Don't Miss!
- Finance April 24 Gold Rate: ಚಿನ್ನದ ಬೆಲೆ ಇಳಿಕೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Technology Infinix: ನಾಳೆ ಇನ್ಫಿನಿಕ್ಸ್ ನೋಟ್ 40 ಪ್ರೊ+ 5G ಫೋನ್ ಖರೀದಿಗೆ ಲಭ್ಯ..108ಎಂಪಿ ಕ್ಯಾಮೆರಾ!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Automobiles Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ'ದಲ್ಲಿ ಕುಂತಿ ಆಗಲು ಒಲ್ಲೆ ಎಂದ್ರಾ ನಟಿ ಲಕ್ಷ್ಮಿ.?
'ಕುರುಕ್ಷೇತ್ರ' ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿರುವ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಭರದಿಂದ ಸಾಗುತ್ತಿದೆ. ಹೀಗಿರುವಾಗಲೇ, ಪಾತ್ರಗಳ ಆಯ್ಕೆ ವಿಚಾರದಲ್ಲೂ ಕೊಂಚ ಬದಲಾವಣೆ ಕೂಡ ಮಾಡಲಾಗುತ್ತಿದೆ.
ದುರ್ಯೋಧನ ಪತ್ನಿ ಭಾನುಮತಿ ಪಾತ್ರಕ್ಕೆ ರೆಜಿನಾ ಬದಲು ರಮ್ಯಾ ನಂಬೀಸನ್ ರವರನ್ನ ಆಯ್ಕೆ ಮಾಡಲಾಗಿದೆ. ಹಾಗೇ, ಕುಂತಿ ಪಾತ್ರಕ್ಕೆ ಹಿರಿಯ ನಟಿ ಲಕ್ಷ್ಮಿ ಬದಲು ಹಿರಿಯ ನಟಿ ಭಾರತಿ ವಿಷ್ಣುವರ್ಧನ್ ರವರನ್ನ ಕರೆ ತರುವ ಸಾಧ್ಯತೆ ಇದೆ.
ಕುರುಕ್ಷೇತ್ರದಲ್ಲಿ ದರ್ಶನ್ ದುರ್ಯೋಧನನ 'ಗದೆ' ಎಷ್ಟು ಕೆಜಿ ಇದೆ?
ಕುಂತಿ ಪಾತ್ರದಲ್ಲಿ ನಟಿ ಲಕ್ಷ್ಮಿ ಅಭಿನಯಿಸುವುದು ಪಕ್ಕಾ ಅಂತ ಈ ಹಿಂದೆ ಹೇಳಲಾಗಿತ್ತು. ಚಿತ್ರದ ಮುಹೂರ್ತ ಆಹ್ವಾನ ಪತ್ರಿಕೆಯಲ್ಲೂ ಲಕ್ಷ್ಮಿ ರವರ ಫೋಟೋ ಹಾಕಲಾಗಿತ್ತು. ಆದ್ರೀಗ, ಕುಂತಿ ಪಾತ್ರದಲ್ಲಿ ನಟಿ ಲಕ್ಷ್ಮಿ ಅಭಿನಯಿಸುತ್ತಿಲ್ಲ ಎನ್ನಲಾಗಿದೆ.
'ಡ್ರಾಮಾ ಜ್ಯೂನಿಯರ್ಸ್' ಕಾರ್ಯಕ್ರಮದ ತೀರ್ಪುಗಾರರಲ್ಲಿ ಒಬ್ಬರಾಗಿರುವ ನಟಿ ಲಕ್ಷ್ಮಿ ರವರ ಡೇಟ್ಸ್ ಹೊಂದಾಣಿಕೆ ಆಗದ ಕಾರಣ ಕುಂತಿ ಪಾತ್ರಕ್ಕೆ ಭಾರತಿ ವಿಷ್ಣುವರ್ಧನ್ ರವರ ಬಳಿ ಮಾತುಕತೆ ನಡೆಸಲಾಗಿದೆ ಎಂಬುದು ಮೂಲಗಳ ಮಾಹಿತಿ.
ಕುಂತಿ ಪಾತ್ರದಲ್ಲಿ ನಟಿಸಲು ನಟಿ ಭಾರತಿ ವಿಷ್ಣುವರ್ಧನ್ ಗ್ರೀನ್ ಸಿಗ್ನಲ್ ಕೊಡ್ತಾರಾ.? ನೋಡೋಣ.