Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶರ್ಮಿಳಾ ಮಾಂಡ್ರೆಗೆ ಬಯಸದೆ ಬಂದ ಭಾಗ್ಯ
ಮಲ್ಲು ಬೆಡಗಿ ಪಾರ್ವತಿ ಮೆನನ್ ಒಪ್ಪಿದ್ದರೆ 'ಧನ್ ಧನಾ ಧನ್' ಚಿತ್ರ ಆಕೆಯ ಖಾತೆಗೆ ಜಮೆಯಾಗುತ್ತಿತ್ತು. ಆದರೆ ಬಿಲ್ ಕುಲ್ ಅಂದ್ರು ಆಕೆ 'ಧನ್ ಧನಾ ಧನ್' ಚಿತ್ರದ ಪಾತ್ರವನ್ನು ಒಪ್ಪಿಲ್ಲ. ಮೆನನ್ ಸ್ಥಾನ ಮತ್ತೊಬ್ಬ ಬೆಡಗಿ ಶರ್ಮಿಳಾ ಮಾಂಡ್ರೆ ಪಾಲಾಗಿದೆ.
ನಾಯಕಿ ಪ್ರಧಾನ ಪಾತ್ರವಾದರೆ ಮಾತ್ರ ಬಣ್ಣ ಹಚ್ಚುತ್ತೇನೆ ಎಂದು ಮೆನನ್ ಪಟ್ಟುಹಿಡಿದಿದ್ದರಂತೆ. ಆದರೆ ಆಕೆ ಬಯಸಿದ ಪಾತ್ರ ಇದಾಗದ ಕಾರಣ ಕಡೆಗೂ ಆಕೆಯಿಂದ ನಿರೀಕ್ಷಿತ ಉತ್ತರ ಬರಲಿಲ್ಲವಂತೆ. ಇನ್ನು ಕಾಯುವುದರಲ್ಲಿ ಅರ್ಥವಿಲ್ಲ ಎಂದು ಅರಿತ ಚಿತ್ರದ ನಿರ್ಮಾಪಕರು ಶರ್ಮಿಳಾ ಮಾಂಡ್ರೆಗೆ ಅವಕಾಶ ಕೊಟ್ಟಿದ್ದಾರೆ. ಹಾಗಂತ ರಿಹಾನ್ ಎಂಟರ್ಪ್ರೈಸಸ್ನ ಖಮ್ಮಾರ್ ವಿವರ ನೀಡಿದ್ದಾರೆ.
ಈ ಚಿತ್ರದ ನಾಯಕ ನಟ್ ಲವ್ಲಿ ಸ್ಟಾರ್ ಪ್ರೇಮ್ಕುಮಾರ್. ಇದೊಂದು ಬಹುತಾರಾಗಣದ ಚಿತ್ರವಾಗಿದ್ದು, ಶಶಿಕುಮಾರ್, ಕಿಶೋರ್, ರವಿಶಂಕರ್, ಆದಿ ಲೋಕೇಶ್ ಕೂಡ ಚಿತ್ರದಲ್ಲಿದ್ದಾರೆ. ಈಗಾಗಲೆ ಎರಡನೇ ಹಂತದ ಚಿತ್ರೀಕರಣ ಶುರುವಾಗಿದೆ. ಚಿತ್ರದ ಹಾಡುಗಳನ್ನು ಪ್ಯಾರಿಸ್ನಲ್ಲಿ ಚಿತ್ರೀಕರಿಸುವ ಯೋಜನೆ 'ಧನ್ ಧನಾ ಧನ್' ಚಿತ್ರತಂಡಕ್ಕಿದೆ.
ಪಾರ್ವತಿ ಮೆನನ್ ಜೊತೆಗೆ ಚಿತ್ರದ ನಿರ್ದೇಶಕ ವಿಕ್ಟರಿ ವಾಸು ಕೂಡ 'ಧನ್ ಧನಾ ಧನ್' ಚಿತ್ರದಿಂದ ಹೊರಬಿದ್ದಿದ್ದಾರೆ. ಈಗ 'ಬುದ್ಧಿವಂತ' ನಿರ್ದೇಶಕ ರಾಮನಾಥ್ ರಿಗ್ವೇದಿ ಆಕ್ಷನ್, ಕಟ್ನಲ್ಲಿ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಒಟ್ಟಿನಲ್ಲಿ ಅತ್ತ ಶರ್ಮಿಳಾ ಮಾಂಡ್ರೆ ಇತ್ತ ರಿಗ್ವೇದಿ ಇಬ್ಬರಿಗೂ ಇದು ಬಯಸದೇ ಬಂದ ಭಾಗ್ಯ! [ಪಾರ್ವತಿ ಮೆನನ್]