Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೇತನ್ ಜೊತೆ ಹೊಸ ಸಾಹಸಕ್ಕೆ ಕೈಹಾಕಿದ ಪಿ.ಸಿ.ಶೇಖರ್.!
'ರಾಗ' ಚಿತ್ರದ ನಂತರ ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಸಾಹಸಕ್ಕೆ ಕೈಹಾಕಿದ್ದಾರೆ. ಒಂದಕ್ಕಿಂತ ಒಂದು ವಿಭಿನ್ನ ಚಿತ್ರಗಳನ್ನ ನೀಡುತ್ತಾ ಬಂದಿರುವ ನಿರ್ದೇಶಕರು ಈಗ ಐತಿಹಾಸಿಕ ಪ್ರಾಜೆಕ್ಟ್ ನ್ನ ಕೈಗೆತ್ತಿಕೊಂಡಿದ್ದಾರಂತೆ.
ಹೌದು, ಬ್ರಿಟಿಷ್ ಕಾಲದ ಕಥೆಯನ್ನ ಆಯ್ಕೆ ಮಾಡಿಕೊಂಡಿರುವ ಪಿ.ಸಿ.ಶೇಖರ್ ಈಗಾಗಲೇ ಸ್ಕ್ರಿಪ್ಟ್ ಸಿದ್ದಮಾಡುತ್ತಿದ್ದಾರೆ ಎನ್ನಲಾಗುತ್ತಿದೆ. ಈ ಚಿತ್ರ ಬಿಗ್ ಬಜೆಟ್ ನಿಂದ ಕೂಡಿದ್ದು, ತಂತ್ರಜ್ಞರು ಮತ್ತು ಕಲಾವಿದರ ಹುಡುಕಾಟ ಮಾಡಲಾಗುತ್ತಿದೆಯಂತೆ.
ವಿಮರ್ಶೆ: ಕಾಲೇಜು ಲೈಫಿನ ಗೆಳೆತನ, ಪ್ರೀತಿ ಮರುಕಳಿಸುವ 'ನೂರೊಂದು ನೆನಪು'
ಪಿ.ಸಿ.ಶೇಖರ್ ಅವರ ಈ ಚಿತ್ರಕ್ಕೆ 'ಆ ದಿನಗಳು' ಖ್ಯಾತಿಯ ಚೇತನ್ ನಾಯಕರಾಗಿದ್ದಾರಂತೆ. ಸದ್ಯ, ಚೇತನ್ ಅಭಿನಯದ 'ನೂರೊಂದು ನೆನಪು' ಚಿತ್ರ ಬಿಡುಗಡೆಯಾಗಿದ್ದು, ರಾಜ್ಯಾದ್ಯಂತ ಪ್ರದರ್ಶನವಾಗುತ್ತಿದೆ.
ಮತ್ತೊಂದೆಡೆ ಮಹೇಶ್ ಬಾಬು ನಿರ್ದೇಶನದ 'ಅತಿರಥ' ಚಿತ್ರದಲ್ಲೂ ಚೇತನ್ ನಾಯಕನಾಗಿದ್ದು, ಬಿಡುಗಡೆಗೆ ಸಜ್ಜಾಗಿದೆ. ಇದರ ಮಧ್ಯೆ ಚೇತನ್ ಜೊತೆಯಲ್ಲಿ ಪಿ.ಸಿ ಶೇಖರ್ ಹೊಸ ಸಾಹಸಕ್ಕೆ ಮುಂದಾಗಿದ್ದು, ಸೆಪ್ಟಂಬರ್ ನಿಂದ ಚಿತ್ರೀಕರಣ ಶುರುಮಾಡುವ ಯೋಚನೆಯಲ್ಲಿದ್ದಾರಂತೆ.