Don't Miss!
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡ್ರಾಮಾ' ಬಳಿಕ ಮತ್ತೆ ಯೋಗರಾಜ್ ಭಟ್ ಚಿತ್ರದಲ್ಲಿ ಅಂಬರೀಶ್
Recommended Video
ನಟ ಅಂಬರೀಶ್ ಒಂದು ಕಡೆ ತಮ್ಮ ಮಗ ಅಭಿಷೇಕ್ ಅವರನ್ನು 'ಅಮರ್' ಸಿನಿಮಾದ ಮೂಲಕ ಲಾಂಚ್ ಮಾಡುತ್ತಿದ್ದಾರೆ. ಇನ್ನೊಂದು ಕಡೆ ತಾವು 'ಅಂಬಿ ನಿಂಗೆ ವಯಸ್ತಾಯ್ತೋ' ಸಿನಿಮಾದಲ್ಲಿ ನಾಯಕ ನಟರಾಗಿ ನಟಿಸುತ್ತಿದ್ದಾರೆ. ವಿಶೇಷ ಅಂದರೆ, ಈ ಸಿನಿಮಾದ ನಂತರ ಮತ್ತೊಂದು ಹೊಸ ಸಿನಿಮಾದ ಹಾಡಿನಲ್ಲಿ ಅಂಬರೀಶ್ ಕಾಣಿಸಿಕೊಳ್ಳುತ್ತಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ ತಮ್ಮ 'ಪಂಚತಂತ್ರ' ಸಿನಿಮಾದಲ್ಲಿ ಒಂದು ವಿಶೇಷ ಹಾಡನ್ನು ಪ್ಲಾನ್ ಮಾಡಿದ್ದಾರೆ. ತಮ್ಮ ಈ ಹಾಡಿಗೆ ಅಂಬರೀಶ್ ಕುಣಿಯಬೇಕು ಎನ್ನುವುದು ಭಟ್ಟರ ಆಸೆ ಆಗಿದೆ. ಈ ಬಗ್ಗೆ ಯೋಗರಾಜ್ ಭಟ್ ಈಗಾಗಲೇ ಅಂಬರೀಶ್ ಅವರ ಜೊತೆ ಮಾತುಕತೆ ನಡೆಸಿದ್ದಾರಂತೆ. ಅಂಬಿ ಓಕೆ ಎಂದ ತಕ್ಷಣ ಹಾಡಿನ ಚಿತ್ರೀಕರಣ ನಡೆಯಲಿದೆ.
'ಪ' ಅಕ್ಷರದ ಮೇಲೆ ಯೋಗರಾಜ್ ಭಟ್ ರಿಗೆ ಲವ್ ಆಗಿದೆ
ಅಂದಹಾಗೆ, ಈ ಹಿಂದೆ ಯೋಗರಾಜ್ ಭಟ್ ಅವರ 'ಡ್ರಾಮಾ' ಸಿನಿಮಾದ 'ಗೊಂಬೆ ಆಡ್ಸೋನು ಮೇಲೆ ಕುಂತವ್ನೆ..' ಹಾಡಿಗೆ ಅಂಬಿ ಹೆಜ್ಜೆ ಹಾಕಿದ್ದರು. ಈ ಹಾಡು ಜನರ ಫೇವರೇಟ್ ಆಗುವುದರ ಜೊತೆಗೆ ಎಷ್ಟೊ ಪ್ರಶಸ್ತಿಗಳನ್ನು ಪಡೆಯಿತು. ಸೋ, ಆ ಹಾಡಿನ ದೊಡ್ಡ ಯಶಸ್ಸಿನ ಬಳಿಕ ಮತ್ತೆ ಯೋಗರಾಜ್ ಭಟ್ ಹಾಗೂ ಅಂಬರೀಶ್ ಒಂದಾಗಲಿದ್ದಾರೆ.
'ಪಂಚತಂತ್ರ' ಸಿನಿಮಾದಲ್ಲಿ ವಿಹಾನ್ ಗೌಡ ಸೋನಲ್ ಹಾಗೂ ಅಕ್ಷರ ಗೌಡ ಲೀಡ್ ರೋಲ್ ನಲ್ಲಿ ನಟಿಸಿದ್ದಾರೆ. ಹರಿಕೃಷ್ಣ ಸಂಗೀತ, ಯೋಗರಾಜ್ ಭಟ್ ಸಾಹಿತ್ಯ ಹಾಡುಗಳಲ್ಲಿ ಇರಲಿದೆ.