Don't Miss!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Finance ಡಾ. ರಾಜ್ಕುಮಾರ್ ಜನ್ಮದಿನದಂದು ಹೊಸ ಉದ್ಯಮ ಆರಂಭಿಸಿದ ಅಶ್ವಿನಿ ಪುನೀತ್ ರಾಜ್ಕುಮಾರ್
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- News Realme Narzo 70: ಭರ್ಜರಿ ಕ್ಯಾಮೆರಾ ಫೀಚರ್ಗಳೊಂದಿಗೆ ರಿಯಲ್ಮಿ ನಾರ್ಜೊ 70 ಗ್ರ್ಯಾಂಡ್ ಲಾಂಚ್
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂಬಿ ಮಗನ ಚೊಚ್ಚಲ ಚಿತ್ರದಲ್ಲಿ ಮತ್ತೊಂದು ಟ್ವಿಸ್ಟ್.!
Recommended Video
ರೆಬಲ್ ಸ್ಟಾರ್ ಅಂಬರೀಷ್ ಅವರ ಮಗನ ಚಿತ್ರಕ್ಕೆ ಎಲ್ಲ ಸಿದ್ದತೆಗಳು ನೆರವೇರುತ್ತಿದ್ದು, ಅಂತಿಮ ಹಂತದಲ್ಲಿ ಮಹತ್ವದ ಬದಲಾವಣೆ ಆಗಿದೆ. ಈ ಮೊದಲೇ ಸುದ್ದಿಯಾಗಿರುವಂತೆ ಸಂದೇಶ್ ನಾಗರಾಜ್ ಅವರ ಪ್ರೊಡಕ್ಷನ್ ನಲ್ಲಿ ಅಂಬಿ ಮಗನ ಎಂಟ್ರಿ ಆಗುವುದು ಖಚಿತ ಎನ್ನಲಾಗಿದೆ. ನಿರ್ದೇಶಕರು ಕೂಡ ಫಿಕ್ಸ್ ಆಗಿದ್ದರು.
ಆದ್ರೀಗ, ಅಭಿಷೇಕ್ ಅಭಿನಯಿಸಿರುವ ಮೊದಲ ಚಿತ್ರಕ್ಕೆ ನಿರ್ದೇಶಕರು ಬದಲಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಮೂಲಗಳ ಪ್ರಕಾರ, ನಿರ್ದೇಶಕ ಪವನ್ ಒಡೆಯರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಬೇಕಿತ್ತು. ಈಗ ಅವರ ಜಾಗಕ್ಕೆ ಚೇತನ್ ಕುಮಾರ್ ಬಂದಿದ್ದಾರೆ ಎನ್ನಲಾಗಿದೆ.
ಅಂಬಿ ಪುತ್ರನಿಗೆ 'ಒಡೆಯರ್' ಆಕ್ಷನ್ ಕಟ್: ದರ್ಶನ್ 'ಒಡೆಯರ್' ಏನಾಯ್ತು?
ಪವನ್ ಒಡೆಯರ್ ಎರಡು ಚಿತ್ರಗಳಲ್ಲಿ ಬ್ಯುಸಿಯಾಗಿದ್ದು, ಮತ್ತೊಂದೆಡೆ ಪುನೀತ್ ರಾಜ್ ಕುಮಾರ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಹೀಗಾಗಿ, ಎರಡು ಕಡೆ ಬ್ಯಾಲೆನ್ಸ್ ಮಾಡಲು ಕಷ್ಟವಾಗಬಹುದು ಎಂಬ ಕಾರಣಕ್ಕೆ ಚೇತನ್ ಕುಮಾರ್ ಅವರನ್ನ ಕರೆತರಲಾಗಿದೆ ಎಂದು ಹೇಳಲಾಗಿದೆ.
ಅಂಬರೀಶ್ ಮಗನ ಸಿನಿಮಾ ಬಗ್ಗೆ ಹೀಗೊಂದು ಸುದ್ದಿ
'ಬಹುದ್ದೂರ್', 'ಭರ್ಜರಿ' ಚಿತ್ರಗಳ ನಂತರ ಚೇತನ್ ಕುಮಾರ್ ಮತ್ತಷ್ಟು ಬ್ಯುಸಿಯಾಗಿದ್ದು, ದರ್ಶನ್ ಅಭಿನಯಿಸುತ್ತಿರುವ 51ನೇ ಚಿತ್ರಕ್ಕೆ ಸಂಭಾಷಣೆ ಬರೆಯುತ್ತಿದ್ದಾರೆ. ಅದರ ಜೊತೆಗೆ ಶಿವರಾಜ್ ಕುಮಾರ್ ಅಭಿನಯದ 'ಎಸ್.ಆರ್.ಕೆ' ಹಾಗೂ ಗಣೇಶ್ ಅಭಿನಯದ 'ಆರೇಂಜ್' ಚಿತ್ರದಲ್ಲೂ ಚೇತನ್ ಕೆಲಸ ಮಾಡುತ್ತಿದ್ದಾರೆ.
ಅಂದ್ಹಾಗೆ, ಅಂಬರೀಷ್ ಮಗನ ಮೊದಲ ಚಿತ್ರಕ್ಕೆ 'ಜಲೀಲಾ' ಎಂದು ಹೆಸರಿಟ್ಟಿದ್ದು, ಎಲ್ಲ ಅಂದುಕೊಂಡಂತೆ ಆದ್ರೆ, ಇದೇ ವರ್ಷ ಸಿನಿಮಾ ಸೆಟ್ಟೇರಲಿದೆ.