Don't Miss!
- News ದೇವೇಗೌಡರು ಕಣ್ಣೀರು ಹಾಕುವಂತೆ ಯಾರು ಏನು ಮಾಡಿದ್ದಾರೆ? ಡಿ ಕೆ ಶಿವಕುಮಾರ್ ಹೇಳಿದ್ದೇನು?
- Sports ಟಿ20 ವಿಶ್ವಕಪ್-2024: "ಬಾಗಿಲು ಮುಚ್ಚಿದ್ದೇನೆ" ಎಂದಿದ್ದೇಕೆ ಸ್ಪಿನ್ ಮಾಂತ್ರಿಕ ನರೈನ್
- Lifestyle ರೆಸಿಪಿ: ಮಾವಿನ ಕಾಯಿ ತುರಿದು ಮಾಡುವ ಉಪ್ಪಿನಕಾಯಿ, ಎಣ್ಣೆ ಬಳಸಿಲ್ಲ, ವರ್ಷದವರೆಗೆ ಇಡಲೂ ಬಹುದು
- Technology Google: ಗೂಗಲ್ ಪಿಕ್ಸೆಲ್ 8a ಬೆಲೆ ಮಾಹಿತಿ ಲೀಕ್! ಈ ಫೋನ್ ಫೀಚರ್ಸ್ ಏನು?
- Automobiles ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಟ್ ಮೇಲೆ ಹಿಟ್ ಕೊಟ್ಟ ಧನುಶ್ ಸಂಭಾವನೆ ಭಾರಿ ಏರಿಕೆ
ಧನುಶ್ ಅಭಿನಯದ 'ಜಗಮೆ ತಂಧಿರಮ್' ಸಿನಿಮಾ ನೆಟ್ಫ್ಲಿಕ್ಸ್ನಲ್ಲಿ ತೆರೆಕಂಡು ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿದೆ. ಅದಕ್ಕೂ ಮುಂಚೆ ರಿಲೀಸ್ ಆಗಿದ್ದ 'ಕರ್ಣನ್' ಸಿನಿಮಾಗೆ ಅದ್ಭುತ ಗೆಲುವು ಸಿಕ್ಕಿತ್ತು. ಅಕ್ಷಯ್ ಕುಮಾರ್ ಮತ್ತು ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅಟ್ರಂತಿ ರೇ' ರಿಲೀಸ್ಗೆ ಸಿದ್ದವಿದೆ. ಇಂಗ್ಲಿಷ್ ಚಿತ್ರವೊಂದರಲ್ಲಿಯೂ ಧನುಶ್ ನಟಿಸುತ್ತಿದ್ದಾರೆ.
Recommended Video
ಹಿಟ್ ಮೇಲೆ ಹಿಟ್ ಕೊಡುತ್ತಿರುವ ಧನುಶ್ ಸತತವಾಗಿ ಹೊಸ ಸಿನಿಮಾಗಳನ್ನು ಕೈಗೆತ್ತಿಕೊಳ್ಳುತ್ತಾ ಸಾಗುತ್ತಿದ್ದಾರೆ. ಈಗ ತೆಲುಗಿನ ಸ್ಟಾರ್ ನಿರ್ದೇಶಕ ಶೇಖರ್ ಕಮ್ಮುಲ ಜೊತೆ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ್ದಾರೆ. ಈ ಚಿತ್ರಕ್ಕಾಗಿ ಧನುಶ್ ತಮ್ಮ ಸಂಭಾವನೆಯನ್ನು ಡಬಲ್ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಸಿನಿಮಾನಗರದಲ್ಲಿ ಚರ್ಚೆಯಾಗುತ್ತಿದೆ. ಅಷ್ಟಕ್ಕೂ, ಧನುಶ್ ಪಡೆಯುವ ಸಂಭಾವನೆ ಎಷ್ಟು? ಹೊಸ ಚಿತ್ರಕ್ಕಾಗಿ ಬೇಡಿಕೆಯಿಟ್ಟಿರುವ ಮೊತ್ತ ಎಷ್ಟು? ಮುಂದೆ ಓದಿ....
ತೆಲುಗು ನಿರ್ದೇಶಕನ ಸಿನಿಮಾದಲ್ಲಿ ಧನುಷ್: ಭಿನ್ನ ಸಿನಿಮಾಕ್ಕೆ ತಯಾರಾಗಿ!
