Don't Miss!
- Lifestyle ನರಿ ಮತ್ತು ಕೋಳಿಗೂ ಮೂರ್ಖರ ದಿನಕ್ಕೂ ಇದೆ ನಂಟು..! ಏನದು.?
- News RBI: ಬ್ಯಾಂಕ್ ಕೆಲಸ ಮುಗಿದಿಲ್ವಾ? ಭಯ ಬೇಡ ಮಾರ್ಚ್ 30, 31ಕ್ಕೂ ಓಪನ್ ಇರುತ್ತೆ ಆರ್ಬಿಐ ಕಚೇರಿಗಳು!
- Automobiles ಶಿಯೋಮಿಯ ಈ ಎಲೆಕ್ಟ್ರಿಕ್ ಕಾರು ಸ್ಮಾರ್ಟ್ಫೋನ್ಗಳಂತೆ ಅಗ್ಗದ ಬೆಲೆ: ರೇಂಜ್ ಕೇಳಿದ್ರೆ ತಲೆ ತಿರುಗುತ್ತೆ!
- Technology ಈ Amoled ಡಿಸ್ಪ್ಲೇ ಫೋನ್ ಬೆಲೆಯಲ್ಲಿ ಭಾರೀ ಇಳಿಕೆ!..ಈ ಆಫರ್ಗೆ ನೀವು ಫಿದಾ ಆಗ್ತೀರಾ!
- Finance ಮೊದಲ ಬಾರಿಗೆ ಅಂಬಾನಿ ಅದಾನಿ ಸೇರಿ ವ್ಯಾಪಾರ ಒಪ್ಪಂದ, ಇಲ್ಲಿದೆ ಒಪ್ಪಂದ ವಿವರ
- Sports IPL 2024: ವಿರಾಟ್ ಕೊಹ್ಲಿ ಕೆಕೆಆರ್ ಡಗೌಟ್ ನೋಡಿದ್ರೆ ಉರಿದು ಬೀಳ್ತಾರೆ; ಆರ್ಸಿಬಿ ಮಾಜಿ ಕ್ರಿಕೆಟಿಗ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೆಂಕಟ್ ಜೊತೆ 'ಡಿಕ್ಟೇಟರ್' ಬಿಟ್ಟ ಎಸ್ ನಾರಾಯಣ್ ಮಾಡಿದ್ದೇನು?
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮತ್ತು ನಿರ್ದೇಶಕ ಎಸ್ ನಾರಾಯಣ್ ಅವರ 'ಡಿಕ್ಟೇಟರ್' ಸಿನಿಮಾ ಏನಾಗಿದೆ ಅಂತ ಯಾರಿಗೂ ಗೊತ್ತಿಲ್ಲ. ವೆಂಕಟ್ ಅವರು 'ಡಿಕ್ಟೇಟರ್' ಬೇಡ ಅಂತ ಎದ್ದು ಹೋದ ಮೇಲೆ ಎಸ್ ನಾರಾಯಣ್ ಏನು ಮಾಡುತ್ತಿದ್ದಾರೆ ಅಂತ ಹುಡುಕುತ್ತಾ ಹೋದರೆ, ಅವರು ಸದ್ದಿಲ್ಲದೆ ಮತ್ತೊಂದು ಸಿನಿಮಾದ ತಯಾರಿಯಲ್ಲಿ ತೊಡಗಿದ್ದಾರೆ.
ಅಂದಹಾಗೆ ಕಲಾಸಾಮ್ರಾಟ್ ಎಸ್ ನಾರಾಯಣ್ ಅವರು ಈ ಬಾರಿ ಸಿನಿಮಾ ಮಾಡುತ್ತಿರೋದು ಮಾತ್ರ 'ಲಕ್ಷ್ಮಣ' ಸಿನಿಮಾ ಖ್ಯಾತಿಯ ನಟ ಅನೂಪ್ ರೇವಣ್ಣ ಅವರ ಜೊತೆಯಂತೆ.[ವೆಂಕಟ್ ವಿರುದ್ಧ ಚಾಟಿ ಬೀಸಿದ ನಿರ್ದೇಶಕ ಎಸ್ ನಾರಾಯಣ್]
ಈಗಾಗಲೇ 'ಲಕ್ಷ್ಮಣ' ಸಿನಿಮಾ ಪೂರ್ತಿಗೊಳಿಸಿ ಬಿಡುಗಡೆಗಾಗಿ ಕಾದು ಕುಳಿತಿರುವ ನಟ ಅನೂಪ್ ರೇವಣ್ಣ ಅವರು ಎಸ್ ನಾರಾಯಣ್ ಅವರ ಜೊತೆ ಕೈ ಜೋಡಿಸಿದರು ಅಚ್ಚರಿ ಇಲ್ಲ.
ಇನ್ನು ಎಲ್ಲಾ ಅಂದುಕೊಂಡಂತೆ ನಡೆದರೆ ಇದೇ ಜೂನ್ 9 ರಿಂದ ಚಿತ್ರ ಸೆಟ್ಟೇರಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ. ಪಕ್ಕಾ ಮಾಸ್ ಚಿತ್ರ ಎಂದು ಹೇಳಲಾಗುತ್ತಿರುವ ಚಿತ್ರಕ್ಕೆ ಕೊಂಚ ಫ್ಯಾಮಿಲಿ ಸೆಂಟಿಮೆಂಟ್ ಅಂಶಗಳನ್ನು ಸೇರಿಸಿ ಫ್ಯಾಮಿಲಿ ಮನರಂಜನಾತ್ಮಕ ಸಿನಿಮಾ ಮಾಡಲು ಎಸ್ ನಾರಾಯಣ್ ಪ್ಲ್ಯಾನ್ ಮಾಡುತ್ತಿದ್ದಾರೆ ಅಂತ ಅಲ್ಲಲ್ಲಿ ಸುದ್ದಿಯಾಗಿದೆ.[ಆರ್.ಚಂದ್ರು ನಿರ್ದೇಶನದಲ್ಲಿ ಎಚ್.ಎಂ.ರೇವಣ್ಣ ಪುತ್ರ ಅನೂಪ್ ಎಂಟ್ರಿ]
ತಮಿಳಿನ ಹಮೀದ್ ಎಂಬುವವರು ಹೆಣೆದಿರುವ ಕಥೆಗೆ ಎಸ್ ನಾರಾಯಣ್ ಅವರು ಚಿತ್ರಕಥೆ-ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿಯನ್ನು ಹೊತ್ತಿದ್ದಾರೆ. ನಿರ್ಮಾಪಕ ಕಡಿಯಾಲ ಸುಬ್ರಮಣ್ಯಮ್ ಎಂಬುವವರು ಬಂಡವಾಳ ಹೂಡಲಿದ್ದಾರಂತೆ. ಎಸ್ ನಾರಾಯಣ್ ಸಿನಿಮಾ ಮಾಡುತ್ತಾರೋ ಬಿಡುತ್ತಾರೋ ಗೊತ್ತಿಲ್ಲ ಆದರೆ ಸುದ್ದಿಯಾಗಿರೋದು ಮಾತ್ರ ಸತ್ಯ.