Don't Miss!
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆ.1ರಿಂದ ಹೊಸ ಚಿತ್ರ ಪ್ರದರ್ಶನವಿಲ್ಲ -ಪ್ರದರ್ಶಕರ ಬೆದರಿಕೆ
ಬೆಂಗಳೂರು : ನಿರ್ಮಾಪಕರ ಪ್ರತಿಭಟನೆಯ ನೆನಪು ಇನ್ನೂ ಹಸಿಯಾಗಿರುವಾಗಲೇ ಸ್ಯಾಂಡಲ್ವುಡ್ನಲ್ಲಿ ಮತ್ತೊಂದು ಪ್ರತಿಭಟನೆಗೆ ಕಪ್ಪು ಬಾವುಟ ಸಿದ್ಧವಾಗುತ್ತಿದೆ. ಈ ಬಾರಿ ಪ್ರತಿಭಟನೆಯ ಪಾಳಿ ಥಿಯೇಟರ್ಗಳ ಮಾಲೀಕರದು.
ಸೇವಾಶುಲ್ಕ ರದ್ದುಪಡಿಸಿರುವ ಸರ್ಕಾರದ ನಿರ್ಧಾರದ ವಿರುದ್ಧ ಅಸಮಾಧಾನಗೊಂಡಿರುವ ಕರ್ನಾಟಕ ಚಲನಚಿತ್ರ ಪ್ರದರ್ಶಕರು ಆಗಸ್ಟ್ 1ರ ಶುಕ್ರವಾರದಿಂದ ಕನ್ನಡ ಸೇರಿದಂತೆ ಯಾವುದೇ ಭಾಷೆಯ ಚಿತ್ರವನ್ನು ಪ್ರದರ್ಶನ ಮಾಡದಿರಲು ನಿರ್ಧರಿಸಿದ್ದಾರೆ.
ಸರ್ಕಾರದ ಮುಂದೆ 12 ಅಂಶಗಳ ಬೇಡಿಕೆಯ ಪಟ್ಟಿಯಿಟ್ಟಿರುವ ಕರ್ನಾಟಕ ಚಲನಚಿತ್ರ ಪ್ರದರ್ಶಕರ ಮಹಾಮಂಡಲ, ತಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ಹೊಸ ಚಿತ್ರಗಳನ್ನು ಪ್ರದರ್ಶಿಸುವುದಿಲ್ಲವೆಂದು ಬೆದರಿಕೆ ಒಡ್ಡಿದೆ. ಆಗಸ್ಟ್ 1ರಿಂದ ಯಾವುದೇ ಹೊಸ ಚಿತ್ರ ಪ್ರದರ್ಶಿಸುವುದಿಲ್ಲ ಎಂದು ಮಹಾ ಮಂಡಲದ ಸಮಿತಿ ಗುರುವಾರ ಸಭೆ ಸೇರಿ ತೀರ್ಮಾನ ಕೈಗೊಂಡಿದೆ.
ಸೇವಾಶುಲ್ಕ ರದ್ದುಪಡಿಸಿರುವುದರಿಂದ ಥಿಯೇಟರ್ಗಳು ಅಳಿವು ಉಳಿವಿನ ಪ್ರಶ್ನೆ ಎದುರಿಸುತ್ತಿವೆ. ಟೀವಿ, ಕೇಬಲ್ಗಳಿಂದಾಗಿ ಈಗಾಗಲೇ ಪ್ರೇಕ್ಷಕರು ಸಿನಿಮಾ ಮಂದಿರಗಳಿಗೆ ಬರುತ್ತಿಲ್ಲ . ಇಂಥ ಸಂದರ್ಭದಲ್ಲಿ ಸೇವಾಶುಲ್ಕವನ್ನು ಏಕಾಏಕಿ ರದ್ದುಪಡಿಸಿರುವ ಸರ್ಕಾರದ ನಿರ್ಧಾರ ಥಿಯೇಟರ್ಗಳಿಗೆ ಮೃತ್ಯುಪ್ರಾಯವಾಗಿದೆ ಎಂದು ಸಭೆ ಅಭಿಪ್ರಾಯಪಟ್ಟಿದೆ.
(ಇನ್ಫೋ ವಾರ್ತೆ)
ಮುಖಪುಟ / ಸ್ಯಾಂಡಲ್ವುಡ್