Don't Miss!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- News Delhi Rain: ದೆಹಲಿಯಲ್ಲಿ ದಾರಾಕಾರ ಮಳೆ: ಬಿಸಿಲಿನ ಶಾಖದಿಂದ ಪರಿಹಾರ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಬಾರ್ ಸಿನಿಮಾ ಈ ಪೊಲೀಸ್ ಅಧಿಕಾರಿಯ ಜೀವನಕಥೆ!
ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ದರ್ಬಾರ್ ಸಿನಿಮಾ ಬಿಡುಗಡೆಯಾಗಿದ್ದು, ಬಾಕ್ಸ್ ಆಫೀಸ್ ನಲ್ಲಿ ಅಬ್ಬರಿಸುತ್ತಿದೆ. ಸುಮಾರು 27 ವರ್ಷದ ನಂತರ ಪೊಲೀಸ್ ಅಧಿಕಾರಿಯಾಗಿ ನಟಿಸಿರುವ ರಜನಿ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ.
Recommended Video
ಸಿನಿಮಾದಲ್ಲಿ ರಜನಿಕಾಂತ್ ಕೆಟ್ಟ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಂಡಿದ್ದು, ಮುಂಬೈ ನಗರವನ್ನ ನಡುಗಿಸುವಂತಹ ಪಾತ್ರ ನಿರ್ವಹಿಸಿದ್ದಾರೆ.
ಮೊದಲ ದಿನವೇ ರಜನಿಕಾಂತ್ ದರ್ಬಾರ್ ಗೆ ಆಘಾತ!
ಮುಂಬೈ ನಗರ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕಾರ ಮಾಡುವ ಆಧಿತ್ಯ ಅರುಣಾಚಲಂ, ಸಿಕ್ಕ ಸಿಕ್ಕ ಕಡೆಯಲೆಲ್ಲ ರೌಡಿಗಳನ್ನು ಎನ್ ಕೌಂಟರ್ ಮಾಡ್ತಾರೆ. ತನಿಖೆಗೆ ಬರುವ ಮಾನವ ಹಕ್ಕಗಳು ಆಯೋಗದ ಅಧಿಕಾರಿಯನ್ನು ಭಯಪಡಿಸಿ ವರದಿ ಬರೆಸಿಕೊಳ್ಳುವಷ್ಟು ಕೆಟ್ಟ ಪೊಲೀಸ್ ರಜನಿಕಾಂತ್.
ಕೆಟ್ಟ ಪೊಲೀಸ್ ಆದರೂ ಒಳ್ಳೆಯ ಉದ್ದೇಶಕ್ಕಾಗಿ ಹೋರಾಡುವ ರಜನಿ ಎಂದಿನಂತೆ ಮಿಂಚಿದ್ದಾರೆ. ತಲೈವಾ ನಟಿಸಿರುವ ಈ ಪಾತ್ರ ಪ್ರೇಕ್ಷಕರಿಗೆ ಸಿಕ್ಕಾಪಟ್ಟೆ ಇಷ್ಟ ಆಗಿದೆ. ಇದೀಗ, ದರ್ಬಾರ್ ಸಿನಿಮಾ ಮುಂಬೈ ಪೊಲೀಸ್ ಅಧಿಕಾರಿಯೊಬ್ಬರ ನೈಜಕಥೆ ಎಂದು ಹೇಳಲಾಗುತ್ತಿದೆ.
'ದರ್ಬಾರ್' ಕಲೆಕ್ಷನ್: 'ಸರ್ಕಾರ್'-'2.0' ಸಿನಿಮಾ ರೆಕಾರ್ಡ್ ಬ್ರೇಕ್ ಮಾಡುವಲ್ಲಿ 'ದರ್ಬಾರ್' ವಿಫಲ
ದರ್ಬಾರ್ ಸಿನಿಮಾ ನೋಡಿದ ರಜನಿಕಾಂತ್ ಅಭಿಮಾನಿಯೊಬ್ಬ ಈ ಮಾಹಿತಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಬಹುಶಃ ಈ ಸುದ್ದಿ ಸ್ವತಃ ನಿರ್ದೇಶಕ ಹಾಗೂ ರಜನಿಗೂ ಅಚ್ಚರಿ ತಂದಿರಬಹುದು.
ಮುಂಬೈ ಪೊಲೀಸ್ ಆಗಿದ್ದ ವೈಸಿ ಪವರ್ ಅವರ ಕಥೆ ಎಂಬ ಸುದ್ದಿ ಚರ್ಚೆಯಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ನಿಜಾ ಎನ್ನುವುದು ಗೊತ್ತಿಲ್ಲ. ಆದರೆ, ಒಂದು 1980ರ ಸಮಯದಲ್ಲಿ ವರದ ಬಾಯ್ ಎಂಬ ವ್ಯಕ್ತಿ ಮುಂಬೈನಲ್ಲಿ ಅನೈತಿಕ ಚಟುವಟಿಕೆಗಳಿಗೆ ಕಾರಣರಾಗಿದ್ದರಂತೆ. ಆತನ ವಿರುದ್ಧ ವೈಸಿ ಪವರ್ ನೇರವಾಗಿ ಫೈಟ್ ಮಾಡಿದ್ದರಂತೆ. ಅದೇ ಕಥೆಯಿಂದ ದರ್ಬಾರ್ ಸ್ಫೂರ್ತಿ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.
ಇನ್ನುಳಿದಂತೆ ಎ ಆರ್ ಮುರುಗದಾಸ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ನಯನತಾರ, ನಿವೇತಾ ಥಾಮಸ್, ಸುನೀಲ್ ಶೆಟ್ಟಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.