Don't Miss!
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- News ಏಪ್ರಿಲ್ 28ಕ್ಕೆ ಬೆಣ್ಣೆನಗರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ: ಸಿದ್ಧತೆ ಹೇಗಿದೆ? ಮಾಹಿತಿ
- Automobiles Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ'ದ ದ್ರೌಪದಿ ಪಾತ್ರಕ್ಕಾಗಿ ಈ ನಟಿಗೆ ಆಫರ್ ನೀಡಲಾಗಿದ್ಯಂತೆ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲಿರುವ 50ನೇ ಸಿನಿಮಾ 'ಕುರುಕ್ಷೇತ್ರ' ಚಿತ್ರದ ಬಗ್ಗೆ ದಿನಕ್ಕೊಂದು ಕುತೂಹಲ ಹುಟ್ಟಿಸುವಂತಹ ಸುದ್ದಿ ಗಾಂಧಿನಗರದಲ್ಲಿ ಕೇಳಿ ಬರುತ್ತಲೇ ಇದೆ. ಈ ಬಾರಿ ಟಾಕ್ ಕೇಳಿ ಬಂದಿರುವುದು ದ್ರೌಪದಿ ಬಗ್ಗೆ.
ಇಷ್ಟು ದಿನ 'ಕುರುಕ್ಷೇತ್ರ' ಚಿತ್ರದಲ್ಲಿ ಕರ್ಣ ಯಾರು? ಭೀಮ ಯಾರು? ಕೃಷ್ಣ ಯಾರು ಎಂಬ ಸುದ್ದಿಗಳು ಚರ್ಚೆಯಾಗುತ್ತಿದ್ದವು. ಆದ್ರೆ, 'ಕುರುಕ್ಷೇತ್ರ'ದಲ್ಲಿ ದ್ರೌಪದಿ ಯಾರಾಗ್ತಾರೆ ಎಂಬುದರ ಬಗ್ಗೆ ಎಲ್ಲೂ ಸುಳಿವು ಬಿಟ್ಟುಕೊಟ್ಟಿಲ್ಲ. ಮೂಲಗಳ ಪ್ರಕಾರ ದಕ್ಷಿಣ ಚಿತ್ರರಂಗದ ಖ್ಯಾತ ನಟಿಯೊಬ್ಬರು ಈ ಪಾತ್ರವನ್ನ ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಹಾಗಿದ್ರೆ, ಆ ನಟಿ ಯಾರು ಎಂಬುದು ಕುತೂಹಲ. ಈ ಕುತೂಹಲಕ್ಕೀಗ ಒಂದು ಸಣ್ಣ ಸುಳಿವು ಸಿಕ್ಕಿದೆ.
'ಕುರುಕ್ಷೇತ್ರ'ದಲ್ಲಿ ದರ್ಶನ್ ಸಂಭಾವನೆ ಕೇಳಿ ಬೆಚ್ಚಿಬಿದ್ದ ಗಾಂಧಿನಗರ.!
ಹೌದು, ಕನ್ನಡದ 'ಕುರುಕ್ಷೇತ್ರ' ಚಿತ್ರದಲ್ಲಿ ದ್ರೌಪದಿ ಪಾತ್ರವನ್ನ ನಿರ್ವಹಿಸಲು ಬಹುಭಾಷಾ ತಾರೆ ನಯನತಾರ ಅವರನ್ನ ಅಪ್ರೋಚ್ ನೀಡಲಾಗಿದೆಯಂತೆ. ಆದ್ರೆ, ಈ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲವೆನ್ನುತ್ತಿವೆ ಮೂಲಗಳು.
ಮತ್ತೊಂದೆಡೆ ದ್ರೌಪದಿ ಪಾತ್ರಕ್ಕಾಗಿ ಕನ್ನಡದ ಹುಡುಗಿಯಾಗಿರುವ ಅನುಷ್ಕಾ ಶೆಟ್ಟಿ ಅವರನ್ನ ಕರೆತರುವ ಯೋಚನೆಯೂ ಕೂಡ ನಡೆಯುತ್ತಿದೆ ಎನ್ನಲಾಗಿದೆ. ಈ ಮಧ್ಯೆ ಪರಭಾಷಾ ನಟಿಯರ ಬದಲು ಕನ್ನಡದ ನಟಿಯೊಬ್ಬರೇ ಈ ಪಾತ್ರವನ್ನ ಮಾಡುತ್ತಾರೆ ಎಂದು ಕೂಡ ಹೇಳಲಾಗ್ತಿದೆ.
'ಕುರುಕ್ಷೇತ್ರ'ಕ್ಕೆ ಕರ್ಣ ಫಿಕ್ಸ್: ಇದು ದರ್ಶನ್ ಬಳಗಕ್ಕೆ ಶಾಕ್ ಆದ್ರು ಖುಷಿ ವಿಚಾರವೇ.!
ಸದ್ಯ, ದರ್ಶನ್ 'ದುರ್ಯೋಧನ', ರವಿಚಂದ್ರನ್ 'ಶ್ರೀಕೃಷ್ಣ', ಹಿರಿಯ ನಟ ಶ್ರೀನಿವಾಸ ಮೂರ್ತಿ 'ದ್ರೋಣಾಚಾರ್ಯ' ಮತ್ತು ನಟ ಶ್ರೀನಾಥ್ 'ಧೃತರಾಷ್ಟ್ರ'ನ ಪಾತ್ರಗಳು ಮಾತ್ರ ಅಂತಿಮವಾಗಿದೆ. ಉಳಿದಂತೆ ಕಲಾವಿದರ ಆಯ್ಕೆಯಲ್ಲಿ ತೊಡಗಿಕೊಂಡಿರುವ ಚಿತ್ರತಂಡ ಆದಷ್ಟೂ ಬೇಗ ಬೇರೆ ಪಾತ್ರಗಳನ್ನ ಅಂತಿಮ ಮಾಡಲಿದೆ. ಈ ಚಿತ್ರವನ್ನ ನಾಗಣ್ಣ ನಿರ್ದೇಶನ ಮಾಡುತ್ತಿದ್ದು, ಮುನಿರತ್ನ ನಿರ್ಮಾಣ ಮಾಡುತ್ತಿದ್ದಾರೆ. ನಿರ್ಮಾಪಕ ಮುನಿರತ್ನ ಅವರ ಹುಟ್ಟುಹಬ್ಬದಂದು 'ಕುರುಕ್ಷೇತ್ರ' ಚಿತ್ರಕ್ಕೆ ಚಾಲನೆ ದೊರೆಯಲಿದ್ದು, ಮತ್ತಷ್ಟು ಮಾಹಿತಿಗಳು ಹೊರಬೀಳಲಿದೆ.
ದರ್ಶನ್-ಹರಿಕೃಷ್ಣ ಕಾಂಬಿನೇಷನ್ ಈಸ್ ಬ್ಯಾಕ್: 'ಕುರುಕ್ಷೇತ್ರ' ಹಾಡುಗಳು ರೆಡಿ.!