Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿಶ್ಚಿತಾರ್ಥಕ್ಕೆ ನಿಂತುಹೋದ ಪೂಜಾಗಾಂಧಿ ಮದುವೆ
ಇನ್ನೂ ನಿಶ್ಚಿತಾರ್ಥವಾಗಿ ತಿಂಗಳು ಕಳೆದಿಲ್ಲ, ಆಗಲೇ ನಟಿ ಪೂಜಾಗಾಂಧಿ ಮದುವೆ ಮುರಿದು ಬಿತ್ತೇ? ಹೌದು ಎಂಬ ಸುದ್ದಿಯೊಂದು ಬೆಂಗಳೂರಿನ ಕತ್ರಿಗುಪ್ಪೆಯಿಂದ ಕೇಳಿಬಂದಿದೆ. ಬಿಜಿನೆಸ್ ಮ್ಯಾನ್, ರಿಯಲ್ ಎಸ್ಟೇಟ್ ಉದ್ಯಮಿ ಆನಂದ್ ಗೌಡ ಅವರಿಗೆ ಪೂಜಾಗಾಂಧಿ ತಂದೆತಾಯಿ ಕನ್ಯಾದಾನ ಮಾಡಲು ನಿರಾಕರಿಸಿದ್ದಾರೆ ಎನ್ನಲಾಗಿದೆ.
'ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ' ಎಂಬ ಗಾದೆ ಮಾತೊಂದಿದೆ. ಆದರೂ ಪೂಜಾಗಾಂಧಿ ಅವರ ಹೆತ್ತವರು ಮಾತ್ರ ತಮ್ಮ ಮಗಳು ತಮ್ಮೊಂದಿಗೆ ಇರಬೇಕು ಎಂದು ಬಯಸಿದ್ದಾರಂತೆ. ತಮ್ಮ ಮಗಳೇ ತಮಗೆ ಜೀವನಾಧಾರ. ಮದುವೆಯಾಗಿ ಅವಳು ತಮ್ಮಿಂದ ದೂರವಾದರೆ ತಮ್ಮ ಗತಿ ಏನು. ತಮ್ಮನ್ನು ಮುಂದೆ ನೋಡಿಕೊಳ್ಳುವವರು ಯಾರು?
ಆನಂದಗೌಡ ಅವರ ಕುಟುಂಬಿಕರನ್ನು ಪೂಜಾಗಾಂಧಿ ತಾಯಿ ಅಪಮಾನಿಸಿದ್ದರಂತೆ. ಇದಿಷ್ಟೇ ಅಲ್ಲದೆ ಎಲ್ಲ ವಿಚಾರಗಳಲ್ಲೂ ಮೂಗು ತೂರಿಸುತ್ತಿದ್ದರಂತೆ. ಇದರಿಂದ ಬೇಸತ್ತ ಆನಂದ್ ಮದುವೆ ಕ್ಯಾನ್ಸಲ್ ಮಾಡಿಕೊಂಡಿದ್ದಾರಂತೆ. ಈ ಬಗ್ಗೆ ಅವರು ಇನ್ನೊಂದು ದಿನದಲ್ಲಿ ಪತ್ರಿಕಾಗೋಷ್ಠಿ ಕರೆದು ಎಲ್ಲ ವಿವರಗಳನ್ನು ನೀಡುವುದಾಗಿಯೂ ತಿಳಿಸಿದ್ದಾರೆ.
ಇನ್ನೊಂದು ಮೂಲದ ಪ್ರಕಾರ ಇತ್ತೀಚೆಗೆ ಪೂಜಾಗಾಂಧಿ ಅವರು ಜೆಡಿಎಸ್ ತೊರೆದು ಕೆಜೆಪಿಗೆ ಸೇರಿದ್ದೂ ಮದುವೆ ಸಂಬಂಧ ಮುರಿದುಬೀಳಲು ಮತ್ತೊಂದು ಕಾರಣ ಎನ್ನಲಾಗಿದೆ. ಆನಂದಗೌಡ ಅವರು ಜೆಡಿಎಸ್ ಪಕ್ಷಕ್ಕೆ ಸೇರಿವರಾಗಿದ್ದು ಪೂಜಾಗಾಂಧಿ ಪಕ್ಷಾಂತರವನ್ನು ಅವರು ಒಪ್ಪುತ್ತಿಲ್ಲ ಎನ್ನುತ್ತವೆ ಮೂಲಗಳು.
ಇಷ್ಟಕ್ಕೂ ಆನಂದಗೌಡ ಜೊತೆಗಿನ ಪೂಜಾಗಾಂಧಿ ಮದುವೆ ಮುರಿದುಬೀಳಲು ಸೂಕ್ತ ಕಾರಣ ಏನಿರಬಹುದು ಎಂಬುದು ಇನ್ನಷ್ಟೇ ಗೊತ್ತಾಗಬೇಕು. ಹೆಚ್ಚಿನ ವಿವರಗಳು ಇನ್ನಷ್ಟೇ ಹೊರಬೀಳಬೇಕು. 2013ರ ಏಪ್ರಿಲ್ ನಲ್ಲಿ ಆನಂದಗೌಡ ಜೊತೆ ಪೂಜಾಗಾಂಧಿ ಸಪ್ತಪದಿ ತುಳಿಯಲಿದ್ದಾರೆ ಎನ್ನಲಾಗಿತ್ತು. ಪೂಜಾಗಾಂಧಿ ಮೊಬೈಲ್ ಕೂಡ ಸ್ವಿಚ್ಡ್ ಆಫ್. (ಏಜೆನ್ಸೀಸ್)