Don't Miss!
- News ಈ ವರ್ಷ ಜಗತ್ತಿನಲ್ಲಿ ಒಳ್ಳೆಯದಕ್ಕಿಂತ ಕೆಟ್ಟದ್ದೇ ಕೇಳೋದು ಬಹಳ ಐತಿ; ಮಳೆ,ಬೆಳೆಯ ಕುರಿತು ಬಸವೇಶ್ವರ ಕಾರ್ಣಿಕ ಹೇಳಿದ್ದೇನು?
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ದಿನದಲ್ಲಿ 'ಕೋಟಿಗೊಬ್ಬ 2' ಗಲ್ಲಾಪೆಟ್ಟಿಗೆಯಲ್ಲಿ ಗಳಿಸಿದ್ದೆಷ್ಟು.?
ಕಿಚ್ಚ ಸುದೀಪ್ ಅವರ 'ಕೋಟಿಗೊಬ್ಬ 2' ಸಿನಿಮಾ ನಿನ್ನೆ ತೆರೆಕಂಡಿದೆ, ಸಿನಿಮಾ ಕೂಡ ತುಂಬಾ ಚೆನ್ನಾಗಿದೆ ಅಂತ ಸಿನಿಮಾ ನೋಡಿದವರೆಲ್ಲರೂ ಮಾತಾಡಿಕೊಳ್ಳುತ್ತಿದ್ದಾರೆ. ಹೇಳಿ-ಕೇಳಿ ಈ ಸಿನಿಮಾ ಎರಡು ಭಾಷೆಗಳಲ್ಲಿ ಏಕಕಾಲದಲ್ಲಿ ತೆರೆ ಕಂಡಿದೆ, ಎಂದಾಗ ಫಸ್ಟ್ ಡೇ ಕಲೆಕ್ಷನ್ ಎಷ್ಟಾಗಿರಬಹುದು ಅಂತ ಸಾಮಾನ್ಯವಾಗಿ ಎಲ್ಲರಿಗೂ ಕುತೂಹಲ ಇದ್ದೇ ಇರುತ್ತೆ.
ಚಿತ್ರದಲ್ಲಿ ಸುದೀಪ್ ಅವರು ಸತ್ಯ ಮತ್ತು ಶಿವ ಎಂಬ ಎರಡು ಪಾತ್ರಗಳಲ್ಲಿ ತೆರೆ ಮೇಲೆ ಅಬ್ಬರಿಸಿದಂತೆ, ಬಾಕ್ಸಾಫೀಸ್ ನಲ್ಲೂ ಅಕ್ಷರಶಃ ಅಬ್ಬರಿಸಿದ್ದಾರೆ. ಇದೀಗ ಗಾಂಧಿನಗರದ ಗಲ್ಲಾಪೆಟ್ಟಿಗೆ ಎಕ್ಸ್ ಪರ್ಟ್ ಗಳು ಹೇಳುವ ಪ್ರಕಾರ 'ಕೋಟಿಗೊಬ್ಬ 2', ಬರೋಬ್ಬರಿ 20 ಕೋಟಿ (ಗ್ರಾಸ್) ರೂಪಾಯಿ ಕಲೆಕ್ಷನ್ ಮಾಡಿದೆ ಎನ್ನುತ್ತಿದ್ದಾರೆ.[ವಿಮರ್ಶಕರ ಮನ ಲೂಟಿ ಮಾಡಿದನಾ 'ಈ' ಕೋಟಿಗೊಬ್ಬ.?]
ಇಡೀ ವಿಶ್ವದಾದ್ಯಂತ ಸುಮಾರು 1200 ಚಿತ್ರಮಂದಿರಗಳಲ್ಲಿ ತೆರೆಕಂಡ 'ಕೋಟಿಗೊಬ್ಬ 2' ಚಿತ್ರಕ್ಕೆ ಎಲ್ಲಾ ಕಡೆಯಿಂದ ಉತ್ತಮ ರೆಸ್ಪಾನ್ಸ್ ವ್ಯಕ್ತವಾಗಿತ್ತು. ತಮಿಳುನಾಡಿನಲ್ಲಿ ಸುಮಾರು 600 ಚಿತ್ರಮಂದಿರ ಹಾಗೂ ಕರ್ನಾಟಕದಲ್ಲಿ ಸುಮಾರು 350 ಚಿತ್ರಮಂದಿರಗಳಲ್ಲಿ ತೆರೆಕಂಡ ಕಿಚ್ಚನ 'ಕೋಟಿಗೊಬ್ಬ 2' ಎರಡೂ ಕಡೆಯಲ್ಲೂ ಧೂಳೆಬ್ಬಿಸಿದೆ.[ವಿಮರ್ಶೆ: ಆ 'ಕೋಟಿಗೊಬ್ಬ'ನಂತಲ್ಲ ಈ 'ಕೋಟಿಗೊಬ್ಬ'.!]
ಈ ಚಿತ್ರದಲ್ಲಿ ಎರಡೆರಡು ಪಾತ್ರವನ್ನು ಬಹಳ ಚೆನ್ನಾಗಿ ನಿಭಾಯಿಸಿದ ಕಿಚ್ಚ ಸುದೀಪ್ ಅವರು, ಮತ್ತೊಮ್ಮೆ ಅಭಿನಯ ಚಕ್ರವರ್ತಿ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಸುದೀಪ್ ಅವರಿಗೆ ನಾಯಕಿಯಾಗಿ ನಿತ್ಯಾ ಮೆನನ್ ಅವರು ಕಾಣಿಸಿಕೊಂಡಿದ್ದು, ಖ್ಯಾತ ನಿರ್ದೇಶಕ ಕೆ.ಎಸ್ ರವಿಕುಮಾರ್ ನ ಆಕ್ಷನ್-ಕಟ್ ಹೇಳಿದ್ದರು.[ಅಚ್ಚರಿ : ಸುದೀಪ್ ನಟನೆಯ 'ಕೋಟಿಗೊಬ್ಬ-2' ಚಿತ್ರದಲ್ಲಿ 'ಶಿವಣ್ಣ'.!]
ಒಟ್ನಲ್ಲಿ ಒಂದೇ ದಿನಕ್ಕೆ ಅಲ್ಲೂ ಧೂಳ್, ಇಲ್ಲೂ ಧೂಳ್ ಅಂತ ಬರೋಬ್ಬರಿ 20 ಕೋಟಿ ರೂಪಾಯಿ ಕಮಾಯಿಸಿ ಬಾಕ್ಸಾಫೀಸ್ ನಲ್ಲಿ ಸುದೀಪ್ ಅವರು ಧೂಳೆಬ್ಬಿಸುತ್ತಿದ್ದಾರೆ.