Don't Miss!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Finance Lok Sabha Election 2024: ಮತದಾನ ಮಾಡಿ ಹೋಟೆಲ್ಗಳಲ್ಲಿ ಫ್ರೀಯಾಗಿ, ರಿಯಾಯಿತಿಯಲ್ಲಿ ಟಿಫನ್ ತಿನ್ನಿ!
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ 'ಕುರುಕ್ಷೇತ್ರ'ಕ್ಕೆ ಆರ್ಮುಗ ರವಿಶಂಕರ್ ಎಂಟ್ರಿ.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲಿರುವ 50ನೇ ಚಿತ್ರ 'ಕುರುಕ್ಷೇತ್ರ' ಇದೇ ಭಾನುವಾರ (ಆಗಸ್ಟ್ 6) ಅದ್ಧೂರಿಯಾಗಿ ಶುರುವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುನಿರತ್ನ ನಿರ್ಮಾಣ ಮಾಡುತ್ತಿರುವ ಈ ಪೌರಾಣಿಕ ಸಿನಿಮಾಗೆ ಚಾಲನೆ ನೀಡಲಿದ್ದಾರೆ.
ಈ ಮಧ್ಯೆ 'ಕುರುಕ್ಷೇತ್ರ' ಚಿತ್ರದ ಪಾತ್ರಗಳು ಅಂತಿಮವಾಗಿದೆಯಾ ಎಂಬ ಪ್ರಶ್ನೆ ಕಾಡಿದೆ. ಮೂಲಗಳ ಪ್ರಕಾರ 'ಕುರುಕ್ಷೇತ್ರ'ದ ಬಹುತೇಕ ಪಾತ್ರಗಳು ಆಯ್ಕೆಯಾಗಿದ್ದು, ಕಲಾವಿದರ ಪಟ್ಟಿ ಸಿದ್ದವಾಗಿದೆಯಂತೆ. ಹೀಗಾಗಿ, ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಕನ್ನಡದ ಖ್ಯಾತ ಖಳನಟ ರವಿಶಂಕರ್ ಕೂಡ 'ಕುರುಕ್ಷೇತ್ರ' ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ ಎನ್ನಲಾಗಿದೆ.
ಎಕ್ಸ್ ಕ್ಲೂಸಿವ್: 'ದುರ್ಯೋಧನ'ನಾಗಿ ದರ್ಶನ್ ದರ್ಶನ
ರವಿಶಂಕರ್ ಅಭಿಮಾನಿಗಳು ಮೊದಲೇ ಇದನ್ನ ನಿರೀಕ್ಷೆ ಮಾಡಿದ್ದರು. ಈ ಸುದ್ದಿ ಯಾವಾಗ ಅಧಿಕೃತವಾಗಿ ಹೊರಬೀಳಲಿದೆ ಎಂದು ಕಾಯುತ್ತಿದ್ದಾರೆ. ಹೀಗಿರುವಾಗ, 'ಕುರುಕ್ಷೇತ್ರ' ಚಿತ್ರದ ಆಹ್ವಾನ ಪತ್ರಿಕೆಯಲ್ಲಿ ಪಾತ್ರಧಾರಿಗಳ ಫೋಟೋಗಳು ಬಹಿರಂಗವಾಗಿದೆ. ಈ ಪಟ್ಟಿಯಲ್ಲಿ ರವಿಶಂಕರ್ ಅವರ ಫೋಟೋ ಕೂಡ ಇದೆ.
'ಕುರುಕ್ಷೇತ್ರ' ಅಖಾಡಕ್ಕೆ ಕಾಲಿಟ್ಟ 'ಅರ್ಜುನ' ಯಾರು?
ಹಾಗಿದ್ರೆ, ರವಿಶಂಕರ್ ಅವರದ್ದು, 'ಕುರುಕ್ಷೇತ್ರ' ಚಿತ್ರದಲ್ಲಿ ಯಾವ ಪಾತ್ರ ಎಂಬ ಕುತೂಹಲ ಹೆಚ್ಚಾಗಿದೆ. ಅದಕ್ಕೆ ಈಗ ಉತ್ತರ ಸಿಕ್ಕಿಲ್ಲ. ಉಳಿದಂತೆ ಅರ್ಜುನ್ ಸರ್ಜಾ, ಸಾಯಿಕುಮಾರ್, ನಿಖಿಲ್ ಕುಮಾರ್, ನಟಿ ಸ್ನೇಹ, ಹರಿಪ್ರಿಯಾ, ರೆಜಿನಾ, ಲಕ್ಷ್ಮಿ, ರವಿಚಂದ್ರನ್, ಅಂಬರೀಶ್ ಸೇರಿದಂತೆ ಹಲವರು 'ಕುರುಕ್ಷೇತ್ರ'ದಲ್ಲಿ ಅಭಿನಯಿಸಲಿದ್ದಾರೆ.
'ಕುರುಕ್ಷೇತ್ರ' ಚಿತ್ರವನ್ನ ಶಿವಣ್ಣ ರಿಜೆಕ್ಟ್ ಮಾಡಲು ಅಸಲಿ ಕಾರಣ ಬಹಿರಂಗ.!
ಸದ್ಯ, ದರ್ಶನ್ ಅವರ ದುರ್ಯೋಧನನ ಗೆಟಪ್ ಮಾತ್ರ ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಉಳಿದ ಪಾತ್ರಧಾರಿಗಳ ಅಸಲಿ ಗೆಟಪ್ ಗೌಪ್ಯವಾಗಿಟ್ಟಿದ್ದಾರೆ. ಉಳಿದ ಎಲ್ಲ ನಿರೀಕ್ಷೆಗಳಿಗೆ ಆಗಸ್ಟ್ 6 ರಂದು ತೆರೆ ಬೀಳಲಿದ್ದು, ಅಲ್ಲಿಯವರೆಗೂ ಈ ನಿರೀಕ್ಷೆ ಹಾಗೆ ಇರಲಿ....