Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಿಯಲ್ ಸ್ಟಾರ್ ಮತ್ತು ಕ್ರೇಜಿ ಸ್ಟಾರ್ ಸೇರಿ ಹೊಸ ಮಲ್ಟಿಸ್ಟಾರ್ ಸಿನಿಮಾ!
Recommended Video
ಕನ್ನಡದಲ್ಲಿ ಈಗ ಮಲ್ಟಿಸ್ಟಾರ್ ಸಿನಿಮಾಗಳು ಹೆಚ್ಚು ಹೆಚ್ಚು ಬರುತ್ತಿದೆ. ಶಿವರಾಜ್ ಕುಮಾರ್ ಹಾಗೂ ಸುದೀಪ್ ಒಟ್ಟಿಗೆ ನಟಿಸಿರುವ 'ದಿ ವಿಲನ್' ಸಿನಿಮಾ ಹಾಡುಗಳ ಮೂಲಕ ಸದ್ದು ಮಾಡುತ್ತಿದೆ. ಇದೇ ಸಮಯಕ್ಕೆ ಈಗ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ಬರುವುದಕ್ಕೆ ಸಿದ್ಧತೆ ನಡೆದಿದೆ.
ನಟ ಉಪೇಂದ್ರ ಈಗಾಗಲೇ ದರ್ಶನ್, ಸುದೀಪ್ ಹಾಗೂ ಶಿವರಾಜ್ ಕುಮಾರ್ ಅವರ ಜೊತೆಗೆ ನಟಿಸಿದ್ದಾರೆ. ರವಿಚಂದ್ರನ್ ಕೂಡ ಸುದೀಪ್ ಜೊತೆಗೆ ಮೂರು ಸಿನಿಮಾ ಹಾಗೂ ಶಿವಣ್ಣನ ಜೊತೆಗೆ 'ಕೋದಂಡ ರಾಮ' ಸಿನಿಮಾ ಮಾಡಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಉಪೇಂದ್ರ ಹಾಗೂ ರವಿಚಂದ್ರನ್ ಒಂದಾಗಿ ಸಿನಿಮಾ ಮಾಡುತ್ತಿದ್ದಾರೆ. ಮುಂದೆ ಓದಿ...
ಕನಕಪುರ ಶ್ರೀನಿವಾಸ್ ನಿರ್ಮಾಣ
ಈ ಹಿಂದೆಯೇ ಕನಕಪುರ ಶ್ರೀನಿವಾಸ್ ಅವರ ಬ್ಯಾನರ್ ನಲ್ಲಿ ಉಪೇಂದ್ರ ಒಂದು ಸಿನಿಮಾ ಮಾಡುವುದಾಗಿ ಹೇಳಿದ್ದರು. ಈಗ ಆ ಚಿತ್ರಕ್ಕೆ ರವಿಚಂದ್ರನ್ ಕೂಡ ಎಂಟ್ರಿ ಕೊಟ್ಟಿದ್ದಾರೆ. ರಿಯಲ್ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್ ರನ್ನು ಒಂದೇ ಚಿತ್ರದಲ್ಲಿ ಸೇರಿಸುವ ಸಾಹಸವನ್ನು ನಿರ್ಮಾಪಕ ಕನಕಪುರ ಶ್ರೀನಿವಾಸ್ ಮಾಡುತ್ತಿದ್ದಾರೆ. 'ಭರ್ಜರಿ' ಚಿತ್ರದ ನಂತರ ಕನಕಪುರ ಶ್ರೀನಿವಾಸ್ ಬಂಡವಾಳ ಹಾಕುತ್ತಿರುವ ಚಿತ್ರ ಇದಾಗಿದೆ.
ಒಂದೇ ಸಿನಿಮಾದಲ್ಲಿ ರವಿಚಂದ್ರನ್, ಶಿವಣ್ಣ, ಪುನೀತ್ ಹಾಗೂ ಸುದೀಪ್..!
ಓಂ ಪ್ರಕಾಶ್ ರಾವ್ ನಿರ್ದೇಶನ
ಉಪೇಂದ್ರ ಹಾಗೂ ರವಿಚಂದ್ರನ್ ಅವರ ಈ ಸಿನಿಮಾವನ್ನು ಓಂ ಪ್ರಕಾಶ್ ರಾವ್ ನಿರ್ದೇಶನ ಮಾಡುತ್ತಿದ್ದಾರೆ. ರವಿಚಂದ್ರನ್ ಹಾಗೂ ಉಪೇಂದ್ರ ಇಬ್ಬರು ನಟರಿಗೆ ಹೊಂದಿಕೆ ಆಗುವ ಕಥೆ ತಯಾರಿ ಮಾಡಿಕೊಂಡಿರುವ ಅವರು ಇಬ್ಬರ ಅಭಿಮಾನಿಗಳಿಗೆ ತೃಪ್ತಿ ನೀಡುವ ಸಿನಿಮಾ ಮಾಡುವ ತಯಾರಿಯಲ್ಲಿ ಇದ್ದಾರೆ.
