Don't Miss!
- News
ಆರ್ಥಿಕ ಸಂಕಷ್ಟದ ನಡುವೆಯೇ ಪಾಕಿಸ್ತಾನದಲ್ಲಿ ಮತ್ತೊಂದು ದುರಂತ: ಮಸೀದಿಯಲ್ಲಿ ಆತ್ಮಹುತಿ ದಾಳಿ- 46 ಸಾವು, 150 ಮಂದಿಗೆ ಗಾಯ
- Sports
IND W vs WI W: ಭಾರತದ ಉತ್ತಮ ಆಲ್ರೌಂಡ್ ಪ್ರದರ್ಶನ: ವೆಸ್ಟ್ ಇಂಡೀಸ್ ವಿರುದ್ಧ 8 ವಿಕೆಟ್ಗಳ ಭರ್ಜರಿ ಜಯ
- Lifestyle
ಜನವರಿ 30ಕ್ಕೆ ಶನಿ ಅಸ್ತ: 35 ದಿನದವರೆಗೆ ಈ 6 ರಾಶಿಯವರು ಹೆಚ್ಚು ಜಾಗ್ರತೆವಹಿಸಬೇಕು
- Finance
ಫೆಬ್ರವರಿ 1ರಿಂದ ಯಾವೆಲ್ಲ ಹಣಕಾಸು ನಿಯಮ ಬದಲಾವಣೆಯಾಗಲಿದೆ?
- Technology
ವಿದ್ಯಾರ್ಥಿಗಳೇ ಇಲ್ಲಿ ಗಮನಿಸಿ, ನೀವು Rank ಪಡೆಯಲು ಈ ಆಪ್ಗಳನ್ನು ಬಳಕೆ ಮಾಡಿ!
- Automobiles
ಭಾರತದಲ್ಲಿ ಅಬ್ಬರಿಸಲು ಬಿಡುಗಡೆಯಾಯ್ತು ಹೀರೋ Xoom 110 ಸ್ಕೂಟರ್: ಬೆಲೆ ರೂ.68,599...!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಅಣ್ಣಾಬಾಂಡ್ ವಿರುದ್ಧ 'ಕಠಾರಿ' ಬೀಸಿದ ಮುನಿರತ್ನ
ಏಪ್ರಿಲ್ ತಿಂಗಳಲ್ಲಿ ಎರಡು ಬಿಗ್ ಬಜೆಟ್ ಕನ್ನಡ ಚಿತ್ರಗಳು ಪ್ರೇಕ್ಷಕರ ಮುಂದೆ ಬರುತ್ತಿವೆ. ಒಂದು ಪುನೀತ್ ರಾಜ್ ಕುಮಾರ್ ಅಭಿನಯದ 'ಅಣ್ಣಾಬಾಂಡ್' ಹಾಗೂ ಇನ್ನೊಂದು ಉಪೇಂದ್ರ ಅಭಿನಯದ 'ಕಠಾರಿವೀರ ಸುರ ಸುಂದರಾಂಗಿ'. ಈ ಎರಡೂ ಚಿತ್ರಗಳು ಹೆಚ್ಚು ಕಡಿಮೆ ಒಂದೇ ವಾರದಲ್ಲಿ ಬಿಡುಗಡೆಯಾಗಲು ಸಜ್ಜಾಗಿವೆ.
'ಅಣ್ಣಾಬಾಂಡ್' ಚಿತ್ರದ ಬಿಡುಗಡೆ ಸಮಯದಲ್ಲೇ ತಮ್ಮ 'ಕಠಾರಿವೀರ' ಚಿತ್ರವನ್ನು ಮುನಿರತ್ನ ಬಿಡುಗಡೆ ಮಾಡುತ್ತಿರುವ ಹಕೀಕತ್ತೇನು? ಎಂಬ ಪ್ರಶ್ನೆಗೆ ಗಾಂಧಿನಗರದ ಗುಪ್ತಚರ ಇಲಾಖೆ ಕೊಡುವ ಉತ್ತರ ಹೀಗಿದೆ. ಅಣ್ಣಾವ್ರ ಕುಟುಂಬದ ಮೇಲಿನ ಹಳೆಯ ದ್ವೇಷವೇ ಇದಕ್ಕೆ ಕಾರಣ ಎನ್ನಲಾಗಿದೆ.
ಅದೇನೆಂದರೆ ನಿಖಿತಾ ಮೇಲೆ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ನಿಷೇಧ ಹೇರಿದ್ದರು. ಕೂಡಲೆ ರಾಜ್ ಕುಟುಂಬ ಮಧ್ಯಪ್ರವೇಶಿಸಿ ನೀವು ಮಾಡಿದ್ದು ತಪ್ಪು. ನಿಷೇಧವನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು. ಅವರ ಮಾತಿಗೆ ತಲೆಬಾಗಿದ್ದ ಮುನಿರತ್ನ ಬಳಿಕ ಕ್ಷಮೆ ಕೋರಿದ್ದರು.
ಇದೆಲ್ಲಾ ಹಳೆ ಘಟನೆ. ಡಾ.ರಾಜ್ ಕುಟುಂಬದ ಮೇಲಿನ ಈ ಹಳೆ ಸಿಟ್ಟನ್ನು ಈಗ ತೀರಿಸಿಕೊಳ್ಳಲು ಹೊರಟಿದ್ದಾರೆ ಮುನಿರತ್ನ ಎನ್ನಲಾಗಿದೆ. ತಮ್ಮ ಭಾರಿ ಬಜೆಟ್ನ (ರು.15 ಕೋಟಿ ಎನ್ನಲಾಗಿದೆ) 'ಕಠಾರಿವೀರ' ಚಿತ್ರವನ್ನು 'ಅಣ್ಣಾಬಾಂಡ್' (ರು.5 ಕೋಟಿ ಬಜೆಟ್) ಮೇಲೆ ಪ್ರಯೋಗಿಸಲು ಹೊರಟಿದ್ದಾರೆ ಎನ್ನುತ್ತವೆ ಮೂಲಗಳು. ಆದರೆ ಮುನಿರತ್ನ ಮಾತ್ರ ಈ ಮಾತುಗಳಿಗೆ ಕವಡೆ ಕಾಸಿನ ಕಿಮ್ಮತ್ತು ಕೊಡುತ್ತಿಲ್ಲ. (ಏಜೆನ್ಸೀಸ್)