Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಯಾರೂ ನಿರೀಕ್ಷೆ ಮಾಡದ ನಟ ಈಗ ದರ್ಶನ್ 'ಕುರುಕ್ಷೇತ್ರ'ದಲ್ಲಿ ಭೀಮ.!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಲಿಸರುವ 50ನೇ ಚಿತ್ರ 'ಕುರುಕ್ಷೇತ್ರ' ಜುಲೈ 30 ರಂದು ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸೆಟ್ಟೇರಲಿದೆ. ದರ್ಶನ್ ಸೇರಿದಂತೆ ಹಲವು ಪಾತ್ರಗಳು ಈಗಾಗಲೇ ಅಂತಿಮವಾಗಿದೆ.
ದುರ್ಯೋಧನ, ಶ್ರೀಕೃಷ್ಣ, ಭೀಷ್ಮಾ, ದ್ರೋಣಾಚಾರ್ಯ, ಧೃತರಾಷ್ಟ್ರ, ಶಕುನಿ, ಕುಂತಿ, ಭಾನುಮತಿ, ಹೀಗೆ ಬಹುತೇಕ ಪಾತ್ರಗಳು ಸೋಲ್ಡ್ ಔಟ್ ಆಗಿವೆ. ಪಾಂಡವರು ಪಾತ್ರಗಳು ಆಯ್ಕೆ ಪ್ರಕ್ರಿಯೆಯಲ್ಲಿದ್ದು, ಪಾಂಡವರಲ್ಲಿ ಮೊದಲ ಪಾತ್ರವಾಗಿ ಭೀಮ ಆಯ್ಕೆ ಆಗಿದ್ದಾರಂತೆ.
ಯಾರೂ ಕೂಡ ಈ ನಟ ಭೀಮನ ಪಾತ್ರಕ್ಕೆ ಆಯ್ಕೆಯಾಗುತ್ತಾನೆಂದು ಊಹೆ ಮಾಡಿರಲಿಲ್ಲ. ಅಂತಹ ಕಲಾವಿದ 'ಕುರುಕ್ಷೇತ್ರ' ಕಾಳಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹಾಗಿದ್ರೆ, ದರ್ಶನ್ 'ಕುರುಕ್ಷೇತ್ರ'ದಲ್ಲಿ ಭೀಮ ಯಾರು ಎಂದು ತಿಳಿದುಕೊಳ್ಳಲು ಮುಂದೆ ಓದಿ.....
ಕನ್ನಡದ 'ಕುರುಕ್ಷೇತ್ರ'ಕ್ಕೆ ಬಾಲಿವುಡ್ ನಟ
ಮುನಿರತ್ನ ನಿರ್ಮಾಣ ಮಾಡುತ್ತಿರುವ ಬಹುಕೋಟಿ ವೆಚ್ಚದ ಕುರುಕ್ಷೇತ್ರದಲ್ಲಿ ಭೀಮನ ಪಾತ್ರಕ್ಕಾಗಿ ರಾಣಾ ದಗ್ಗುಬಾಟಿ ಬರ್ತಾರೆ, ಮತ್ತೊಬ್ಬರು ಬರ್ತಾರೆ ಎನ್ನಲಾಗಿತ್ತು. ಆದ್ರೆ, ಅಂತಿಮವಾಗಿ ಬಾಲಿವುಡ್ ನಟ ಭೀಮನ ಪಾತ್ರಕ್ಕೆ ಆಯ್ಕೆ ಆಗಿದ್ದಾರಂತೆ.
ದರ್ಶನ್ ಅಂಡ್ ಟೀಂ ರೆಡಿ: ಜುಲೈ 30ಕ್ಕೆ 'ಕುರುಕ್ಷೇತ್ರ' ಶುರು
ಹಿಂದಿಯ ಕಿರುತೆರೆ ಕಲಾವಿದ
ಬಾಲಿವುಡ್ ನ ಕಿರುತೆರೆ ನಟ ಕಮ್ ಬಾಡಿ ಬಿಲ್ಡರ್ ಡ್ಯಾನಿಶ್ ಅಖ್ತರ್ ಸೈಫಿ ಭೀಮನ ಪಾತ್ರಕ್ಕೆ ಆಯ್ಕೆ ಆಗಿದ್ದಾರೆ ಎನ್ನಲಾಗಿದೆ. ಆದ್ರೆ, ಈ ಬಗ್ಗೆ ಅಧಿಕೃತ ಘೋಷಣೆ ಮಾಡಬೇಕಿದೆಯಂತೆ.
