Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಸಲಗ'ಗೆ ದುನಿಯಾ ವಿಜಯ್ ಅವರೇ ಮಾವುತ.!
Recommended Video
ಜಾನಿ ಜಾನಿ ಎಸ್ ಪಪ್ಪಾ ಸಿನಿಮಾದ ಬಳಿಕ 'ಕುಸ್ತಿ' ಆರಂಭಿಸಿದ ದುನಿಯಾ ವಿಜಯ್ ಅದ್ಯಾಕೋ ಕುಸ್ತಿಗೆ ಮಧ್ಯಂತರ ನೀಡಿ ಸಲಗ ಕೈಗೆತ್ತಿಕೊಂಡರು. ಭರ್ಜರಿ ಸಿದ್ಧತೆಗಳೊಂದಿಗೆ ಆರಂಭವಾಗುತ್ತಿರುವ ಸಲಗ ಈಗ ಮತ್ತೊಂದು ಭರ್ಜರಿ ಸುದ್ದಿ ನೀಡಿದೆ.
ಸಲಗ ಸಿನಿಮಾಗೆ ದುನಿಯಾ ವಿಜಯ್ ನಾಯಕ. ಟಗರು ಸಿನಿಮಾ ನಿರ್ಮಿಸಿದ್ದ ಕೆ.ಪಿ ಶ್ರೀಕಾಂತ್ ನಿರ್ಮಾಪಕ. ಒಂದೊಳ್ಳೆ ತಂತ್ರಜ್ಞರ ತಂಡ ