Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಂಠೀರವನಿಗಾಗಿ ಶುಭಾ ಪೂಂಜಾ 'ಪುತ್ರ' ತ್ಯಾಗ
'ಪುತ್ರ' ಚಿತ್ರದಿಂದ ನಟಿ ಶುಭಾ ಪೂಂಜಾ ಹೊರಬಿದ್ದಿದ್ದಾರೆ. ಆಕೆಯ ಸ್ಥಾನಕ್ಕೆ 'ಅಂಬಾರಿ'ಖ್ಯಾತಿಯ ಸುಪ್ರೀತಾರನ್ನು ನಾಯಕಿಯಾಗಿ ಆಯ್ಕೆ ಮಾಡಲಾಗಿದೆ. ಈ ಚಿತ್ರಕ್ಕೆ ಕೆಲ ದಿನಗಳ ಕಾಲ ಚಿತ್ರೀಕರಣವನ್ನು ನಡೆಸಲಾಗಿತ್ತು. ವಿ ಉಮಾಕಾಂತ್ ನಿರ್ದೇಶಿಸುತ್ತಿರುವ ಚಿತ್ರ ಇದಾಗಿದೆ.
ಕೆಲ ದಿನಗಳ ಚಿತ್ರೀಕರಣದ ಬಳಿಕ ಕಾರಣಾಂತರಗಳಿಂದ 'ಪುತ್ರ' ಚಿತ್ರೀಕರಣ ನಿಂತು ಹೋಗಿತ್ತು. ಚಿತ್ರದ ತಾರಾಗಣದಲ್ಲಿ ದಿಗಂತ್ ಗೆ ಜೊತೆಯಾಗಿ ಶುಭಾ ಪೂಂಜಾ ಆಯ್ಕೆಯಾಗಿದ್ದರು. ಇದೀಗ ಇದ್ದಕ್ಕಿದ್ದಂತೆ ಶುಭಾ ಪೂಂಜಾ ಜಾಗಕ್ಕೆ ಸುಪ್ರೀತಾರನ್ನು ಆಯ್ಕೆ ಮಾಡಲಾಗಿದೆ. ಇದಕ್ಕೆ ಕಾರಣಗಳೇನು ಎಂಬುದು ನಿಗೂಢವಾಗಿವೆ.
ಶುಭಾ ಪೂಂಜಾ ಸದ್ಯಕ್ಕೆ ವಿಜಯ್ ನಾಯಕ ನಟನಾಗಿರುವ 'ಕಂಠೀರವ' ಚಿತ್ರದಲ್ಲಿ ಬ್ಯ್ಯುಸಿಯಾಗಿದ್ದಾರೆ. ಒಂದೆರಡು ತಿಂಗಳ ವಿರಾಮದ ಬಳಿಕ 'ಪುತ್ರ' ಚಿತ್ರ ಇದೀಗ ಮತ್ತೆ ಕೈಗೆತ್ತಿಕೊಳ್ಳಲಾಗಿದೆ. ಪುತ್ರ ಚಿತ್ರಕ್ಕಾಗಿ ಬಹಳ ದಿನಗಳಿಂದ ನಿರೀಕ್ಷಿಸಿದ್ದೇ ಆಯ್ತು. ಬಳಿಕ ತಮಗೆ 'ಕಂಠೀರವ' ಚಿತ್ರದಲ್ಲಿ ಅವಕಾಶ ಬಂತು. ವಿಧಿಯಿಲ್ಲದೆ ಚಿತ್ರವನ್ನು ಕೈಬಿಡಬೇಕಾಯಿತು ಎಂದು ಶುಭಾ ಪೂಂಜಾ ಪ್ರತಿಕ್ರಿಯಿಸಿದ್ದಾರೆ.