Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೆಗಾ ಕುಟುಂಬದಿಂದ ಮತ್ತೊಮ್ಮೆ ಸರ್ಪ್ರೈಸ್: ಶಂಕರ್ ಪ್ರಾಜೆಕ್ಟ್ ಮೇಲೆ ಕಣ್ಣು?
ಮೆಗಾ ಕುಟುಂಬ ಬಹಳ ಬ್ಯುಸಿಯಾಗಿದೆ. ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ 'ಆಚಾರ್ಯ' ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕೊರಟಲಾ ಶಿವ ನಿರ್ದೇಶನದಲ್ಲಿ ತಯಾರಾಗುತ್ತಿರುವ ಆಚಾರ್ಯ ಮೇ ತಿಂಗಳಲ್ಲಿ ತೆರೆಗೆ ಬರಲಿದೆ. ಈ ಚಿತ್ರಕ್ಕೆ ಚಿರಂಜೀವಿ ಪುತ್ರ ರಾಮ್ ಚರಣ್ ತೇಜ ಬಂಡವಾಳ ಹಾಕಿದ್ದಾರೆ. ಜೊತೆಗೆ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.
ಮತ್ತೊಂದೆಡೆ ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಸಿದ್ದವಾಗುತ್ತಿರುವ ಆರ್ ಆರ್ ಆರ್ ಚಿತ್ರದಲ್ಲಿ ರಾಮ್ ಚರಣ್ ನಟಿಸುತ್ತಿದ್ದಾರೆ. ಜೂನಿಯರ್ ಎನ್ಟಿಆರ್ ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ. ಅಕ್ಟೋಬರ್ 13 ರಂದು ಈ ಸಿನಿಮಾ ಐದು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಹೀಗೆ, ದೊಡ್ಡ ಪ್ರಾಜೆಕ್ಟ್ಗಳಲ್ಲಿ ತೊಡಗಿಕೊಂಡಿರುವ ಮೆಗಾ ಕುಟುಂಬದಿಂದ ಮತ್ತೊಂದು ಸರ್ಪ್ರೈಸ್ ಸುದ್ದಿ ಹೊರಬಿದ್ದಿದೆ. ಮುಂದೆ ಓದಿ...
ಮತ್ತೊಮ್ಮೆ ಒಂದಾದ ಚಿರು-ಚರಣ್?
'ಮಗಧೀರ' ಸಿನಿಮಾದಲ್ಲಿ ಚಿರಂಜೀವಿ ಅತಿಥಿ ಪಾತ್ರ ನಿರ್ವಹಿಸಿದ್ದರು. ನಂತರ 'ಬ್ರೂಸ್ ಲೀ' ಚಿತ್ರದಲ್ಲಿ ದೃಶ್ಯವೊಂದರಲ್ಲಿ ಕಾಣಿಸಿಕೊಂಡಿದ್ದರು. ಇದೀಗ, ಆಚಾರ್ಯ ಸಿನಿಮಾದಲ್ಲಿ ರಾಮ್ ಚರಣ್ ತೇಜ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಬಳಿಕ ಮತ್ತೊಮ್ಮೆ ಚಿರಂಜೀವಿ ಮತ್ತು ರಾಮ್ ಚರಣ್ ತೇಜ ಮತ್ತೊಮ್ಮೆ ಒಟ್ಟಿಗೆ ನಟಿಸಲಿದ್ದಾರೆ ಎಂಬ ಸುದ್ದಿ ಟಾಲಿವುಡ್ನಲ್ಲಿ ಚರ್ಚೆಯಾಗುತ್ತಿದೆ.
