Don't Miss!
- News Soumya Reddy in Tirupati:ಸೌಮ್ಯ ರೆಡ್ಡಿ ಫೋಟೋ ಹಿಡಿದು ತಿರುಪತಿ ದೇವಸ್ಥಾನದ ಮುಂದೆ ಫೋಸ್ ಕೊಟ್ಟ ಭಕ್ತ!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Automobiles ಬೈಕಿನಂತೆ ಮೈಲೇಜ್ ಕೊಡೋದ್ರಿಂದ ಈ ಹ್ಯುಂಡೈ ಕಾರಿನ ಮಾಲೀಕರು ಫುಲ್ ಖುಷ್
- Sports LSG vs CSK IPL 2024: ಐಪಿಎಲ್ನಲ್ಲಿ ಇತಿಹಾಸ ಸೃಷ್ಟಿಸಿದ ಎಂಎಸ್ ಧೋನಿ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಲ್ ಸ್ಟಾರ್ ಮತ್ತು ಕ್ರೇಜಿ ಸ್ಟಾರ್ ಸೇರಿ ಹೊಸ ಮಲ್ಟಿಸ್ಟಾರ್ ಸಿನಿಮಾ!
Recommended Video
ಕನ್ನಡದಲ್ಲಿ ಈಗ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚು ಹೆಚ್ಚು ಬರುತ್ತಿದೆ. ಶಿವರಾಜ್ ಕುಮಾರ್ ಹಾಗೂ ಸುದೀಪ್ ಒಟ್ಟಿಗೆ ನಟಿಸಿರುವ 'ದಿ ವಿಲನ್' ಸಿನಿಮಾ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ. ಇದೇ ಸಮಯಕ್ಕೆ ಈಗ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ಬರುವುದಕ್ಕೆ ಸಿದ್ಧತೆ ನಡೆದಿದೆ.
ನಟ ಉಪೇಂದ್ರ ಈಗಾಗಲೇ ದರ್ಶನ್, ಸುದೀಪ್ ಹಾಗೂ ಶಿವರಾಜ್ ಕುಮಾರ್ ಅವರ ಜೊತೆಗೆ ನಟಿಸಿದ್ದಾರೆ. ರವಿಚಂದ್ರನ್ ಕೂಡ ಸುದೀಪ್ ಜೊತೆಗೆ ಮೂರು ಸಿನಿಮಾ ಹಾಗೂ ಶಿವಣ್ಣನ ಜೊತೆಗೆ 'ಕೋದಂಡ ರಾಮ' ಸಿನಿಮಾ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಉಪೇಂದ್ರ ಹಾಗೂ ರವಿಚಂದ್ರನ್ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಮುಂದೆ ಓದಿ...
ಕನಕಪುರ ಶ್ರೀನಿವಾಸ್ ನಿರ್ಮಾಣ
ಈ ಹಿಂದೆಯೇ ಕನಕಪುರ ಶ್ರೀನಿವಾಸ್ ಅವರ ಬ್ಯಾನರ್ ನಲ್ಲಿ ಉಪೇಂದ್ರ ಒಂದು ಸಿನಿಮಾ ಮಾಡುವುದಾಗಿ ಹೇಳಿದ್ದರು. ಈಗ ಆ ಚಿತ್ರಕ್ಕೆ ರವಿಚಂದ್ರನ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ರಿಯಲ್ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್ ರನ್ನು ಒಂದೇ ಚಿತ್ರದಲ್ಲಿ ಸೇರಿಸುವ ಸಾಹಸವನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡುತ್ತಿದ್ದಾರೆ. 'ಭರ್ಜರಿ' ಚಿತ್ರದ ನಂತರ ಕನಕಪುರ ಶ್ರೀನಿವಾಸ್ ಬಂಡವಾಳ ಹಾಕುತ್ತಿರುವ ಚಿತ್ರ ಇದಾಗಿದೆ.
ಒಂದೇ ಸಿನಿಮಾದಲ್ಲಿ ರವಿಚಂದ್ರನ್, ಶಿವಣ್ಣ, ಪುನೀತ್ ಹಾಗೂ ಸುದೀಪ್..!
