Don't Miss!
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- News ಎನ್ಕೌಂಟರ್ ಮಾಡುವುದಾಗಿ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ!
- Lifestyle ಮದ್ಯದ ಅಮಲಲ್ಲಿ ತೇಲಾಡುತ್ತಿದ್ದ ಶಿಕ್ಷಕನಿಗೆ ಮಕ್ಕಳಿಂದಲೇ ಚಪ್ಪಲಿ ಏಟು..!
- Finance 2.3 ಲಕ್ಷ ರೂಪಾಯಿಗೆ 9 ನಿಂಬೆಹಣ್ಣು ಹರಾಜು, ಏನಿದರ ವಿಶೇಷತೆ ತಿಳಿಯಿರಿ
- Sports RR vs DC: ಐಪಿಎಲ್ನಲ್ಲಿ ಇತಿಹಾಸ ನಿರ್ಮಿಸಲು ಸಜ್ಜಾದ ರಿಷಭ್ ಪಂತ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ವಿರುದ್ಧ ಅಭಿಮಾನಿಗಳ ಅಸಮಾಧಾನ
ಈ ರೀತಿಯ ಪ್ರಶ್ನೆಗಳು ದರ್ಶನ್ ಅಭಿಮಾನಿಗಳನ್ನು ಕಾಡುತ್ತಿವೆ. ತಮ್ಮ ನೆಚ್ಚಿನ ನಾಯಕ ನಟ ಪ್ರತಿಭಟನೆಯಲ್ಲಿ ಭಾಗವಹಿಸದೇ ಇದ್ದದ್ದಕ್ಕೆ ಅವರು ತೀವ್ರ ಅಸಮಾಧಾನಗೊಂಡಿದ್ದಾರೆ. ಈ ಬಗ್ಗೆ ಅವರು ದರ್ಶನ್ ಅವರ ರಾಜರಾಜೇಶ್ವರಿ ಮನೆಗೂ ಭೇಟಿ ನೀಡಿ ಕಾರಣ ಕೇಳಿದ್ದಾರಂತೆ.
ದರ್ಶನ್ ಅವರು 'ಬುಲ್ ಬುಲ್ ಮಾತಾಡಾಕಿಲ್ವಾ' ಚಿತ್ರೀಕರಣದಲ್ಲಿದ್ದಾರೆ. ಆ ಚಿತ್ರದ ಚಿತ್ರೀಕರಣ ಸ್ವಿಟ್ಜರ್ ಲ್ಯಾಂಡ್ ನಲ್ಲಿ ಭರದಿಂದ ಸಾಗುತ್ತಿದೆ. ಹಾಗಾಗಿ ಅವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ದರ್ಶನ್ ಕುಟುಂಬಿಕರು ತಿಳಿಸಿದ್ದಾಗಿ ಸುದ್ದಿ.
ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಇಡೀ ಕನ್ನಡ ಚಿತ್ರೋದ್ಯಮ ಶನಿವಾರ (ಅ.6) ಫಿಲಂ ಚೇಂಬರ್ ಮುಂದೆ ಸೇರಿ ಪ್ರತಿಭಟಿಸಿತ್ತು. ಈ ಪ್ರತಿಭಟನೆಯಲ್ಲಿ ಹಲವಾರು ಸಿನೆಮಾ ತಾರೆಗಳು ಭಾಗವಹಿಸಿದ್ದರು. ಆದರೆ ನಟ ದರ್ಶನ ಮಾತ್ರ ಅಂದು ಕಾಣಿಸಿಕೊಂಡಿರಲಿಲ್ಲ.
ಸ್ವಿಟ್ಜರ್ ಲ್ಯಾಂಡ್ ನಿಂದ ಕನ್ನಡ ಟಿವಿ ವಾಹಿನಿಗಳಿಗೆ ಕರೆ ಮಾಡಿದ ಅವರು, ಕಾವೇರಿ ಹೋರಾಟಕ್ಕೆ ನನ್ನ ಬೆಂಬಲವಿದೆ. ಕಾವೇರಿ ನನ್ನೊಬ್ಬನದಲ್ಲ. ಇದು ನಮ್ಮೆಲ್ಲರದ್ದು. ಕಾವೇರಿ ಎಂದೆಂದಿಗೂ ಕರ್ನಾಟಕದ ಸ್ವತ್ತು. ಶಾಂತಿಯುತವಾಗಿ ನಾವೆಲ್ಲರೂ ಹೋರಾಡೋಣ. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದಿದ್ದರು.
ಆದರೆ ಈ ವಿಚಾರ ಗೊತ್ತಿಲ್ಲದ ದರ್ಶನ್ ಅಭಿಮಾನಿಗಳು ತಮ್ಮ ನೆಚ್ಚಿನ ನಾಯಕ ನಟ ಬರಲಿಲ್ಲವಲ್ಲಾ ಎಂದು ಅಸಮಾಧಾನಗೊಂಡಿದ್ದಾರೆ. "ರಾಜ್ಯದ ವಿಷಯ ಬಂದಾಗ ಕರ್ನಾಟಕ ಮೊದಲು...ಜಿಲ್ಲೆಯ ವಿಷಯ ಬಂದಾಗ ಮಂಡ್ಯ ಮೊದಲು" ಎಂಬ ದರ್ಶನ್ ಅವರ ಜನಪ್ರಿಯ ಡೈಲಾಗ್ ಗೆ ಈಗಲೂ ಅವರು ಬದ್ಧರಾಗಿದ್ದಾರೆ. ಅಭಿಮಾನಿಗಳು ಅಸಮಾಧಾನಗೊಳ್ಳಬೇಕಾಗಿಲ್ಲ ಎನ್ನುತ್ತವೆ ಮೂಲಗಳು. (ಏಜೆನ್ಸೀಸ್)