Don't Miss!
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡ್ರಾಮಾ' ಬಳಿಕ ಮತ್ತೆ ಯೋಗರಾಜ್ ಭಟ್ ಚಿತ್ರದಲ್ಲಿ ಅಂಬರೀಶ್
Recommended Video
ನಟ ಅಂಬರೀಶ್ ಒಂದು ಕಡೆ ತಮ್ಮ ಮಗ ಅಭಿಷೇಕ್ ಅವರನ್ನು 'ಅಮರ್' ಸಿನಿಮಾದ ಮೂಲಕ ಲಾಂಚ್ ಮಾಡುತ್ತಿದ್ದಾರೆ. ಇನ್ನೊಂದು ಕಡೆ ತಾವು 'ಅಂಬಿ ನಿಂಗೆ ವಯಸ್ತಾಯ್ತೋ' ಸಿನಿಮಾದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ವಿಶೇಷ ಅಂದರೆ, ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾದ ಹಾಡಿನಲ್ಲಿ ಅಂಬರೀಶ್ ಕಾಣಿಸಿಕೊಳ್ಳುತ್ತಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ ತಮ್ಮ 'ಪಂಚತಂತ್ರ' ಸಿನಿಮಾದಲ್ಲಿ ಒಂದು ವಿಶೇಷ ಹಾಡನ್ನು ಪ್ಲಾನ್ ಮಾಡಿದ್ದಾರೆ. ತಮ್ಮ ಈ ಹಾಡಿಗೆ ಅಂಬರೀಶ್ ಕುಣಿಯಬೇಕು ಎನ್ನುವುದು ಭಟ್ಟರ ಆಸೆ ಆಗಿದೆ. ಈ ಬಗ್ಗೆ ಯೋಗರಾಜ್ ಭಟ್ ಈಗಾಗಲೇ ಅಂಬರೀಶ್ ಅವರ ಜೊತೆ ಮಾತುಕತೆ ನಡೆಸಿದ್ದಾರಂತೆ. ಅಂಬಿ ಓಕೆ ಎಂದ ತಕ್ಷಣ ಹಾಡಿನ ಚಿತ್ರೀಕರಣ ನಡೆಯಲಿದೆ.
'ಪ' ಅಕ್ಷರದ ಮೇಲೆ ಯೋಗರಾಜ್ ಭಟ್ ರಿಗೆ ಲವ್ ಆಗಿದೆ
ಅಂದಹಾಗೆ, ಈ ಹಿಂದೆ ಯೋಗರಾಜ್ ಭಟ್ ಅವರ 'ಡ್ರಾಮಾ' ಸಿನಿಮಾದ 'ಗೊಂಬೆ ಆಡ್ಸೋನು ಮೇಲೆ ಕುಂತವ್ನೆ..' ಹಾಡಿಗೆ ಅಂಬಿ ಹೆಜ್ಜೆ ಹಾಕಿದ್ದರು. ಈ ಹಾಡು ಜನರ ಫೇವರೇಟ್ ಆಗುವುದರ ಜೊತೆಗೆ ಎಷ್ಟೊ ಪ್ರಶಸ್ತಿಗಳನ್ನು ಪಡೆಯಿತು. ಸೋ, ಆ ಹಾಡಿನ ದೊಡ್ಡ ಯಶಸ್ಸಿನ ಬಳಿಕ ಮತ್ತೆ ಯೋಗರಾಜ್ ಭಟ್ ಹಾಗೂ ಅಂಬರೀಶ್ ಒಂದಾಗಲಿದ್ದಾರೆ.
'ಪಂಚತಂತ್ರ' ಸಿನಿಮಾದಲ್ಲಿ ವಿಹಾನ್ ಗೌಡ ಸೋನಲ್ ಹಾಗೂ ಅಕ್ಷರ ಗೌಡ ಲೀಡ್ ರೋಲ್ ನಲ್ಲಿ ನಟಿಸಿದ್ದಾರೆ. ಹರಿಕೃಷ್ಣ ಸಂಗೀತ, ಯೋಗರಾಜ್ ಭಟ್ ಸಾಹಿತ್ಯ ಹಾಡುಗಳಲ್ಲಿ ಇರಲಿದೆ.