Don't Miss!
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- News Siddaramaiah: ಹುಬ್ಬಳ್ಳಿಯ ನೇಹಾ ಹಿರೇಮಠ ನಿವಾಸಕ್ಕೆ ಸಿಎಂ ಭೇಟಿ: ಸಿದ್ದರಾಮಯ್ಯ ಕೊಟ್ಟ ಭರವಸೆ ಏನು?
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಸಿದ್ಧರಾಮಯ್ಯ ಪರವಾಗಿ ಕಿಚ್ಚ ಸುದೀಪ್ ಚುನಾವಣಾ ಪ್ರಚಾರ ?
Recommended Video
ಕನ್ನಡ ಚಿತ್ರರಂಗದ ಕೆಲವು ನಟರು ತಾವೇ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದರೆ, ಇನ್ನೂ ಕೆಲವು ನಟರು ತಮ್ಮ ಮೆಚ್ಚಿನ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡುತ್ತಿದ್ದಾರೆ. ಸದ್ಯ ಕನ್ನಡದ ಮತ್ತೊಬ್ಬ ನಟ ಸುದೀಪ್ ಕೂಡ ಚುನಾವಣಾ ಕಣಕ್ಕೆ ದುಮುಕಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿ ಎಂ ಸಿದ್ಧರಾಮಯ್ಯ ಈ ಬಾರಿ ಎರಡು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. ಬಾದಾಮಿ ಮತ್ತು ಚಾಮುಂಡೇಶ್ವರಿ ಕ್ಷೇತ್ರದಿಂದ ಅದೃಷ್ಟ ಪರೀಕ್ಷೆಗೆ ಇಳಿದಿರುವ ಮುಖ್ಯಮಂತ್ರಿಗಳ ಪರವಾಗಿ ಸುದೀಪ್ ಪ್ರಚಾರ ಮಾಡಲಿದ್ದಾರೆ ಎಂಬ ಮಾಹಿತಿ ಇದೆ. ಸುದೀಪ್ ಮತ್ತು ಸಿದ್ಧರಾಮಯ್ಯ ಇಬ್ಬರ ನಡುವೆ ಒಳ್ಳೆಯ ಒಡನಾಟ ಇದ್ದು, ಚುನಾವಣಾ ಪ್ರಚಾರದ ಮೂಲಕ ಅದು ಮುಂದುವರೆಯುತ್ತಿದೆ.
ಯಾವ ನಟ-ನಟಿ, ಯಾರ ಪರ ಎಲ್ಲೆಲ್ಲಿ ಪ್ರಚಾರ ಮಾಡಿದ್ರು.?
ಈ ಹಿಂದೆ ಅನೇಕ ಬಾರಿ ಬೇರೆ ಬೇರೆ ಕಾರಣಕ್ಕೆ ಸಿದ್ಧರಾಮಯ್ಯ ಅವರನ್ನು ಬೇಟಿ ಮಾಡಿದ್ದ ಸುದೀಪ್ ಈಗ ಅವರಿಗಾಗಿ ಚುನಾವಣಾ ಪ್ರಚಾರ ಮಾಡಲಿದ್ದಾರಂತೆ. ಇನ್ನು ಸಾಕಷ್ಟು ಬಾರಿ ಸುದೀಪ್ ರಾಜಕೀಯಕ್ಕೆ ಬರುತ್ತಾರೆ ಎಂಬ ಸುದ್ದಿ ಇತ್ತು, ಆದರೆ ಅವರು ಸ್ಪಷ್ಟವಾಗಿ ರಾಜಕೀಯದ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ. ಸಿದ್ಧರಾಮಯ್ಯ ಅವರ ಜೊತೆಗೆ ತಮ್ಮ ಆಪ್ತರಾಗಿರುವ ಸುರಪುರದ ಬಿಜೆಪಿ ಅಭ್ಯರ್ಥಿ ರಾಜೂಗೌಡ ಅವರಿಗಾಗಿ ಸಹ ಕಿಚ್ಚ ಮತಯಾಚನೆ ಮಾಡಲಿದ್ದಾರಂತೆ.
ಅಂದಹಾಗೆ, ಸುದೀಪ್ ಹೊರತಾಗಿ ನಟ ಯಶ್ ಕೂಡ ಚುನಾವಣಾ ಪ್ರಚಾರದಲ್ಲಿ ಬಿಜಿ ಇದ್ದಾರೆ. ಉಳಿದಂತೆ, ಲೂಸ್ ಮಾದ ಯೋಗೀಶ್, ನಟಿ ಮಯೂರಿ, ನಿಖಿಲ್ ಕುಮಾರ್, ಪೂಜಾ ಗಾಂಧಿ, ಸಾಧುಕೋಕಿಲ, 'ತಿಥಿ' ಖ್ಯಾತಿಯ ಸೆಂಚುರಿ ಗೌಡ ಸಹ ಚುನಾವಣಾ ಪ್ರಚಾರಕ್ಕೆ ತಾರ ಮೆರಗು ನೀಡಿದ್ದಾರೆ.