ತ್ರಿಭಾಷೆಯಲ್ಲಿ ಹೊಸ ಸಿನಿಮಾ
ಫಿದಾ ಖ್ಯಾತಿಯ ನಿರ್ದೇಶಕ ಶೇಖರ್ ಕಮ್ಮುಲ ಜೊತೆ ಧನುಶ್ ಹೊಸ ಸಿನಿಮಾ ಆರಂಭಿಸಿದ್ದು, ಈ ಸಿನಿಮಾ ಮೂರು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ತಮಿಳು, ತೆಲುಗು ಹಾಗೂ ಹಿಂದಿಯಲ್ಲಿ ತೆರೆಗೆ ತರಲು ನಿರ್ಧರಿಸಲಾಗಿದೆ. ಶೇಖರ್ ಕಮ್ಮುಲ ಜೊತೆ ಕೆಲಸ ಮಾಡಲು ಉತ್ಸುಕನಾಗಿದ್ದೇನೆ ಎಂದು ಖುದ್ದು ಧನುಶ್ ಟ್ವೀಟ್ ಮಾಡಿದ್ದರು.
ಡಬಲ್ ಸಂಭಾವನೆ?
ಶೇಖರ್ ಕಮ್ಮುಲ ಜೊತೆಗಿನ ತ್ರಿಭಾಷಾ ಪ್ರಾಜೆಕ್ಟ್ಗಾಗಿ ಧನುಶ್ ಡಬಲ್ ಸಂಭಾವನೆ ಪಡೆಯುತ್ತಿದ್ದಾರೆ ಎಂಬ ಸುದ್ದಿ ಹುಟ್ಟಿಕೊಂಡಿದೆ. ಸಾಮಾನ್ಯವಾಗಿ ಸಿನಿಮಾವೊಂದಕ್ಕೆ ಪಡೆಯುವ ಸಂಭಾವನೆಗಿಂತ ಹೆಚ್ಚು ಹಣವನ್ನು ಈ ಚಿತ್ರಕ್ಕೆ ಕೇಳಿದ್ದಾರಂತೆ. ವರದಿಗಳು ಪ್ರಕಾರ ತ್ರಿಭಾಷಾ ಚಿತ್ರಕ್ಕೆ ಧನುಶ್ 30 ಕೋಟಿ ಪಡೆಯಲಿದ್ದಾರೆ ಎಂಬ ಸುದ್ದಿ ಇದೆ.
ಸ್ಟಾರ್ ನಟ-ನಿರ್ದೇಶಕರಿಂದ 'ಕರ್ಣನ್' ತೆಲುಗಿಗೆ ರಿಮೇಕ್
ಧನುಶ್ ಸಂಭಾವನೆ ಎಷ್ಟಿದೆ?
ಕೊನೆಯದಾಗಿ ರಿಲೀಸ್ ಆಗಿರುವ 'ಜಗಮೇ ತಂಥೀರಮ್' ಚಿತ್ರಕ್ಕಾಗಿ ನಟ ಧನುಶ್ 15 ಕೋಟಿ ಸಂಭಾವನೆ ಪಡೆದುಕೊಂಡಿದ್ದಾರೆ. ಈ ಚಿತ್ರ 17 ಭಾಷೆ ಹಾಗೂ 190ಕ್ಕೂ ಅಧಿಕ ದೇಶಗಳಲ್ಲಿ ವೀಕ್ಷಣೆ ಕಂಡಿದೆ. ಈ ಹಿಂದಿನ ಸಿನಿಮಾಗಳಿಗೆ 10-15 ಕೋಟಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.
ಸಾಯಿ ಪಲ್ಲವಿ ನಾಯಕಿ?
ಮೂರು ಭಾಷೆಯಲ್ಲಿ ತಯಾರಾಗಲಿರುವ ಈ ಚಿತ್ರದಲ್ಲಿ ಸಾಯಿ ಪಲ್ಲವಿ ನಾಯಕಿಯಾಗಿ ನಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತವಾಗಿ ಪ್ರಕಟವಾಗಿಲ್ಲ. ಶೇಖರ್ ಕಮ್ಮುಲ ಪ್ರಸ್ತುತ, ನಾಗಚೈತನ್ಯ ಮತ್ತು ಸಾಯಿ ಪಲ್ಲವಿ ನಟಿಸಿರುವ 'ಲವ್ ಸ್ಟೋರಿ' ಸಿನಿಮಾ ನಿರ್ದೇಶಿಸಿದ್ದಾರೆ. ಈ ಚಿತ್ರ ಬಿಡುಗಡೆಯಾಗಬೇಕಿದೆ.