Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರೈ'ಟ್ ಹೇಳಲು ಪ್ರಕಾಶ್ಗೆ ತೆಲುಗು ಚಿತ್ರರಂಗ ತಾಕೀತು
ಹೈದರಾಬಾದ್, ಮೇ 31 : ಕನ್ನಡ ಮೂಲದ ಬಹುಭಾಷಾ ನಟ ಪ್ರಕಾಶ್ ರಾಜ್(ಪ್ರಕಾಶ್ ರೈ) ಅವರಿಗೆ ತೆಲುಗು ಚಿತ್ರ ನಿರ್ಮಾಪಕರ ಸಂಘ ಮತ್ತೆ ನಿಷೇಧ ಹೇರಿದೆ. ದಕ್ಷಿಣ ಭಾರತದಲ್ಲಿ ಬಹುಬೇಡಿಕೆಯ ನಟನಾಗಿರುವ ಪ್ರಕಾಶ್ ರಾಜ್ ಇತ್ತೀಚಿನ ದಿನಗಳಲ್ಲಿ ನಟನೆಗಿಂತ ಇತರೆ ವಿಷಯಗಳ ಮೇಲೆ ಪ್ರಚಾರದಲ್ಲಿರುವುದು ವೃತ್ತಿ ಜೀವನ ಮೇಲೆ ವಿವಾದಗಳ ಕಾರ್ಮೋಡ ಕವಿದಿದೆ.
ಶುಕ್ರವಾರ ನಡೆದ ಚಲನಚಿತ್ರ ಕಲಾವಿದರ ಸಂಘ ಹಾಗೂ ನಿರ್ಮಾಪಕರ ಮಂಡಳಿಗಳ ಸಮನ್ವಯ ಸಮಿತಿ ಸಭೆಯಲ್ಲಿ ಪ್ರಕಾಶ್ ರಾಜ್ ಮೇಲೆ ನಿಷೇಧ ಹೇರುವ ನಿರ್ಧಾರವನ್ನು ಕೈಗೊಳ್ಳಲಾಯಿತು. ಚಿತ್ರೀಕರಣ ಸ್ಥಳಕ್ಕೆ ತಡವಾಗಿ ಬರುವುದು, ಕಾಲ್ಶೀಟ್ ನೀಡಿ ನಂತರ ಸತಾಯಿಸುವುದು ಸೇರಿದಂತೆ ಅನೇಕ ಆರೋಪಗಳು ಇವರ ಮೇಲಿವೆ. ಹೀಗಾಗಿ ಇನ್ನು ಮುಂದೆ ಪ್ರಕಾಶ್ ರಾಜ್ ಅವರ ನಟನೆಗೆ ಯಾವ ನಿರ್ಮಾಪಕರೂ ಕರೆಯುವಂತಿಲ್ಲ. ಈ ಸೂಚನೆ ಉಲ್ಲಂಘಿಸುವ ನಿರ್ಮಾಪಕರಿಗೆ ಚಿತ್ರೋಧ್ಯಮ ಸಹಕಾರ ನೀಡುವುದಿಲ್ಲ ಎಂದು ಸಮಿತಿ ಎಚ್ಚರಿಕೆ ನೀಡಿದೆ.
ಈ ಹಿಂದೆಯೂ ಕೂಡಾ ತೆಲುಗು ಚಿತ್ರ ನಿರ್ಮಾಪಕರ ಸಂಘ ಪ್ರಕಾಶ್ ರಾಜ್ ಅವರನ್ನು ನಿಷೇಧಿಸಿತ್ತು. ಆಗ ಅವರು ಉಪವಾಸ ಸತ್ಯಾಗ್ರಹ ನಡೆಸಿ ನಿಷೇಧ ಹಿಂಪಡೆಯುವಂತೆ ಮಾಡುವಲ್ಲಿ ಯಶಸ್ವಿಯಾಗಿದ್ದರು. ಆನಂತರ ತಮಿಳು ಚಿತ್ರರಂಗದಲ್ಲಿಯೂ ತೊಡಗಿಸಿಕೊಂಡಿದ್ದರು. ಇದರಿಂದ ತೆಲುಗು ಚಿತ್ರ ನಿರ್ಮಾಪಕರು ಹೇಳಿದ ಸಮಯಕ್ಕೆ ಬರಲು ಅವರಿಗೆ ಆಗುತ್ತಿರಲಿಲ್ಲ. ಈ ಕಾರಣದಿಂದ ಮತ್ತೆ ತೆಲುಗು ನಿರ್ಮಾಪಕರು ನಿಷೇಧ ಹೇರಿದ್ದಾರೆ. ಈ ಹಿನ್ನಲೆಯಲ್ಲಿ ಪ್ರಕಾಶ್ ರಾಜ್ ಮತ್ತೆ ಉಪವಾಸ ಸತ್ಯಾಗ್ರಹ ನಡೆಸುವ ಸಾಧ್ಯತೆಗಳಿವೆ. ತೆಲುಗು ನಿರ್ಮಾಪಕ ಸಂಘ ಹೇರಿರುವ ನಿಷೇಧ ಕುರಿತು ಪ್ರಕಾಶ್ ರಾಜ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
(ದಟ್ಸ್ಸಿನಿ ವಾರ್ತೆ)