Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟಾಲಿವುಡ್ ನ ಮತ್ತೊಬ್ಬ ಸೂಪರ್ ಸ್ಟಾರ್ ರಾಜಕೀಯಕ್ಕೆ ಎಂಟ್ರಿ!
ತಮಿಳುನಾಡಿನಲ್ಲಿ ರಜನಿಕಾಂತ್ ಮತ್ತು ಕನ್ನಡದಲ್ಲಿ ನಟ ಶಿವರಾಜ್ ಕುಮಾರ್ ರಾಜಕೀಯಕ್ಕೆ ಎಂಟ್ರಿ ಕೊಡ್ತಾರೆ ಎನ್ನುವ ಸುದ್ದಿಗಳು ಸಿನಿಲೋಕದಲ್ಲಿ ಚರ್ಚೆಯಾಗುತ್ತಿದೆ. ಹೀಗಿರುವಾಗ, ಟಾಲಿವುಡ್ ಸೂಪರ್ ಸ್ಟಾರ್ ನಟರೊಬ್ಬರು ರಾಜಕೀಯಕ್ಕೆ ಕಾಲಿಡುತ್ತಿದ್ದಾರೆ ಎಂಬ ಹೊಸ ಸುದ್ದಿ ಬಹಿರಂಗವಾಗಿದೆ.
ಹೌದು, ತೆಲುಗಿನ ಖ್ಯಾತ ನಟ ಕಮ್ ಉದ್ಯಮಿ ಅಕ್ಕಿನೇನಿ ನಾಗಾರ್ಜುನ ರಾಜಕೀಯ ಅಖಾಡಕ್ಕೆ ಧುಮುಕುತ್ತಿದ್ದು, ವೈ.ಎಸ್.ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರಲಿದ್ದಾರಂತೆ. ಈ ಬಗ್ಗೆ ವೈ.ಎಸ್.ಆರ್ ಕಾಂಗ್ರೆಸ್ ಪಕ್ಷದ ನಾಯಕ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಚರ್ಚೆ ಕೂಡ ಆಗಿದೆಯಂತೆ.
'ರಾಜಕೀಯ' ಸುದ್ದಿಗೆ ಪೂರ್ಣ ವಿರಾಮವಿಟ್ಟ ಸೆಂಚುರಿಸ್ಟಾರ್
ಅಂದ್ಹಾಗೆ, ಅಕ್ಕಿನೇನಿ ನಾಗಾರ್ಜುನ ಅವರು ಮತ್ತು ಜಗನ್ ಮೋಹನ್ ರೆಡ್ಡಿ ತಂದೆ ವೈ.ಎಸ್.ರಾಜಶೇಖರ್ ರೆಡ್ಡಿ ಅವರು ತುಂಬಾ ಆಪ್ತರಾಗಿದ್ದರು. ವೈ.ಎಸ್.ರಾಜಶೇಖರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಸರ್ಕಾರಿ ಯೋಜನೆಗಳಿಗೆ ನಾಗಾರ್ಜುನ ಅವರು ರಾಯಭಾರಿ ಆಗಿದ್ದರು. ಹೀಗಾಗಿ, ವೈ.ಎಸ್.ಆರ್ ಕುಟುಂಬದ ಜೊತೆ ನಾಗಾರ್ಜುನ ಅವರ ಬಾಂಧವ್ಯ ಕೂಡ ಉತ್ತಮವಾಗಿದೆ.
ಸದ್ಯ, 'ರಾಜು ಗಾರಿ ಗಾಡಿ-2' ಚಿತ್ರದಲ್ಲಿ ನಾಗಾರ್ಜುನ ಅಭಿನಯಿಸುತ್ತಿದ್ದಾರೆ. ಸಿನಿಮಾ ನಟನೆ, ಮತ್ತು ನಿರ್ಮಾಣದ ಜೊತೆಗೆ ಉದ್ಯಮದಲ್ಲೂ ತೊಡಗಿಸಿಕೊಂಡಿರುವ ನಾಗಾರ್ಜುನ ರಾಜಕೀಯಕ್ಕೆ ಸೇರುತ್ತಾರ ಎಂಬುದು ಸದ್ಯದ ಕುತೂಹಲ.