Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ'ದಲ್ಲಿ ಕುಂತಿ ಆಗಲು ಒಲ್ಲೆ ಎಂದ್ರಾ ನಟಿ ಲಕ್ಷ್ಮಿ.?
'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಹೀಗಿರುವಾಗಲೇ, ಪಾತ್ರಗಳ ಆಯ್ಕೆ ವಿಚಾರದಲ್ಲೂ ಕೊಂಚ ಬದಲಾವಣೆ ಕೂಡ ಮಾಡಲಾಗುತ್ತಿದೆ.
ದುರ್ಯೋಧನ ಪತ್ನಿ ಭಾನುಮತಿ ಪಾತ್ರಕ್ಕೆ ರೆಜಿನಾ ಬದಲು ರಮ್ಯಾ ನಂಬೀಸನ್ ರವರನ್ನ ಆಯ್ಕೆ ಮಾಡಲಾಗಿದೆ. ಹಾಗೇ, ಕುಂತಿ ಪಾತ್ರಕ್ಕೆ ಹಿರಿಯ ನಟಿ ಲಕ್ಷ್ಮಿ ಬದಲು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ರವರನ್ನ ಕರೆ ತರುವ ಸಾಧ್ಯತೆ ಇದೆ.
ಕುರುಕ್ಷೇತ್ರದಲ್ಲಿ ದರ್ಶನ್ ದುರ್ಯೋಧನನ 'ಗದೆ' ಎಷ್ಟು ಕೆಜಿ ಇದೆ?
ಕುಂತಿ ಪಾತ್ರದಲ್ಲಿ ನಟಿ ಲಕ್ಷ್ಮಿ ಅಭಿನಯಿಸುವುದು ಪಕ್ಕಾ ಅಂತ ಈ ಹಿಂದೆ ಹೇಳಲಾಗಿತ್ತು. ಚಿತ್ರದ ಮುಹೂರ್ತ ಆಹ್ವಾನ ಪತ್ರಿಕೆಯಲ್ಲೂ ಲಕ್ಷ್ಮಿ ರವರ ಫೋಟೋ ಹಾಕಲಾಗಿತ್ತು. ಆದ್ರೀಗ, ಕುಂತಿ ಪಾತ್ರದಲ್ಲಿ ನಟಿ ಲಕ್ಷ್ಮಿ ಅಭಿನಯಿಸುತ್ತಿಲ್ಲ ಎನ್ನಲಾಗಿದೆ.
'ಡ್ರಾಮಾ ಜ್ಯೂನಿಯರ್ಸ್' ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾಗಿರುವ ನಟಿ ಲಕ್ಷ್ಮಿ ರವರ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಕುಂತಿ ಪಾತ್ರಕ್ಕೆ ಭಾರತಿ ವಿಷ್ಣುವರ್ಧನ್ ರವರ ಬಳಿ ಮಾತುಕತೆ ನಡೆಸಲಾಗಿದೆ ಎಂಬುದು ಮೂಲಗಳ ಮಾಹಿತಿ.
ಕುಂತಿ ಪಾತ್ರದಲ್ಲಿ ನಟಿಸಲು ನಟಿ ಭಾರತಿ ವಿಷ್ಣುವರ್ಧನ್ ಗ್ರೀನ್ ಸಿಗ್ನಲ್ ಕೊಡ್ತಾರಾ.? ನೋಡೋಣ.