ಬಿಗ್ ಬ್ರೇಕಿಂಗ್: 'ಕುರುಕ್ಷೇತ್ರ'ಕ್ಕೆ ದ್ರೌಪದಿ ಸಿಕ್ಕಿದ್ರಂತೆ.!
ಡ್ಯಾನಿಶ್ ಅಖ್ತರ್ ಸೈಫಿ ಯಾರು?
ಡ್ಯಾನಿಶ್ ಅಖ್ತರ್ ಸೈಫಿ ಮುಂಬೈನಲ್ಲಿ ನೆಲಸಿರುವ ಬಿಹಾರ್ ನಿವಾಸಿ. ವೃತ್ತಿಯಲ್ಲಿ ಕಲಾವಿದನಾಗಿರುವ ಡ್ಯಾನೀಶ್ ಹಾಗೂ ಕುಸ್ತಿ ಪಟು ಕೂಡ ಹೌದು. 6.6 ಅಡಿ ಎತ್ತರ ಇರುವ ಡ್ಯಾನಿಶ್ 125 ಕೆ.ಜಿ ತೂಕವಿದ್ದಾರೆ. ಹಿಂದಿಯ ಧಾರವಾಹಿಯಲ್ಲಿ ನಟಿಸುತ್ತಿದ್ದಾರೆ.
'ಕುರುಕ್ಷೇತ್ರ'ಕ್ಕೆ ಕಾಲಿಟ್ಟ ಮತ್ತಿಬ್ಬರು ಸ್ಟಾರ್ ನಟರು!
ಆಂಜನೇಯನ ಪಾತ್ರ ಹೆಚ್ಚು ಫೇಮಸ್
ಹಿಂದಿಯಲ್ಲಿ ಪ್ರಸಾರವಾಗುವ ಸಿಯಾ ಕೇ ರಾಮ್ ಧಾರವಾಹಿಯಲ್ಲಿ ಡ್ಯಾನಿಶ್ ಅಖ್ತರ್ ಸೈಫಿ ಆಂಜನೇಯನ ಪಾತ್ರ ಮಾಡಿದ್ದರಂತೆ. ಈ ಪಾತ್ರದ ಮೂಲಕ ಬಾಲಿವುಡ್ ಪ್ರೇಕ್ಷಕರ ಗಮನ ಸೆಳೆದಿದ್ದರು.
ದರ್ಶನ್ ವರ್ಸಸ್ ಡ್ಯಾನಿಶ್
ಈ ಮೂಲಕ 'ಕುರುಕ್ಷೇತ್ರ' ಚಿತ್ರದಲ್ಲಿ ದರ್ಶನ್ ವರ್ಸಸ್ ಡ್ಯಾನಿಶ್ ಎಂಬ ಎರಡು ಮದಗಜಗಳು ಕಾದಾಟ ನಡೆಸಲಿವೆ. ಈ ಸುದ್ದಿ ಇನ್ನು ಅಧಿಕೃತವಾಗಿಲ್ಲ. ಜುಲೈ 30ರಂದು ಸಿನಿಮಾ ಸೆಟ್ಟೇರಲಿದ್ದು, ಯಾವ ಯಾವ ಕಲಾವಿದರು 'ಕುರುಕ್ಷೇತ್ರ'ದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಉತ್ತರ ಸಿಗುವ ನಿರೀಕ್ಷೆ ಇದೆ. ಕಾದು ನೋಡೋಣ.
50ನೇ ಸಿನಿಮಾ 'ಕುರುಕ್ಷೇತ್ರ'ಕ್ಕಾಗಿ ಡಿ ಬಾಸ್ ದರ್ಶನ್ ಸಿಕ್ಕಾಪಟ್ಟೆ ಡೆಡಿಕೇಶನ್