವುದು ಗಮನಾರ್ಹ ಅಂಶ. ವಿಷಯ ಹೀಗಿದರೂ ಅತ್ತ ಮಲ್ಟಿಫ್ಲೆಕ್ಸ್ ಆಡಳಿತ ಮಂಡಳಿ ಇತ್ತ ಕನ್ನಡ ಚಿತ್ರೋದ್ಯಮ ಇಬ್ಬರೂ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ಇವರಿಬ್ಬರ ಜಗಳದಲ್ಲಿ ಮಲ್ಟಿಫ್ಲೆಕ್ಸ್, ಪಿವಿಆರ್ ಮತ್ತು ಇನ್ನೋಕ್ಸ್ ಗಳು ಕನ್ನಡ ಚಿತ್ರಗಳಿಲ್ಲದೆ ಬಿಕೋ ಎನ್ನುತ್ತಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)