Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಕಿಂಗ್ ಸ್ಟಾರ್ 'ಮಾಸ್ಟರ್ ಪೀಸ್'ಗೆ ಅನುಷ್ಕಾ ಶೆಟ್ಟಿ
ರಾಕಿಂಗ್ ಸ್ಟಾರ್ ಯಶ್ ಅವರ ಮತ್ತೊಂದು ಚಿತ್ರಕ್ಕೆ ಗ್ರೀನ್ ಸಿಗ್ನಲ್ ಬಿದ್ದಿದೆ. ಅವರ ಹೊಸ ಚಿತ್ರಕ್ಕೆ 'ಮಾಸ್ಟರ್ ಪೀಸ್' ಎಂದು ಹೆಸರಿಡಲಾಗಿದ್ದು, ಈ ಚಿತ್ರದ ಮೂಲಕ ನಿರ್ದೇಶಕರಾಗಿ ಬದಲಾಗುತ್ತಿದ್ದಾರೆ ಸಂಭಾಷಣೆಕಾರ ಮಂಜು ಮಾಂಡವ್ಯ.
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರೊಂದಿಗೆ 'ನಿನ್ನಿಂದಲೇ' ಚಿತ್ರವನ್ನು ನಿರ್ಮಿಸಿದ್ದ ಹೊಂಬಾಳೆ ಫಿಲಂಸ್ (ವಿಜಯ್ ಕಿರಗಂದೂರು) ಅವರ ಹೊಸ ಪ್ರಾಜೆಕ್ಟ್ ಇದು. ನಿರ್ದೇಶನದ ಜೊತೆಗೆ ಕಥೆ, ಚಿತ್ರಕಥೆ, ಸಂಭಾಷಣೆಯ ಜವಾಬ್ದಾರಿಯನ್ನೂ ಮಂಜು ಮಾಂಡವ್ಯ ಹೊತ್ತಿದ್ದಾರೆ. [ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ 'ಕೆಜಿಎಫ್']
ಈ ಚಿತ್ರಕ್ಕೆ ಇಬ್ಬರು ನಾಯಕಿಯರು ಎನ್ನಲಾಗಿದೆ. ತೆಲುಗು ಚಿತ್ರರಂಗದಲ್ಲಿ ಮಿಂಚುತ್ತಿರುವ ಬೆಂಗಳೂರು ಸಂಪಿಗೆ ಅನುಷ್ಕಾ ಶೆಟ್ಟಿ ಹಾಗೂ ಮತ್ತೊಬ್ಬ ಮಲ್ಲಿಗೆಯಂತಹ ಬೆಡಗಿ ಪ್ರಿಯಾ ಆನಂದ್ ಅವರನ್ನು ಕನ್ನಡಕ್ಕೆ ಕರೆತರಲು ಮಾತುಕತೆ ನಡೆಯುತ್ತಿದೆ.
'ರುದ್ರಮದೇವಿ' ಹಾಗೂ 'ಬಾಹುಬಲಿ' ಚಿತ್ರಗಳಲ್ಲಿ ಅನುಷ್ಕಾ ಶೆಟ್ಟಿ ಬಿಜಿಯಾಗಿದ್ದಾರೆ. ಇನ್ನೊಬ್ಬ ಬೆಡಗಿ ಪ್ರಿಯಾ ಆನಂದ್ ಸಹ ಹಲವಾರು ಪ್ರಾಜೆಕ್ಟ್ ಗಳಲ್ಲಿ ತೊಡಗಿಕೊಂಡಿದ್ದಾರೆ. ಇವರಿಬ್ಬರು 'ಎಸ್' ಎನ್ನುತ್ತಾರೋ 'ನೋ' ಎನ್ನುತ್ತಾರೋ ಎಂಬುದನ್ನು ಕಾದುನೋಡಬೇಕು.
ಜಯಣ್ಣ ಕಂಬೈನ್ಸ್ ನ 'ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ' ಚಿತ್ರ ಬಿಡುಗಡೆಗೆ ಸಿದ್ಧವಾಗುತ್ತಿದ್ದು ಭಾರಿ ನಿರೀಕ್ಷೆಗಳನ್ನು ಮೂಡಿಸಿದೆ. 'ಗಜಕೇಸರಿ' ಚಿತ್ರದ ಬಳಿಕ ರಾಮಾಚಾರಿ ಚಿತ್ರದ ಬಗೆಗೂ ಸಾಕಷ್ಟು ನಿರೀಕ್ಷೆಗಳಿವೆ. ಇದೇ ಸಂದರ್ಭದಲ್ಲಿ 'ಮಾಸ್ಟರ್ ಪೀಸ್' ಸುದ್ದಿ ಬಂದಿರುವುದು ಅವರ ಅಭಿಮಾನಿಗಳಿಗೆ ದೀಪಾವಳಿ, ಯುಗಾದಿ ಒಟ್ಟಿಗೆ ಬಂದಂತಾಗಿದೆ. (ಫಿಲ್ಮಿಬೀಟ್ ಕನ್ನಡ)