Don't Miss!
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Automobiles ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- News Annamalai: ಒಂದು ಲಕ್ಷ ಮತದಾರರ ಹೆಸರು ಪಟ್ಟಿಯಿಂದ ಕಾಣೆಯಾಗಿದೆ: ಅಣ್ಣಾಮಲೈ ಆರೋಪ
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಲ್ಲಿ ಅಮೀರ್ ಖಾನ್, ಇಲ್ಲಿ ದುನಿಯಾ ವಿಜಯ್ ಕುಸ್ತಿಪಟು.!
ನಟ ದುನಿಯಾ ವಿಜಯ್ ಮತ್ತು ನಿರ್ದೇಶಕ ಆರ್.ಚಂದ್ರು ಕಾಂಬಿನೇಷನ್ ನಲ್ಲಿ 'ಕನಕ' ಸಿನಿಮಾ ಸಿದ್ದವಾಗುತ್ತಿದೆ. 'ಕನಕ' ಚಿತ್ರದ ಶೂಟಿಂಗ್ ಕೊನೆಯ ಹಂತದಲ್ಲಿದೆ. ಅಷ್ಟರಲ್ಲಾಗಲೇ ಇನ್ನೊಂದು ಸಿನಿಮಾಗೆ ಜೈ ಎಂದಿದೆ ಈ ಜೋಡಿ.
ವಿಶೇಷ ಏನಪ್ಪಾ ಅಂದ್ರೆ ಈ ಚಿತ್ರದಲ್ಲಿ ದುನಿಯಾ ವಿಜಿ ಕುಸ್ತಿಪಟು. ಕುಸ್ತಿಪಟು ಅಂದಾಕ್ಷಣ ಒತೆ ಆಶ್ಚರ್ಯವಾಗಬಹುದು. ಯಾಕಂದ್ರೆ, ಬಾಲಿವುಡ್ ನಲ್ಲಿ ಇತ್ತೀಗಷ್ಟೇ ಅಮೀರ್ ಖಾನ್ 'ದಂಗಲ್' ಅಂತ ಸಿನಿಮಾ ಮಾಡಿದ್ದರು. ಅದೇ ರೀತಿ ವಿಜಿ ಏನಾದರೂ ಸಿನಿಮಾ ಮಾಡ್ತಿದ್ದಾರ ಅಂತ ನಿರೀಕ್ಷೆ ಹುಟ್ಟಿಕೊಂಡಿದೆ.
ಫೋಟೋಶೂಟ್ ನಲ್ಲಿ ಮಿರ ಮಿರ ಮಿಂಚಿದ ಆಟೋ ಚಾಲಕ 'ಕನಕ'
ಆದ್ರೆ, ಈ ಬಗ್ಗೆ ಯಾವುದೇ ಮಾಹಿತಿ ಬಿಟ್ಟುಕೊಡದ ಆರ್.ಚಂದ್ರು ಮತ್ತು ವಿಜಿ, ಮುಂದಿನ ಚಿತ್ರವನ್ನ ಮಾಡಲು ಪ್ಲಾನ್ ಮಾಡಿಕೊಂಡಿದ್ದಾರೆ. ಈಗಾಗಲೇ ಕುಸ್ತಿಪಟು ಪಾತ್ರಕ್ಕಾಗಿ ದುನಿಯಾ ವಿಜಯ್ ಅವರು ತಮ್ಮ ದೇಹವನ್ನ ಮತ್ತಷ್ಟು ದೃಢವಾಗಿಸಲು ಸಜ್ಜಾಗಿದ್ದಾರಂತೆ.
ಅಂದ್ಹಾಗೆ, 'ಕನಕ' ಚಿತ್ರದಲ್ಲಿ ವಿಜಿಗೆ, ಮಾನ್ವಿತ ಮತ್ತು ಶ್ರದ್ಧಾ ಶ್ರೀನಾಥ್ ಜೋಡಿಯಾಗಿ ಕಾಣಸಿಕೊಳ್ಳಲಿದ್ದಾರೆ. ಅದಾದ ನಂತರ ಪ್ರೀತಂ ಗುಬ್ಬಿ ನಿರ್ದೇಶನದಲ್ಲಿ 'ಜಾನಿ ಜಾನಿ ಎಸ್ ಪಪ್ಪಾ' ಸಿನಿಮಾ ಶುರು ಮಾಡಲಿದ್ದಾರೆ. ಈ ಮಧ್ಯೆ ಆರ್.ಚಂದ್ರು ಇನ್ನೊಂದು ಸಿನಿಮಾ ಮಾಡುತ್ತಾರೆ ಎಂಬ ಸುದ್ದಿ ಈಗ ಗಾಂಧಿನಗರದಲ್ಲಿ ಗಿರಗಿಟ್ಲೆ ಹೊಡಿತಿದೆ.