Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಂಬರೀಶ' ಚಿತ್ರದಿಂದ ನಿಶಾ ಔಟ್; ಕಾರಣ ನಿಗೂಢ
ಈ ವರ್ಷ ಕನ್ನಡಕ್ಕೆ ಅಡಿಯಿಟ್ಟ ಚೆಲುವೆ ನಿಶಾ. ಹೆಸರಿನಲ್ಲೇ ಏನೋ ಒಂದು ಪುಳಕ ಇತ್ತು. ನೋಡಲೂ ಆಕರ್ಷಕವಾಗಿದ್ದರು. ಈಕೆ ಬೇರಾರು ಅಲ್ಲ ಹಾಲಿ ಚನ್ನಪಟ್ಟಣ ಶಾಸಕ ಸಿಪಿ ಯೋಗೀಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್. ಅಂಬರೀಶ ಚಿತ್ರದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದರು.
ಹತ್ತು ದಿನಗಳ ಚಿತ್ರೀಕರಣದಲ್ಲೂ ಭಾಗಿಯಾಗಿದ್ದರು. ಈಗ ಚಿತ್ರದಿಂದ ಹೊರಬಿದಿದ್ದಾರೆ. ಇದಕ್ಕೆ ಕಾರಣ ಏನಿರಬಹುದು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ಇನ್ನೊಂದು ಮೂಲದ ಪ್ರಕಾರ, ನಿಶಾ ಜಾಗಕ್ಕೆ ಬುಲ್ ಬುಲ್ ಬೆಡಗಿ ರಚಿತಾ ರಾಮ್ ಅವರನ್ನು ಆಯ್ಕೆ ಮಾಡಲಾಗಿದೆ ಎಂಬುದು.
ಆದರೆ ನಿಶಾ ಹೇಳುವುದೇ ಬೇರೆ. ಚಿತ್ರೀಕರಣದ ವೇಳೆ ಕೊಡಗಿನಲ್ಲಿ ಗಾಯಗೊಂಡಿದ್ದೆ. ವೈದ್ಯರು ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಬಗ್ಗೆ ನಿರ್ದೇಶಕ ಮಹೇಶ್ ಸುಖಧರೆ ಜೊತೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಭೂಮಿಕೆಯಲ್ಲಿರುವ ಅಂಬರೀಶ ಚಿತ್ರಕ್ಕೆ ಈ ಹಿಂದೆ ಅಮಲಾ ಪೌಲ್ ಅವರನ್ನು ಕರೆತರಲು ನಿರ್ಧರಿಸಲಾಗಿತ್ತು. ಆದರೆ ಅಮಾಲಾ ಡೇಟ್ಸ್ ಹೊಂದಾಣಿಕೆ ಆಗಿರಲಿಲ್ಲ. ಆಗ ನಿಶಾ ಯೋಗೇಶ್ವರ್ ಹೆಸರು ಕೇಳಿಬಂದಿತ್ತು. (ಏಜೆನ್ಸೀಸ್)