Don't Miss!
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Automobiles ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- Technology ಇಂದು 3D ಕರ್ವ್ಡ್ ಡಿಸ್ಪ್ಲೇ ಇರುವ ಈ ಫೋನಿನ ಸೇಲ್!..ಆಫರ್ ಬೆಲೆ ಎಷ್ಟು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲು ಅರ್ಜುನ್ಗೆ ಶಾಕ್ ನೀಡಿದ ಚಿರಂಜೀವಿ: ಕ್ರಿಸ್ಮಸ್ ರೇಸ್ನಲ್ಲಿ ಆಚಾರ್ಯ?
ಸ್ಟಾರ್ ಕಲಾವಿದರ ಸಿನಿಮಾ ಬಿಡುಗಡೆ ದಿನಾಂಕ ದೊಡ್ಡ ತಲೆನೋವಾಗಿದೆ. ಬಿಗ್ ಬಜೆಟ್ ನ ಪ್ಯಾನ್ ಇಂಡಿಯಾ ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿದ್ದು, ಯಾವಾಗ ಅಭಿಮಾನಿಗಳ ಮುಂದೆ ಬರಬೇಕೆಂದು ಲೆಕ್ಕಾಚಾರ ಹಾಕುತ್ತಿದ್ದಾರೆ. ಸಾಲು ಸಾಲು ಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ. ಪ್ಯಾನ್ ಇಂಡಿಯಾ ಸಿನಿಮಾಗಳು ಹೆಚ್ಚಾಗುತ್ತಿರುವ ಕಾರಣ ಎಲ್ಲಾ ಭಾಷೆಯ ಸಿನಿಮಾಗಳು ತುಂಬಾ ಲೆಕ್ಕಾಚಾರ ಮಾಡಿ ಸಿನಿಮಾ ಬಿಡುಗಡೆ ಮಾಡಬೇಕಾದ ಅನಿರ್ವಾಯತೆ ಬಂದಿದೆ.
ಈಗಾಗಲೇ ದೀಪಾವಳಿ, ಕ್ರಿಸ್ಮಸ್ ಮತ್ತು ಸಂಕ್ರಾಂತಿಗೆ ಅನೇಕ ಸಿನಿಮಾಗಳು ಬಿಡುಗಡೆ ಸಜ್ಜಾಗಿ ನಿಂತಿವೆ. ತೆಲುಗಿನಲ್ಲಂತೂ ಬಹುತೇಕ ಸ್ಟಾರ್ ನಟರ ಸಿನಿಮಾಗಳು ಸಂಕ್ರಾಂತಿಗೆ ಬರುವುದಾಗಿ ಘೋಷಣೆ ಮಾಡಿದ್ದಾರೆ. ಮಹೇಶ್ ಬಾಬು ನಟನೆಯ ಸರ್ಕಾರು ವಾರಿ ಪಾಟ, ಪ್ರಭಾಸ್ ನಟನೆಯ ರಾಧೆ ಶ್ಯಾಮ್, ಪವನ್ ಕಲ್ಯಾಣ್ ನಟನೆಯ ಭೀಮಲ ನಾಯಕ್ ಸಿನಿಮಾಗಳ ಜೊತೆಗೀಗ ಬಹುನಿರೀಕ್ಷೆಯ ಆರ್ ಆರ್ ಆರ್ ಸಿನಿಮಾ ಕೂಡ ಸಂಕ್ರಾಂತಿಗೆ ಬರುವುದಾಗಿ ಹೇಳಿಕೊಂಡಿದೆ. ಬಿಗ್ ಬಜೆಟ್ ನ ಬಿಗ್ ಸ್ಟಾರ್ ಸಿನಿಮಾಗಳು ಒಮ್ಮೆಗೆ ಚಿತ್ರಮಂದಿರಕ್ಕೆ ಅಪ್ಪಳಿಸಲು ರೆಡಿಯಾಗಿರುವುದು ಬಾಕ್ಸ್ ಆಫೀಸ್ ದೊಡ್ಡ ವಾರ್ ಖಂಡಿತ ಎನ್ನುತ್ತಿದ್ದಾರೆ ಸಿನಿಪಂಡಿತರು.
ಈ ನಡುವೆ ಈಗ ಮೆಗಾಸ್ಟಾರ್ ಚಿರಂಜೀವಿ ಈಗ ಅಲ್ಲು ಅರ್ಜುನ್ ಗೆ ದೊಡ್ಡ ಶಾಕ್ ನೀಡಿದ್ದಾರೆ. ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಪುಷ್ಪ ಪಾರ್ಟ್-1 ಈ ವರ್ಷದ ಕೊನೆಯಲ್ಲಿ ಅಂದರೆ ಕ್ರಿಸ್ಮಸ್ ಗೆ ಬರಲು ಸಿದ್ಧವಾಗಿದೆ. ಈಗಾಗಲೇ ಹಾಡು ಮತ್ತು ಟೀಸರ್ ಮೂಲಕ ಗಮನ ಸೆಳೆಯುತ್ತಿರುವ ಪುಷ್ಪ ಸಿನಿಮಾ ನೋಡಲು ಪ್ರೇಕ್ಷಕರು ಕಾತರರಾಗಿದ್ದಾರೆ. ಆದರೀಗ ಚಿರಂಜೀವಿ ಕೂಡ ಕ್ರಿಸ್ಮಸ್ ಗೆ ಎಂಟ್ರಿಗೆ ಕಾಯುತ್ತಿದ್ದಾರೆ ಎನ್ನಲಾಗುತ್ತಿದೆ.
