Don't Miss!
- Sports IPL 2024: ಸೋತು ಸುಣ್ಣವಾದರೂ ಪಾರ್ಟಿ ಮಾಡಿದ ಆರ್ಸಿಬಿ ಪ್ಲೇಯರ್ಸ್; ಕೊಹ್ಲಿ ವಿರುದ್ಧ ರೊಚ್ಚಿಗೆದ್ದ ಫ್ಯಾನ್ಸ್
- News ನೇಹಾ ಹತ್ಯೆ: ಸಾವಿನ ಮನೆಯಲ್ಲಿ ರಾಜಕಾರಣ ಸರಿಯಲ್ಲ, 90 ದಿನದಲ್ಲಿ ನ್ಯಾಯ ಸಿಗಲಿದೆ: ಸುರ್ಜೇವಾಲ
- Automobiles Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀಮಾ ತೀರದಲ್ಲಿ ನಿರ್ಮಾಪಕರಿಗೆ ರವಿ ಬೆಳಗೆರೆ ಆವಾಜ್
'ಭೀಮಾ ತೀರದಲ್ಲಿ' ಚಿತ್ರದ ವಿವಾದ ಹೊಸ ತಿರುವು ಪಡೆದುಕೊಂಡಿದೆ. ತಮ್ಮ ಕೃತಿ 'ಭೀಮಾ ತೀರದ ಹಂತಕರು' ಕತೆಯನ್ನು ಕದ್ದು ಚಿತ್ರವನ್ನು ತೆರೆಗೆ ತಂದಿದ್ದಾರೆ ಎಂದು 'ಹಾಯ್ ಬೆಂಗಳೂರು' ವಾರ ಪತ್ರಿಕೆ ಸಂಪಾದಕ ರವಿ ಬೆಳೆಗೆರೆ ನೇರಾನೇರವಾಗಿ ಆರೋಪಿಸಿದ್ದಾರೆ. 'ಟಿವಿ 9' ಕನ್ನಡ ಸುದ್ದಿವಾಹಿನಿ ಶನಿವಾರ ಮಧ್ಯಾಹ್ನ (ಏ.7) ಪ್ರಸಾರ ಮಾಡಿದ ವಿಶೇಷ ವರದಿಯ ಹೈಲೈಟ್ಸ್ ಹೀಗಿವೆ.
ತಮ್ಮ ಕೃತಿಯನ್ನು ಕದ್ದು ಚಿತ್ರವನ್ನು ತೆರೆಗೆ ತಂದಿದ್ದಾರೆ. ಆದರೆ ಚಿತ್ರದಲ್ಲಿ ತಮಗೆ ಕನಿಷ್ಠ ಪಕ್ಷ ಯಾವುದೇ ಕೃತಜ್ಞತೆಗಳನ್ನು ತಿಳಿಸಿಲ್ಲ. ಚಿತ್ರವನ್ನು ತೆರೆಗೆ ತರುವುದಕ್ಕೂ ಮುನ್ನ ನಿರ್ಮಾಪಕರಾಗಲಿ, ನಿರ್ದೇಶಕರಾಗಲಿ ನಮ್ಮನ್ನು ಒಮ್ಮೆಯೂ ಸಂಪರ್ಕಿಸಿಲ್ಲ. ಅಣಜಿ ನಾಗರಾಜ್ ಅವರಂತಹ 'ಅವಿವೇಕಿ' ಇನ್ನೊಬ್ಬನಿಲ್ಲ ಎಂದು ರವಿ ಬೆಳಗೆರೆ ತರಾಟೆಗೆ ತೆಗೆದುಕೊಂಡರು.
ಆದರೆ ಈ ಬಗ್ಗೆ ನಿರ್ಮಾಪಕ ಅಣಜಿ ನಾಗರಾಜ್ ಅವರು ಟಿವಿ 9 ಸ್ಟುಡಿಯೋದಲ್ಲಿ ಮುಗುಮ್ಮಾಗಿ ಕುಳಿತು ರವಿ ಬೆಳಗೆರೆ ಅವರ ಯಾವುದೇ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡುವಲ್ಲಿ ವಿಫಲರಾದರು. ಅಣಜಿ ಮೇಲೆ ರವಿ ಬೆಳಗೆರೆ ಮಾತಿನ ಚಾಟಿ ಬೀಸಿ ಹಿಗ್ಗಾಮುಗ್ಗಾ ಜಡಿದರು. (ಒನ್ಇಂಡಿಯಾ ಕನ್ನಡ)