Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಬಿಗ್ ಬಾಸ್' ಮನೆಯಿಂದ ಸುದ್ದಿ ನಿರೂಪಕಿ ಶೀತಲ್ ಶೆಟ್ಟಿ ಔಟ್.?
'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮದ ನಾಲ್ಕನೇ ವಾರ ಸುದ್ದಿ ನಿರೂಪಕಿ ಶೀತಲ್ ಶೆಟ್ಟಿ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದಾರಂತೆ.!
'ಬಿಗ್ ಬಾಸ್ ಕನ್ನಡ-4' ಕಾರ್ಯಕ್ರಮದ ನಾಲ್ಕನೇ ವಾರ ಸುದ್ದಿ ನಿರೂಪಕಿ ಶೀತಲ್ ಶೆಟ್ಟಿ 'ಬಿಗ್ ಬಾಸ್' ಮನೆಯಿಂದ ಔಟ್ ಆಗಿದ್ದಾರಂತೆ.! ಕಲರ್ಸ್ ಕನ್ನಡ ವಾಹಿನಿ ಮೂಲಗಳಿಂದ ಲೀಕ್ ಆಗಿರುವ ಸುದ್ದಿ ಪ್ರಕಾರ, ಈ ವಾರ 'ದೊಡ್ಮನೆ'ಯಿಂದ ಶೀತಲ್ ಶೆಟ್ಟಿ ನಿರ್ಗಮಿಸಿದ್ದಾರೆ.
ಕೆಲವೇ ನಿಮಿಷಗಳ ಹಿಂದೆಯಷ್ಟೆ 'ವಾರದ ಕಥೇ ಕಿಚ್ಚನ ಜೊತೆ' ಕಾರ್ಯಕ್ರಮದ ಶೂಟಿಂಗ್ ಮುಗಿಯಿತು. ಅದರಲ್ಲಿ ವಾರದ ಕಿಚ್ಚಿನ ಕಥೆಯನ್ನಿಟ್ಟುಕೊಂಡು ಕಿಚ್ಚ ಸುದೀಪ್ ಪಂಚಾಯತಿ ಮಾಡಿದ ಬಳಿಕ ಕನ್ನಡ ಸುದ್ದಿವಾಹಿನಿಗಳಲ್ಲಿ ನಿರೂಪಕಿಯಾಗಿದ್ದ ಶೀತಲ್ ಶೆಟ್ಟಿಯವರನ್ನ ಹೊರಗಡೆ ಕರೆದಿದ್ದಾರೆ ಎನ್ನಲಾಗಿದೆ.['ಬಿಗ್ ಬಾಸ್ ಕನ್ನಡ-4' : ಈ ವಾರ ಗೇಟ್ ಪಾಸ್ ಯಾರಿಗೆ?]
ನಾಲ್ಕು ವಾರಗಳಲ್ಲಿ ಎರಡನೇ ಬಾರಿ ನಾಮಿನೇಟ್ ಆಗಿದ್ದ ನ್ಯೂಸ್ ಆಂಕರ್ ಶೀತಲ್ ಶೆಟ್ಟಿ ವಿರುದ್ಧ, ನಟ ಮೋಹನ್, ಸಂಜನಾ ಮತ್ತು ಭುವನ್ ಪೊನ್ನಣ್ಣ ವೋಟ್ ಮಾಡಿದ್ದರು.[ನಟಿ ಮಾಳವಿಕಾ ಮಾನ-ಮರ್ಯಾದೆ ಕಳೆದ ಶೀತಲ್ ಶೆಟ್ಟಿ & ಗ್ಯಾಂಗ್.!]
ಈ ವಾರ ಯಾರನ್ನ ಹೊರಗೆ ಕಳುಹಿಸಿಬೇಕು ಎಂಬ ಕಿಚ್ಚನ ಪಂಚಾಯಿತಿಯಲ್ಲಿ ಶಾಲಿನಿ ಹಾಗೂ ಶೀತಲ್ ಶೆಟ್ಟಿ ಮಧ್ಯೆ ಬಿಗ್ ಕಾಂಪಿಟೇಷನ್ ಇತ್ತಂತೆ. ಆದ್ರೆ, ಕೊನೆ ಘಳಿಗೆಯಲ್ಲಿ ಶಾಲಿನಿಯವರು ಸೇಫ್ ಆಗಿದ್ದಾರೆ ಎನ್ನಲಾಗಿದೆ.
ಈ ವಾರ ನಾಮಿನೇಟ್ ಆಗಿದ್ದವರು ಯಾರ್ಯಾರು? ಶೀತಲ್ ಶೆಟ್ಟಿ, ಸಂಜನಾ, ರೇಖಾ, ಶಾಲಿನಿ ಮತ್ತು ಪ್ರಥಮ್ ಈ ವಾರ ನಾಮಿನೇಟ್ ಆಗಿದ್ದರು. ಇತರರಿಗಿಂತ ಅತಿ ಕಡಿಮೆ ಎಸ್.ಎಂ.ಎಸ್ ಪಡೆದ ಕಾರಣ ಶೀತಲ್ ಶೆಟ್ಟಿ ಔಟ್ ಆಗಿದ್ದಾರೆ ಅಂತ ಹೇಳಲಾಗಿದೆ. ಅಧಿಕೃತ ಘೋಷಣೆ ಇನ್ನೂ ಆಗಿಲ್ಲ.