Don't Miss!
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- News ಹಿರಿಯೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಆಟೋ ಪಲ್ಟಿ: NHAIನ ಆ ಒಂದು ಯಡವಟ್ಟಿನ ವಿರುದ್ಧ ಭುಗಿಲೆದ್ದ ಆಕ್ರೋಶ
- Technology Poco: ಹೊಸದಾಗಿ ಲಾಂಚ್ ಆದ ಪೊಕೊ X6 ಪ್ರೊ 5G ಸ್ಮಾರ್ಟ್ಫೋನ್ಗೆ 17% ರಿಯಾಯಿತಿ!8 GB RAM
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Sports RCB vs KKR IPL 2024: ಕೆಕೆಆರ್ ವಿರುದ್ಧ ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಕಣಕ್ಕೆ; ಅಂದೇ ಏಕೆ?
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸುದೀಪ್-ಶಿವಣ್ಣಗೆ ಜೋಡಿಯಾಗ್ತಾರ, ಅನುಷ್ಕಾ-ನಯನತಾರಾ
ಹ್ಯಾಟ್ರಿಕ್ ನಿರ್ದೇಶಕ 'ಜೋಗಿ' ಪ್ರೇಮ್ ಅವರು ಸ್ಯಾಂಡಲ್ ವುಡ್ ನ ದಿಗ್ಗಜರಿಬ್ಬರನ್ನು ಸೇರಿಸಿ ಸಿನಿಮಾ ಮಾಡಲು ಹೊರಟಿರುವ ವಿಷಯ ನಿಮಗೆ ತಿಳಿದೇ ಇದೆ ಅಲ್ವಾ?. ಇದೀಗ ಆ ಹೊಸ ಪ್ರಾಜೆಕ್ಟ್ ಗೆ ಇಬ್ಬರು ಪರಬಾಷಾ ನಾಯಕಿಯರು ಎಂಟ್ರಿ ಆಗುವ ಸಾಧ್ಯತೆ ಇದೆ.
ಹೌದು ಕಿಚ್ಚ ಸುದೀಪ್ ಮತ್ತು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಒಂದಾಗಿ ಕಾಣಿಸಿಕೊಳ್ಳಲಿರುವ 'ಕಲಿ' ಚಿತ್ರಕ್ಕೆ ದಕ್ಷಿಣ ಭಾರತದ ಖ್ಯಾತ ನಟಿಯರಾದ ಅನುಷ್ಕಾ ಶೆಟ್ಟಿ ಮತ್ತು ನಯನತಾರ ಅವರನ್ನು ಕರೆತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.['ಕಲಿ'ಯಲ್ಲಿ ಕಿಚ್ಚ-ಶಿವಣ್ಣ ಜೊತೆ ಕಮಲ್ ಹಾಸನ್ ನಟಿಸ್ತಾರಾ?]
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೇ ಮೊದಲ ಬಾರಿಗೆ ಭಾರಿ ಬಜೆಟ್ ನ ಸಿನಿಮಾವೊಂದು ಸೆಟ್ಟೇರುತ್ತಿದ್ದು, ಬರೋಬ್ಬರಿ 110 ಕೋಟಿ ರೂಪಾಯಿಗಳ ಬಜೆಟ್ ನಲ್ಲಿ ಸಿನಿಮಾ ಮೂಡಿಬರಲಿದೆ. ನಿರ್ಮಾಪಕ ಸಿ.ಆರ್ ಮನೋಹರ್ ಅವರು ಈ ಸ್ಟಾರ್ ನಟರ ಸಿನಿಮಾಗೆ ಬಂಡವಾಳ ಹೂಡಲಿದ್ದಾರೆ.
ಇನ್ನು ನಟಿ ಅನುಷ್ಕಾ ಅವರು ದಕ್ಷಿಣ ಭಾರತದ ಸಿನಿಮಾ ಕ್ಷೇತ್ರದಲ್ಲಿ ಖ್ಯಾತಿ ಪಡೆದರೂ ಕೂಡ ಅವರು ಹುಟ್ಟಿ ಬೆಳೆದಿದ್ದು ಕನ್ನಡ ನಾಡಿನಲ್ಲಿ ಆಗಿರುವುದರಿಂದ ಕನ್ನಡದಲ್ಲಿ ಸ್ಟಾರ್ ನಟರ ಸಿನಿಮಾದಲ್ಲಿ ನಟಿಸಿದ್ರು ಅಚ್ಚರಿ ಇಲ್ಲ.[ಚಂದನವನದಲ್ಲಿ ಕ್ರೇಜ್ ಹುಟ್ಟಿಸಲಿರುವ ಶಿವಣ್ಣ-ದೀಪಣ್ಣ 'ಕಲಿ']
ಇನ್ನೋರ್ವ ನಟಿ ನಯನತಾರಾ ಅವರು ಉಪೇಂದ್ರ ಅವರ ಜೊತೆ 'ಸೂಪರ್' ಸಿನಿಮಾದಲ್ಲಿ ನಟಿಸಿದ್ದರಿಂದ ಈಗಾಗಲೇ ಸ್ಯಾಂಡಲ್ ವುಡ್ ಕ್ಷೇತ್ರದಲ್ಲಿ ಚಿರಪರಿಚಿತರಾಗಿದ್ದಾರೆ. ಜೊತೆಗೆ ನಿರ್ದೇಶಕ ಪ್ರೇಮ್ ಅವರು ಈ ಸಿನಿಮಾವನ್ನು ಬಹು ಭಾಷೆಯಲ್ಲಿ ತಯಾರಿಸಲು ನಿರ್ಧರಿಸಿರುವುದರಿಂದ ಈ ಇಬ್ಬರೂ ನಟಿಯರು ಗಾಂಧಿನಗರಕ್ಕೆ ಬಂದರೂ ಬರಬಹುದು.[ವಾವ್.! ಶಿವಣ್ಣ-ದೀಪಣ್ಣ ಸಿನಿಮಾಕ್ಕೆ ಟೈಟಲ್ ಫಿಕ್ಸ್ ಆಯ್ತಾ?]
ಒಟ್ನಲ್ಲಿ ಬಹಳ ಅದ್ಧೂರಿಯಾಗಿ ಸ್ಟಾರ್ ನಟರ ಚಿತ್ರದ ಟೈಟಲ್ ಲಾಂಚ್ ಮಾಡಿ ಸುದ್ದಿ ಮಾಡಿದ ನಿರ್ದೇಶಕರು ಇದೀಗ ದಕ್ಷಿಣ ಭಾರತದ ಸ್ಟಾರ್ ನಟಿಯರನ್ನು ಕರೆತಂದು ಮತ್ತೆ ಸುದ್ದಿ ಮಾಡುವ ಆತುರದಲ್ಲಿದ್ದಾರೆ.