Don't Miss!
- News ಇಂದಿನಿಂದ ಶಕ್ತಿ ದೇವತೆ ದುರ್ಗಾಂಬಿಕಾ ಜಾತ್ರೆ: ಇಲ್ಲಿನ ವಿಶೇಷ ಆಚರಣೆ ಏನು ಗೊತ್ತಾ?
- Finance ಕರ್ನಾಟಕದ ಹಲವೆಡೆ ಮಳೆ: ಬೆಂಗಳೂರಿಗೆ ಮಳೆ ಬರುವ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ
- Sports IPL 2024: RCB ಫ್ಯಾನ್ಸ್ ಕಂಡರೆ ಹೆಚ್ಚು ಹೆದರುತ್ತೇನೆ; ಅವೇಶ್ ಖಾನ್
- Automobiles Mahindra Bolero: ಅಪಘಾತವಾದ ಕಾರಿಗೆ ಅದ್ದೂರಿ ಮಾಡಿಫಿಕೇಷನ್: ವಿಡಿಯೋಗೆ ವಾವ್ ಎನ್ನಲೇಬೇಕು!
- Lifestyle ನಿಮಗೆ ಬೀಳುವ ಕನಸುಗಳ ಹಿಂದಿರುವ ಅರ್ಥ, ಉದ್ದೇಶವೇನು ಗೊತ್ತಾ?
- Technology ಇಂದು ಒನ್ಪ್ಲಸ್ನ ಈ ಸ್ಪೆಷಲ್ ಮೊಬೈಲ್ನ ಫಸ್ಟ್ ಸೇಲ್!..ಬೆಲೆ ಎಷ್ಟು ಅಂತೀರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಲ್ಟಿಫ್ಲೆಕ್ಸ್ ಚಿತ್ರಮಂದಿರಗಳಲ್ಲಿ ಕನ್ನಡ ಚಿತ್ರ ಇಲ್ಲ!
ಚಿತ್ರದ ಲಾಭ ಹಂಚಿಕೆಯ ವಿಷಯದಲ್ಲಿ ಮಲ್ಟಿಪ್ಲೆಕ್ಸ್ ಮತ್ತು ಚಿತ್ರ ನಿರ್ಮಾಪಕರು ವಿಭಿನ್ನ ನಿಲುವು ತಾಳಿರುವುದೇ ಇದಕ್ಕೆ ಕಾರಣ. ಈ ಬಗ್ಗೆ ಸಾಕಷ್ಟು ಮಾತುಕತೆ ನಡೆದರೂ ತಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ ಎಂದು ಕರ್ನಾಟಕ ವಾಣಿಜ್ಯ ಮಂಡಳಿ ಈಗ ಸಿಟ್ಟಾಗಿದೆ. ಕನ್ನಡ ಚಿತ್ರಗಳನ್ನು ನೀವು ಮಲ್ಟಿಫ್ಲೆಕ್ಸ್ ಗಳಲ್ಲಿ ಬಿಡುಗಡೆ ಮಾಡಬೇಡಿ. ಮೊದಲು ಅವರು ಇತ್ಯರ್ಥ ಮಾಡಿಕೊಡಲಿ ಎಂದು ಸಂಬಂಧಪಟ್ಟ ನಿರ್ಮಾಪಕರಿಗೆ ಚೇಂಬರ್ ಫರ್ಮಾನು ಹೊರಡಿಸಿದೆ.
ಇದರಿಂದಾಗಬಹುದಾದ ದೊಡ್ಡ ನಷ್ಟವನ್ನು ನಿರ್ಮಾಪಕರು ಆಗಲೇ ಅಂದಾಜಿಸಲು ಶುರು ಮಾಡಿದ್ದಾರೆ. ಅದಕ್ಕೆ ತಕ್ಕ ಮಾರ್ಗವನ್ನು ಕಂಡುಕೊಡಿ ಎಂದು ಚೇಂಬರ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಮಾತುಕತೆ ಫಲಪ್ರದವಾದರೆ ಮಾತ್ರ ಇಂದು (ಮೇ 29)ಬಿಡುಗಡೆಯಾರಿರುವ 'ಕಲಾಕಾರ್', 'ನನ್ನದೆಯ ಹಾಡು' ಮತ್ತು 'ಅಭಿಮಾನಿ' ಚಿತ್ರಗಳು ಮಲ್ಟಿಪ್ಲೆಕ್ಸ್ ಪ್ರೇಕ್ಷಕರನ್ನು ತಲುಪಲಿದೆ.
ಈ ವರ್ಷ ಬಿಡುಗಡೆಗೊಂಡ ಜಂಗ್ಲಿ, ಅಂಬಾರಿ, ಸವಾರಿ, ಜೋಷ್ ಚಿತ್ರಗಳು ಮಲ್ಟಿಪ್ಲೆಕ್ಸ್ ನಲ್ಲಿ ಉತ್ತಮ ಗಳಿಕೆ ಕಂಡಿರುವುದು ಗಮನಾರ್ಹ ಅಂಶ. ವಿಷಯ ಹೀಗಿದರೂ ಅತ್ತ ಮಲ್ಟಿಫ್ಲೆಕ್ಸ್ ಆಡಳಿತ ಮಂಡಳಿ ಇತ್ತ ಕನ್ನಡ ಚಿತ್ರೋದ್ಯಮ ಇಬ್ಬರೂ ಒಮ್ಮತಕ್ಕೆ ಬರಲು ಸಾಧ್ಯವಾಗುತ್ತಿಲ್ಲ. ಒಟ್ಟಿನಲ್ಲಿ ಇವರಿಬ್ಬರ ಜಗಳದಲ್ಲಿ ಮಲ್ಟಿಫ್ಲೆಕ್ಸ್, ಪಿವಿಆರ್ ಮತ್ತು ಇನ್ನೋಕ್ಸ್ ಗಳು ಕನ್ನಡ ಚಿತ್ರಗಳಿಲ್ಲದೆ ಬಿಕೋ ಎನ್ನುತ್ತಿವೆ.
(ದಟ್ಸ್ ಕನ್ನಡ ಚಿತ್ರವಾರ್ತೆ)