Don't Miss!
- News Weather Report: ಭೀಕರ ಬಿಸಿಲಿನ ನಡುವೆಯೂ ಏಪ್ರಿಲ್ 3ರವರೆಗೂ ಭಾರೀ ಮಳೆ ಮುನ್ಸೂಚನೆ, ಎಲ್ಲೆಲ್ಲಿ?
- Finance ಬೆಂಗಳೂರು-ತುಮಕೂರು ನಮ್ಮ ಮೆಟ್ರೋ ಯೋಜನೆ: ಬರಲಿವೆ 19 ಎತ್ತರದ ನಿಲ್ದಾಣಗಳು
- Technology iPhone: ಆಪಲ್ ಅಂತಿಮವಾಗಿ ಐಫೋನ್ 12 ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿಯೇ ಬಿಟ್ಟಿತು! ಏನದು?
- Automobiles Tata Nexon: ಟಾಟಾ ನೆಕ್ಸಾನ್ ಹೊಸ ರೂಪಾಂತರಗಳು ಬಿಡುಗಡೆ, ರೂ.10 ಲಕ್ಷ ಬೆಲೆ.. ಆಕರ್ಷಕ ವೈಶಿಷ್ಟ್ಯಗಳು
- Sports Riyan Parag: 'ಗಾಯದಿಂದ ಮೂರು ದಿನ ಒದ್ದಾಡಿ ಹೋಗಿದ್ದೆ': ರಿಯಾನ್ ಪರಾಗ್
- Lifestyle ಗುಡ್ಫ್ರೈಡೆ ಆಚರಣೆ ಹುಟ್ಟಿದ್ದು ಹೇಗೆ? ಇದರ ಮಹತ್ವವೇನು ಗೊತ್ತಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಡಬ್ಬಿಂಗ್' ಪ್ರತಿಭಟನೆ ಮರೆತುಬಿಟ್ರಾ ವಾಟಾಳ್ ನಾಗರಾಜ್?
ಕನ್ನಡ ಚಿತ್ರರಂಗದಲ್ಲಿ ಮತ್ತೆ ಡಬ್ಬಿಂಗ್ ವಿವಾದ ಭುಗಿಲೆದ್ದಿದೆ. ಸದ್ದಿಲ್ಲದೇ ಪರಭಾಷೆಯಿಂದ ಕನ್ನಡಕ್ಕೆ ಡಬ್ ಆದ ಹಾಡುಗಳು ಕರ್ನಾಟಕದಲ್ಲಿ ಸದ್ದು ಮಾಡುತ್ತಿವೆ.
'ಕನ್ನಡ ಚಿತ್ರರಂಗದಲ್ಲಿ ಡಬ್ಬಿಂಗ್ ಸಂಸ್ಕೃತಿಗೆ ಅವಕಾಶ ಇಲ್ಲ' ಅಂತ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಗುಡುಗಿದರು. ಕರ್ನಾಟಕದಲ್ಲಿ ಡಬ್ಬಿಂಗ್ ವಾಣಿಜ್ಯ ಮಂಡಳಿ ಕೂಡ ಸ್ಥಾಪನೆ ಆಗಿದ್ದನ್ನ ನೋಡಿ ಇದೇ ತಿಂಗಳ 8ನೇ ತಾರೀಖು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೊಟೇಲ್ ನಲ್ಲಿ ವಾಟಾಳ್ ನಾಗರಾಜ್ ಸಭೆ ನಡೆಸಿದರು.
ಸಭೆಯಲ್ಲಿ ಸಾ.ರಾ.ಗೋವಿಂದು, ಶೃತಿ, ಹಿರಿಯ ನಟರಾದ ಶಿವರಾಂ, ಶ್ರೀನಿವಾಸ್ ಮೂರ್ತಿ, ನಟರಾದ ಪ್ರೇಮ್, ನಿರ್ದೇಶಕ ಎಂ.ಎಸ್.ರಮೇಶ್ ಸೇರಿದಂತೆ ಚಿತ್ರರಂಗದ ಹಲವರು ಪಾಲ್ಗೊಂಡಿದ್ದರು. [ಗಂಡಸುತನವಿದ್ದರೆ ಡಬ್ಬಿಂಗ್ ಮಾಡಲಿ : ವಾಟಾಳ್ ವಾರ್ನಿಂಗ್!]
ಡಬ್ಬಿಂಗ್ ವಿರೋಧಿಸಿ ಆಗಸ್ಟ್ 26 ರಂದು ಬೆಂಗಳೂರಿನ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಕನ್ನಡ ಚಿತ್ರರಂಗದ ದಿಗ್ಗಜರೊಂದಿಗೆ ಬೃಹತ್ ರ್ಯಾಲಿ ನಡೆಸಿ, ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸುವುದಾಗಿ ವಾಟಾಳ್ ನಾಗರಾಜ್ ಹೇಳಿದ್ದರು.
ಇವತ್ತು ಆಗಸ್ಟ್ 26, ಇಂದು ಡಬ್ಬಿಂಗ್ ವಿರುದ್ಧ ಯಾವುದೇ ಪ್ರತಿಭಟನೆ ನಡೆದಿಲ್ಲ. ಸಾ.ರಾ.ಗೋವಿಂದು ಆರೋಗ್ಯ ಸ್ಥಿತಿ ಸರಿಯಿಲ್ಲ. ಶಿವರಾಜ್ ಕುಮಾರ್ ತಮ್ಮ ಮಗಳ ಮದುವೆಯಲ್ಲಿ ಬಿಜಿಯಾಗಿದ್ದಾರೆ. ಹೀಗಾಗಿ ರ್ಯಾಲಿ ಮುಂದೂಡಲಾಗಿದೆ ಅಂತ ಮೂಲಗಳು ತಿಳಿಸಿವೆ.
ದಿನದಿಂದ ದಿನಕ್ಕೆ ಡಬ್ಬಿಂಗ್ ಪಾರುಪತ್ಯ ಕನ್ನಡ ಚಿತ್ರರಂಗದಲ್ಲಿ ಹೆಚ್ಚಾಗುತ್ತಿದೆ. ಇಷ್ಟು ದಿನ ಪ್ರತಿಭಟಿಸುತ್ತಿದ್ದವರು ಈಗ ಮೌನಕ್ಕೆ ಶರಣಾಗಿದ್ದಾರಾ ಅನ್ನುವ ಅನುಮಾನ ಕೆಲವರಲ್ಲಿ ಮೂಡಿದೆ.