Don't Miss!
- News IT Company: ಐಟಿ-ಬಿಟಿ ಕಂಪನಿಗಳಿಗೆ ಜಲಮಂಡಳಿಯ ನೀರಿನ ಭರವಸೆ
- Sports CSK vs RCB: ದಾಖಲೆಯ ಪುಟ ಸೇರಿದ ಉದ್ಘಾಟನಾ ಪಂದ್ಯ: 16.8 ಕೋಟಿ ಜನರಿಂದ ವೀಕ್ಷಣೆ
- Finance ಮೃತರ ಖಾತೆಯಲ್ಲಿರುವ ಹಣವನ್ನು ಕುಟುಂಬಸ್ಥರು ಡ್ರಾ ಮಾಡಬಹುದಾ, ಬ್ಯಾಂಕ್ ನಿಯಮಾವಳಿ ಏನು ಹೇಳುತ್ತೆ?
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Lifestyle ಬಾಯಲ್ಲಿ ನೀರು ತರಿಸುವ ಮಾವಿನ ಕಾಯಿ ಚಟ್ನಿ..! 5 ನಿಮಿಷದಲ್ಲಿ ರೆಡಿ..!
- Technology Motorola: ಮೊಟೊರೊಲಾ ಎಡ್ಜ್ 50 ಅಲ್ಟ್ರಾ ಸ್ಮಾರ್ಟ್ಫೋನ್ ಫೀಚರ್ಸ್ ಲೀಕ್! ವಿಶೇಷತೆ ಏನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಂಕರ್ ಐಪಿಎಸ್ ವಿವಾದಿತ ದೃಶ್ಯಗಳಿಗೆ ಕತ್ತರಿ
'ಶಂಕರ್ ಐಪಿಎಸ್' ಚಿತ್ರಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯ ಚಿತ್ರದಲ್ಲಿನ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿದೆ. ಅಷ್ಟೇ ಅಲ್ಲದೆ ಮಾಧ್ಯಮಗಳ ಮುಂದೆ ಕ್ಷಮೆ ಕೋರುವಂತೆ ನಿರ್ಮಾಪಕರಿಗೆ ನ್ಯಾಯಾಲಯ ಸೋಮವಾರ ಆದೇಶಿಸಿದೆ.
ಶಂಕರ್ ಐಪಿಎಸ್ ಚಿತ್ರದಲ್ಲಿ ವಕೀಲರು ಹಾಗೂ ನ್ಯಾಯಾಂಗ ವ್ಯವಸ್ಥೆ ಬಗ್ಗೆ ಅವಹೇಳನಕಾರಿ ಸಂಭಾಷಣೆಗಳಿವೆ. ವಕೀಲರನ್ನು ದಲ್ಲಾಳಿಗಳು, ಬ್ರೋಕರ್ ಗಳು ಹಾಗೂ ನ್ಯಾಯಾಲಗಳನ್ನು ಮಾರುಕಟ್ಟೆಗಳು ಎಂದು ಅಗೌರವಯುತವಾಗಿ ಮಾತನಾಡಲಾಗಿದೆ ಎಂದು ಆರೋಪಿಸಿ ವಕೀಲರ ಸಂಘ ನ್ಯಾಯಾಲಯದಲ್ಲಿ ದಾವಾ ಹೂಡಲಾಗಿತ್ತು. ಈ ಸಂಬಂಧ ಚಿತ್ರ ಪ್ರದರ್ಶನಕ್ಕೆ ಕೋರ್ಟ್ ಜೂನ್ 5ರವರೆಗೂ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.
ಇಂದು ವಿಚಾರಣೆ ವೇಳೆ ಚಿತ್ರದ ನಿರ್ಮಾಪಕರಾದ ಕೆ ಮಂಜು ನ್ಯಾಯಾಲಯದಲ್ಲಿ ತಪ್ಪೊಪ್ಪಿಕೊಂಡಿದ್ದರು. ಚಿತ್ರದಲ್ಲಿನ ವಿವಾದಿತ ದೃಶ್ಯಗಳಿಗೆ ಕತ್ತರಿ ಹಾಕುವುದಾಗಿ ಕೋರ್ಟ್ ಗೆ ತಿಳಿಸಿದ್ದರು. ವಿವಾದಿತ ದೃಶ್ಯಗಳಿಗೆ ಕೇವಲ ಕತ್ತರಿ ಹಾಕುವುದಷ್ಟೇ ಅಲ್ಲ ಮಾಧ್ಯಮಗಳ ಮುಂದೆ ಕ್ಷಮೆ ಕೋರುವಂತೆ ಕೋರ್ಟ್ ಆದೇಶಿಸಿದೆ.
ಶಂಕರ್ ಐಪಿಎಸ್ ಚಿತ್ರ ಈಗಾಗಲೆ ಪ್ರದರ್ಶನಗೊಳ್ಳುತ್ತಿದ್ದು ಮುಂಬರುವ ಎರಡು ಮೂರು ದಿನಗಳಲ್ಲಿ ವಿವಾದಿತ ದೃಶ್ಯಗಳಿಗೆ ಕತ್ತರಿ ಬೀಳಲಿದೆ. ಚಿತ್ರವನ್ನು ಪರಿಶೀಲಿಸಲು ವಕೀಲರಿಂದ ಇಂದು ಸಂಜೆ ಶಂಕರ್ ಐಪಿಎಸ್ ಚಿತ್ರದ ವೀಕ್ಷಣೆ ಮಲ್ಲೇಶ್ವರ ರೇಣುಕಾಂಬ ಚಿತ್ರಮಂದಿರದಲ್ಲಿ ನಡೆಯಲಿದೆ.