Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'99' ಚಿತ್ರದ ತ್ರಿಷಾ ಪಾತ್ರಕ್ಕೆ ಈಕೆಯೇ ನಾಯಕಿ
ಕಾಲಿವುಡ್ ಚಿತ್ರರಂಗ ಈ ವರ್ಷದ ಸೂಪರ್ ಹಿಟ್ ಸಿನಿಮಾ '96'. ಈ ಸಿನಿಮಾ ಈಗ ಕನ್ನಡಕ್ಕೆ ಬರುತ್ತಿದೆ. ಸ್ಯಾಂಡಲ್ ವುಡ್ ನಲ್ಲಿ ಈ ಸಿನಿಮಾ '99' ಎಬ ಹೆಸರಿನಲ್ಲಿ ಸೆಟ್ಟೇರಿದೆ.
'96' ಸಿನಿಮಾದಲ್ಲಿ ಕೆಲವೇ ಪಾತ್ರಗಳು ಇದ್ದರೂ, ಅವು ಪರಿಣಾಮಕಾರಿಯಾಗಿದ್ದವು. ಅದರಲ್ಲಿಯೂ ನಾಯಕಿ ಪಾತ್ರ ಸಿನಿಮಾದ ಹೈಲೆಟ್ ಆಗಿತ್ತು. ಸಿನಿಮಾ ನೋಡಿದ ಬಂದ ಮೇಲೆ ಆ ಪಾತ್ರ ಕಾಡುತ್ತಿತ್ತು. ಜಾನು ಪಾತ್ರಕ್ಕೆ ತ್ರಿಷಾ ಕೃಷ್ಣನ್ ತಮ್ಮ ನಟನೆಯ ಮೂಲಕ ಜೀವಂತಿಕೆ ತಂದಿದ್ದರು.
'96' ಸಿನಿಮಾ ಕನ್ನಡದಲ್ಲಿ : ಹೀರೋ, ಡೈರೆಕ್ಟರ್ ಇವರೇ!
ತಮಿಳಿನಲ್ಲಿ ವಿಜಯ್ ಸೇತುಪತಿ ಮಾಡಿದ ಪಾತ್ರವನ್ನ ಇಲ್ಲಿ ಗಣೇಶ್ ಮಾಡುತ್ತಿದ್ದಾರೆ. ಈಗಾಗಲೇ ಸಿನಿಮಾದ ಮುಹೂರ್ತ ನೆರವೇರಿದೆ. ಇದೀಗ ಚಿತ್ರದ ಬಗ್ಗೆ ಹೊಸ ಸುದ್ದಿ ಬಂದಿದೆ. ಅದೇನೆಂದರೆ, ಈ ಸಿನಿಮಾಗೆ ನಾಯಕಿಯ ಆಯ್ಕೆ ಆಗಿದೆಯಂತೆ. ಮುಂದೆ ಓದಿ...
ಜಾನು ಆದ ಭಾವನಾ
ನಟಿ ಜಾಕಿ ಭಾವನ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. '99' ಸಿನಿಮಾದ ನಾಯಕಿ ಯಾರು? ಎನ್ನುವ ಕುತೂಹಲ ಹೆಚ್ಚಿದ್ದು, ಈ ಪಾತ್ರಕ್ಕೆ ಭಾವನ ಆಯ್ಕೆ ಆಗಿದ್ದಾರಂತೆ. ಅಲ್ಲಿ ತ್ರಿಷಾ ನಿರ್ವಹಸಿದ್ದ ಪಾತ್ರಕ್ಕೆ, ಇಲ್ಲಿ ಭಾವನ ಮರು ಜೀವ ನೀಡಲಿದ್ದಾರೆ.
ಹೇಗಿವೆ ಈ ವಾರದ ಸಿನಿಮಾಗಳು?: ಒಂದು 'ಆರೆಂಜ್' ಮತ್ತೊಂದು ರಕ್ತ ಕೆಂಪು!
ಗಣೇಶ್ - ಭಾವನ ಜೋಡಿ
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ಭಾವನ ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಈ ಹಿಂದೆ 'ರೋಮಿಯೋ' ಸಿನಿಮಾದಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಇನ್ನು ಇವರಿಬ್ಬರ ಜೋಡಿ ತೆರೆ ಮೇಲೆ ಮುದ್ದಾಗಿ ಕಾಣುತ್ತಿದೆ.
'ಟಗರು' ನಂತರ
ಶಿವರಾಜ್ ಕುಮಾರ್ ಜೋಡಿಯಾಗಿ 'ಟಗರು' ಸಿನಿಮಾದಲ್ಲಿ ನಟಿಸಿದ್ದ ಭಾವನ ಅದರ ಜೊತೆಗೆ ಪ್ರಜ್ವಲ್ ದೇವರಾಜ್ ನಟನೆಯ 'ಇನ್ಸ್ ಪೆಕ್ಟರ್ ವಿಕ್ರಂ' ಚಿತ್ರದಲ್ಲಿ ಕಾಣಿಕೊಂಡಿದ್ದಾರೆ. ಈ ಸಿನಿಮಾಗಳ ನಂತರ '99' ಮೂಲಕ ಮತ್ತೆ ಕನ್ನಡ ಪ್ರೇಕ್ಷಕರ ಮುಂದೆ ಬಂದಿದ್ದಾರೆ.
ರಾಮು ನಿರ್ಮಾಣ, ಗುಬ್ಬಿ ನಿರ್ದೇಶನ
ಅಂದಹಾಗೆ, ಈ ಸಿನಿಮಾವನ್ನು ಪ್ರೀತಂ ಗುಬ್ಬಿ ನಿರ್ದೇಶನ ಮಾಡುತ್ತಿದ್ದಾರೆ. ಇದು ಗಣೇಶ್ ಮತ್ತು ಅವರ ಕಾಂಬಿನೇಶನ್ ನ ಹ್ಯಾಟ್ರಿಕ್ ಸಿನಿಮಾವಾಗಿದೆ. ರಾಮು ಈ ಸಿನಿಮಾಗೆ ಬಂಡವಾಳ ಹಾಕುತ್ತಿದ್ದು, ಅರ್ಜುನ್ ಜನ್ಯ ಸಂಗೀತ ಇರಲಿದೆ.