ದರ್ಶನ್ ಜೊತೆ ಶಿವರಾಜ್ ಕುಮಾರ್ ಹಾಗೂ ಪುನೀತ್ ಸಿನಿಮಾ ಮಾಡ್ತಾರಾ!
ಉಪೇಂದ್ರ ಜೊತೆ ಓಂ ಪ್ರಕಾಶ್ ರಾವ್ ಮೊದಲ ಚಿತ್ರ
ಶಿವರಾಜ್ ಕುಮಾರ್, ದರ್ಶನ್, ರವಿಚಂದ್ರನ್, ಸುದೀಪ್ ಹೀಗೆ ಕನ್ನಡದ ಅನೇಕ ಸ್ಟಾರ್ ನಟರಿಗೆ ಆಕ್ಷನ್ ಹೇಳಿದ್ದ ಓಂ ಪ್ರಕಾಶ್ ರಾವ್ ಇದೇ ಮೊದಲ ಬಾರಿಗೆ ಉಪೇಂದ್ರ ಅವರಿಗೆ ಸಿನಿಮಾ ಮಾಡುತ್ತಿದ್ದಾರೆ. ಈ ಹಿಂದೆ ಓಂ ಪ್ರಕಾಶ್ ರಾವ್ ತಮ್ಮ 'ಸಾಹುಕರ' ಚಿತ್ರದಲ್ಲಿ ವಿಷ್ಣುವರ್ಧನ್ ಹಾಗೂ ರವಿಚಂದ್ರನ್ ಅವರನ್ನು ಒಟ್ಟಿಗೆ ಸೇರಿಸಿದ್ದರು. ಈಗ ರವಿಚಂದ್ರನ್ ಅವರಿಗೆ ಮತ್ತೆ ಓಂ ಪ್ರಕಾಶ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಅರ್ಧ ವರ್ಷ ಕಳೆದರೂ ಬರಲೇ ಇಲ್ಲ ಈ ಸ್ಟಾರ್ ಗಳ ಸಿನಿಮಾಗಳು
ಆಗಸ್ಟ್ ನಲ್ಲಿ ಪ್ರಾರಂಭ
ಉಪೇಂದ್ರ ಹಾಗೂ ರವಿಚಂದ್ರನ್ ಅವರ ಈ ಸಿನಿಮಾ ಇದೇ ಆಗಸ್ಟ್ ನಲ್ಲಿ ಶುರು ಆಗಲಿದೆಯಂತೆ. ಸದ್ಯಕ್ಕೆ ಈ ಚಿತ್ರಕ್ಕೆ ಇನ್ನೂ ಹೆಸರಿಟ್ಟಿಲ್ಲ. ಈ ಮೂಲಕ ರಿಯಲ್ ಸ್ಟಾರ್ ಹಾಗೂ ಕ್ರೇಜಿ ಸ್ಟಾರ್ ಇಬ್ಬರನ್ನು ಒಂದೇ ಚಿತ್ರದಲ್ಲಿ ನೋಡುವ ಸೌಭಾಗ್ಯ ಅಭಿಮಾನಿಗಳಿಗೆ ಒದಗಲಿದೆ.
ಬೇರೆ ಬೇರೆ ಸಿನಿಮಾದಲ್ಲಿ ಬಿಜಿ
ಸದ್ಯ ಉಪೇಂದ್ರ 'ಐ ಲವ್ ಯೂ' ಸಿನಿಮಾದ ಚಿತ್ರೀಕರಣದಲ್ಲಿ ತೊಡಗಿದ್ದಾರೆ. ರವಿಚಂದ್ರನ್ 'ರಾಜೇಂದ್ರ ಪೊನ್ನಪ್ಪ' ಸಿನಿಮಾದ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾಗಳ ಜೊತೆಗೆ ಇಬ್ಬರು ನಟರು ಬೇರೆ ಬೇರೆ ಸಿನಿಮಾಗಳಲ್ಲಿ ಬಿಜಿ ಇದ್ದಾರೆ.