ಓಂ ಪ್ರಕಾಶ್ ರಾವ್ ನಿರ್ದೇಶನ
ಉಪೇಂದ್ರ ಹಾಗೂ ರವಿಚಂದ್ರನ್ ಅವರ ಈ ಸಿನಿಮಾವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡುತ್ತಿದ್ದಾರೆ. ರವಿಚಂದ್ರನ್ ಹಾಗೂ ಉಪೇಂದ್ರ ಇಬ್ಬರು ನಟರಿಗೆ ಹೊಂದಿಕೆ ಆಗುವ ಕಥೆ ತಯಾರಿ ಮಾಡಿಕೊಂಡಿರುವ ಅವರು ಇಬ್ಬರ ಅಭಿಮಾನಿಗಳಿಗೆ ತೃಪ್ತಿ ನೀಡುವ ಸಿನಿಮಾ ಮಾಡುವ ತಯಾರಿಯಲ್ಲಿ ಇದ್ದಾರೆ.
ದರ್ಶನ್ ಜೊತೆ ಶಿವರಾಜ್ ಕುಮಾರ್ ಹಾಗೂ ಪುನೀತ್ ಸಿನಿಮಾ ಮಾಡ್ತಾರಾ!
ಉಪೇಂದ್ರ ಜೊತೆ ಓಂ ಪ್ರಕಾಶ್ ರಾವ್ ಮೊದಲ ಚಿತ್ರ
ಶಿವರಾಜ್ ಕುಮಾರ್, ದರ್ಶನ್, ರವಿಚಂದ್ರನ್, ಸುದೀಪ್ ಹೀಗೆ ಕನ್ನಡದ ಅನೇಕ ಸ್ಟಾರ್ ನಟರಿಗೆ ಆಕ್ಷನ್ ಹೇಳಿದ್ದ ಓಂ ಪ್ರಕಾಶ್ ರಾವ್ ಇದೇ ಮೊದಲ ಬಾರಿಗೆ ಉಪೇಂದ್ರ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಹಿಂದೆ ಓಂ ಪ್ರಕಾಶ್ ರಾವ್ ತಮ್ಮ 'ಸಾಹುಕರ' ಚಿತ್ರದಲ್ಲಿ ವಿಷ್ಣುವರ್ಧನ್ ಹಾಗೂ ರವಿಚಂದ್ರನ್ ಅವರನ್ನು ಒಟ್ಟಿಗೆ ಸೇರಿಸಿದ್ದರು. ಈಗ ರವಿಚಂದ್ರನ್ ಅವರಿಗೆ ಮತ್ತೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಅರ್ಧ ವರ್ಷ ಕಳೆದರೂ ಬರಲೇ ಇಲ್ಲ ಈ ಸ್ಟಾರ್ ಗಳ ಸಿನಿಮಾಗಳು
ಆಗಸ್ಟ್ ನಲ್ಲಿ ಪ್ರಾರಂಭ
ಉಪೇಂದ್ರ ಹಾಗೂ ರವಿಚಂದ್ರನ್ ಅವರ ಈ ಸಿನಿಮಾ ಇದೇ ಆಗಸ್ಟ್ ನಲ್ಲಿ ಶುರು ಆಗಲಿದೆಯಂತೆ. ಸದ್ಯಕ್ಕೆ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಮೂಲಕ ರಿಯಲ್ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್ ಇಬ್ಬರನ್ನು ಒಂದೇ ಚಿತ್ರದಲ್ಲಿ ನೋಡುವ ಸೌಭಾಗ್ಯ ಅಭಿಮಾನಿಗಳಿಗೆ ಒದಗಲಿದೆ.
ಬೇರೆ ಬೇರೆ ಸಿನಿಮಾದಲ್ಲಿ ಬಿಜಿ
ಸದ್ಯ ಉಪೇಂದ್ರ 'ಐ ಲವ್ ಯೂ' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ರವಿಚಂದ್ರನ್ 'ರಾಜೇಂದ್ರ ಪೊನ್ನಪ್ಪ' ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗಳ ಜೊತೆಗೆ ಇಬ್ಬರು ನಟರು ಬೇರೆ ಬೇರೆ ಸಿನಿಮಾಗಳಲ್ಲಿ ಬಿಜಿ ಇದ್ದಾರೆ.