Don't Miss!
- News ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅತಿಶೀಘ್ರದಲ್ಲೇ ಕನ್ನಡಕ್ಕೆ ನಟಿ ಶ್ರುತಿ ಹಾಸನ್ ಎಂಟ್ರಿ
ಈ ಹಿಂದೆಯೂ ಈ ಬಗ್ಗೆ ಸುದ್ದಿ ಇತ್ತು. ಅದು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆಗಿನ 'ನಿನ್ನಿಂದಲೇ' ಚಿತ್ರದಲ್ಲಿ ನಟಿ ಶ್ರುತಿ ಹಾಸನ್ ಅಭಿನಯಿಸುತ್ತಾರೆ ಎಂಬುದು. ಆದರೆ ಸುದ್ದಿ ಬಂದಷ್ಟೇ ವೇಗವಾಗಿ ಠುಸ್ ಆಯಿತು. ಈಗ ಮತ್ತೊಮ್ಮೆ ಅಂಥಹದ್ದೇ ಸುದ್ದಿ ಇದೆ.
ಇದು ಬಹಿರಂಗವಾಗಿದ್ದು ಸೆಲೆಬ್ರಿಟಿ ಕ್ರಿಕೆಟ್ ಲೀಗ್ (ಸಿಸಿಎಲ್ 4) ಫೈನಲ್ ಪಂದ್ಯದಲ್ಲಿ. ಹೈದರಾಬಾದಿನ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಶ್ರುತಿ ಹಾಸನ್ ದಂತದಗೊಂಬೆಯಂತೆ ಎಲ್ಲರ ಕಣ್ಣೂ ಸೆಳೆಯುತ್ತಿದ್ದರು. ಈ ಸಂದರ್ಭದಲ್ಲಿ ಅವರು ಕನ್ನಡ ಚಿತ್ರದಲ್ಲಿ ಅಭಿನಯಿಸುವ ಬಯಕೆಯನ್ನು ಮತ್ತೊಮ್ಮೆ ಹೊರಹಾಕಿದ್ದಾರೆ. [ಅಂಬರೀಶ್ ಗಾಗಿ ಸಿಸಿಎಲ್ ಗೆದ್ದ ಕರ್ನಾಟಕ]
ಇನ್ನೊಂದು ಕಡೆ ಸಾಕಷ್ಟು ತಾರೆಗಳು ಸೆಲೆಬ್ರಿಟಿ ಕ್ರಿಕೆಟ್ ಲೀಗ್ ನಲ್ಲಿ ಕಾಣಿಸಿಕೊಂಡರು. ಎಲ್ಲರನ್ನೂ ಆಕರ್ಷಿಸಿದ ತಾರೆಗಳಲ್ಲಿ ಅತ್ಯಧಿಕ ಮತಗಳು ಶ್ರುತಿ ಹಾಸನ್ ಅವರಿಗೆ ಬಿದ್ದವು. ಸದ್ಯಕ್ಕೆ ದಕ್ಷಿಣದಲ್ಲಿ ಬಿಜಿಯಾಗಿರುವ ಶ್ರುತಿ ಬಹುಶಃ ಪುನೀತ್ ಅವರ ರಣ ವಿಕ್ರಮ ಚಿತ್ರದಲ್ಲಿ ಅಭಿನಯಿಸುತ್ತಾರೋ ಏನೋ ಕಾದು ನೋಡಬೇಕು. (ಒನ್ಇಂಡಿಯಾ ಕನ್ನಡ)