ಭೀಮಾ ತೀರದಲ್ಲಿ ನಿರ್ಮಾಪಕರಿಗೆ ರವಿ ಬೆಳಗೆರೆ ಆವಾಜ್

By Rajendra

'ಭೀಮಾ ತೀರದಲ್ಲಿ' ಚಿತ್ರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ಕೃತಿ 'ಭೀಮಾ ತೀರದ ಹಂತಕರು' ಕತೆಯನ್ನು ಕದ್ದು ಚಿತ್ರವನ್ನು ತೆರೆಗೆ ತಂದಿದ್ದಾರೆ ಎಂದು 'ಹಾಯ್ ಬೆಂಗಳೂರು' ವಾರ ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ನೇರಾನೇರವಾಗಿ ಆರೋಪಿಸಿದ್ದಾರೆ. 'ಟಿವಿ 9' ಕನ್ನಡ ಸುದ್ದಿವಾಹಿನಿ ಶನಿವಾರ ಮಧ್ಯಾಹ್ನ (ಏ.7) ಪ್ರಸಾರ ಮಾಡಿದ ವಿಶೇಷ ವರದಿಯ ಹೈಲೈಟ್ಸ್ ಹೀಗಿವೆ.

ತಮ್ಮ ಕೃತಿಯನ್ನು ಕದ್ದು ಚಿತ್ರವನ್ನು ತೆರೆಗೆ ತಂದಿದ್ದಾರೆ. ಆದರೆ ಚಿತ್ರದಲ್ಲಿ ತಮಗೆ ಕನಿಷ್ಠ ಪಕ್ಷ ಯಾವುದೇ ಕೃತಜ್ಞತೆಗಳನ್ನು ತಿಳಿಸಿಲ್ಲ. ಚಿತ್ರವನ್ನು ತೆರೆಗೆ ತರುವುದಕ್ಕೂ ಮುನ್ನ ನಿರ್ಮಾಪಕರಾಗಲಿ, ನಿರ್ದೇಶಕರಾಗಲಿ ನಮ್ಮನ್ನು ಒಮ್ಮೆಯೂ ಸಂಪರ್ಕಿಸಿಲ್ಲ. ಅಣಜಿ ನಾಗರಾಜ್ ಅವರಂತಹ 'ಅವಿವೇಕಿ' ಇನ್ನೊಬ್ಬನಿಲ್ಲ ಎಂದು ರವಿ ಬೆಳಗೆರೆ ತರಾಟೆಗೆ ತೆಗೆದುಕೊಂಡರು.

ಆದರೆ ಈ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಅವರು ಟಿವಿ 9 ಸ್ಟುಡಿಯೋದಲ್ಲಿ ಮುಗುಮ್ಮಾಗಿ ಕುಳಿತು ರವಿ ಬೆಳಗೆರೆ ಅವರ ಯಾವುದೇ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವಲ್ಲಿ ವಿಫಲರಾದರು. ಅಣಜಿ ಮೇಲೆ ರವಿ ಬೆಳಗೆರೆ ಮಾತಿನ ಚಾಟಿ ಬೀಸಿ ಹಿಗ್ಗಾಮುಗ್ಗಾ ಜಡಿದರು. (ಒನ್‌ಇಂಡಿಯಾ ಕನ್ನಡ)

More from Filmibeat

English summary
Kannada film Bheema Theeradalli has come under a plagiarism row as a noted Kannada journalist Ravi Belagere has claimed that the movie was stolen from his book Bheema Theeradalli says TV9 Kannada live report on Bheema Theeradalli controversy.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X