ಆಚಾರ್ಯ ಚಿತ್ರೀಕರಣದಲ್ಲಿ ಚಿರಂಜೀವಿ-ರಾಮ್ ಚರಣ್ ತೇಜ ಕಮಾಲ್
ಶಂಕರ್ ಪ್ರಾಜೆಕ್ಟ್ನಲ್ಲಿ ಚಿರಂಜೀವಿ
ಆರ್ಆರ್ಆರ್ ಸಿನಿಮಾದ ಬಳಿಕ ನಿರ್ದೇಶಕ ಶಂಕರ್ ಜೊತೆ ರಾಮ್ ಚರಣ್ ತೇಜ ಮುಂದಿನ ಸಿನಿಮಾ ಮಾಡ್ತಿದ್ದಾರೆ. ಈ ಚಿತ್ರ ಅದಾಗಲೇ ಅಧಿಕೃತವಾಗಿ ಘೋಷಣೆಯಾಗಿದೆ. ಹೊಸದಾಗಿ ವೈರಲ್ ಆಗಿರುವ ಸುದ್ದಿ ಏನಪ್ಪಾ ಅಂದ್ರೆ ಈ ಚಿತ್ರದಲ್ಲಿ ಮೆಗಾಸ್ಟಾರ್ ಸಹ ಇರಲಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಇಲ್ಲ.
ಪೊಲಿಟಿಕಲ್ ಥ್ರಿಲ್ಲರ್ ಸಿನಿಮಾ
ಶಂಕರ್ ಮತ್ತು ರಾಮ್ ಚರಣ್ ಜೋಡಿಯಲ್ಲಿ ಸೆಟ್ಟೇರಿರುವ ಸಿನಿಮಾ ಪೊಲಿಟಿಕಲ್ ಥ್ರಿಲ್ಲರ್ ಆಗಿದೆ ಎಂದು ಹೇಳಲಾಗುತ್ತಿದೆ. ಮೆಗಾಪುತ್ರ ಐಎಎಸ್ ಅಧಿಕಾರಿ ಹಾಗೂ ಮುಖ್ಯಮಂತ್ರಿ ಪಾತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ. ಈ ಚಿತ್ರದಲ್ಲಿ ಚಿರಂಜೀವಿ ಪವರ್ ಫುಲ್ ಪಾತ್ರವೊಂದನ್ನು ನಿಭಾಯಿಸಲಿದ್ದಾರೆ ಎನ್ನಲಾಗಿದೆ.
ಟ್ವಿಟ್ಟರ್ನಲ್ಲಿ ಚಿರಂಜೀವಿ ಫಾಲೋ ಮಾಡೋದು ಒಬ್ಬರನ್ನೇ: ಅವರು ಯಾರು ಗೊತ್ತೆ?
ಇಂಡಿಯನ್ 2 ಸಿನಿಮಾ ನಿಂತಿದೆ
ಎಂಥಿರನ್, ಐ, 2.0 ಅಂತಹ ಸಿನಿಮಾಗಳನ್ನು ಮಾಡಿರುವ ಶಂಕರ್ ಕಮಲ್ ಹಾಸನ್ ಜೊತೆ ಇಂಡಿಯನ್ 2 ಚಿತ್ರ ಆರಂಭಿಸಿದ್ದರು. ಹಣಕಾಸಿನ ಸಮಸ್ಯೆಯಿಂದ ಈ ಚಿತ್ರ ನಿಂತು ಹೋಗಿದೆ. ಆ ಪ್ರಾಜೆಕ್ಟ್ ಪಕ್ಕಕ್ಕೆ ಇಟ್ಟಿರುವ ಶಂಕರ್, ರಾಮ್ ಚರಣ್ ಜೊತೆಗಿನ ಸಿನಿಮಾ ಆರಂಭಿಸಿದ್ದಾರೆ. ಪ್ರಿ-ಪ್ರೊಡಕ್ಷನ್ ಕೆಲಸ ಆರಂಭಿಸಿದ್ದು, ಆದಷ್ಟೂ ಬೇಗ ಶೂಟಿಂಗ್ ಶುರು ಮಾಡಲಿದ್ದಾರೆ. ಇನ್ನುಳಿದಂತೆ ಈ ಚಿತ್ರದ ಬಗ್ಗೆ ಯಾವುದೇ ಅಪ್ಡೇಟ್ ಇಲ್ಲ.