ಚಿರಂಜೀವಿ ನಟನೆಯ ಆಚಾರ್ಯ ಸಿನಿಮಾವನ್ನು ಕ್ರಿಸ್ಮಸ್ ಗೆ ಬಿಡುಗಡೆ ಮಾಡಲು ಚಿತ್ರತಂಡ ತಯಾರಿ ನಡೆಸುತ್ತಿದೆ ಎನ್ನುವ ಮಾತುಗಳು ಟಾಲಿವುಡ್ ಅಂಗಳದಲ್ಲಿ ಕೇಳಿಬರುತ್ತಿದೆ. ಆಚಾರ್ಯ ಸಿನಿಮಾ ದೀಪಾವಳಿಗೆ ಬಿಡುಗಡೆ ಮಾಡುವ ಪ್ಲಾನ್ ಮಾಡಿತ್ತು ಚಿತ್ರತಂಡ. ಆದರೆ ಚಿತ್ರೀಕರಣ ತಡವಾದ ಕಾರಣ ಕ್ರಿಸ್ಮಸ್ ಗೆ ಬಿಡುಗಡೆ ಮಾಡಲು ನಿರ್ಧರಿಸಿದೆಯಂತೆ. ಆಚಾರ್ಯ ಎಂಟ್ರಿ ಈಗ ಅಲ್ಲು ಅರ್ಜುನ್ ಪುಷ್ಪ ಚಿತ್ರಕ್ಕೆ ದೊಡ್ಡ ತಲೆನೋವಾಗಿದೆ.
ಆಚಾರ್ಯ ಕೂಡ ಸಂಕ್ರಾಂತಿ ಬಿಡುಗಡೆ ಮಾಡುವ ಯೋಚನೆಯಲ್ಲಿತ್ತು ಸಿನಿಮಾತಂಡ. ಆದರೆ ಸಂಕ್ರಾಂತಿ ರೇಸ್ ನಲ್ಲಿ ಸಾಲು ಸಾಲು ಸಿನಿಮಾಗಳಿವೆ. ಹಾಗಾಗಿ ಆಚಾರ್ಯ ಚಿತ್ರವನ್ನು ಕ್ರಿಸ್ಮಸ್ ಗೆ ಬಿಡುಗಡೆ ಮಾಡುವ ತಯಾರಿ ನಡೆಯುತ್ತಿದೆಯಂತೆ. ಈ ಬಗ್ಗೆ ಆಚಾರ್ಯ ತಂಡ ಮೈತ್ರಿ ಮೂವಿಸ್ ಜೊತೆ ಮಾತುಕತೆ ನಡೆಸುತ್ತಿದೆ ಎನ್ನಲಾಗುತ್ತಿದೆ. ಒಂದು ವೇಳೆ ಆಚಾರ್ಯ ಸಿನಿಮಾ ಕ್ರಿಸ್ಮಸ್ ಗೆ ಎಂಟ್ರಿ ಕೊಟ್ಟರೆ ಪುಷ್ಪ ಚಿತ್ರದ ಬಿಡುಗಡೆ ಮತ್ತೆ ಮುಂದಕ್ಕೆ ಹೋಗುವ ಸಾಧ್ಯತೆ ಇದೆ.
ಪುಷ್ಪ ಚಿತ್ರ ಮತ್ತೆ ಮುಂದಕ್ಕೆ ಹೋದರೆ ಬಿಡುಗಡೆ ದಿನಾಂಕ ಮತ್ತೆ ತಲೆನೋವಾಗಲಿದೆ. ಈಗಾಗಲೇ ಅನೇಕ ಸಿನಿಮಾಗಳ ಬಿಡುಗಡೆ ದಿನಾಂಕ ಲಾಕ್ ಆಗಿವೆ. ಈ ನಡುವೆ ಕನ್ನಡ ಕೆಜಿಎಫ್-2 ಏಪ್ರಿಲ್ ನಲ್ಲಿ ತೆರೆಗೆ ಬರುತ್ತಿದೆ, ಸಲಾರ್ ಸಿನಿಮಾ ಕೂಡ ರೇಸ್ ನಲ್ಲಿದೆ. ಹಾಗಾಗಿ ಕ್ರಿಸ್ಮಸ್ ನಲ್ಲಿ ಪುಷ್ಪ ಬಿಡುಗಡೆ ಆಗದಿದ್ದರೇ ಮುಂದಿನ ವರ್ಷ ಬೇಸಿಗೆ ಸಮಯದಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಕೊರೊನಾ ಕಾರಣದಿಂದ ಸಿನಿಮಾಗಳ ಬಿಡುಗಡೆ ದಿನಾಂಕ ದೊಡ್ಡ ತಲೆನಾವಾಗಿದೆ. ದಕ್ಷಿಣ ಭಾರತದಲ್ಲಿ ಸಾಕಷ್ಟು ಬಹುನಿರೀಕ್ಷೆಯ ಸಿನಿಮಾಗಳು ಬಿಡುಗಡೆ ಪರದಾಡುತ್ತಿವೆ. ಈ ನಡುವೆ ಕೊರೊನಾ 3ನೇ ಅಲೆಯ ಆತಂಕ ಕೂಡ ಮನಮಾಡಿದೆ. ಒಂದು ವೇಳೆ 3ನೇ ಅಪ್ಪಳಿಸಿದರೇ ಮತ್ತೆ ಸಿನಿಮಾ ಬಿಡುಗಡೆ ಮೇಲೆ ದೊಡ್ಡ ಪರಿಣಾಮ ಬೀಳಲಿದೆ.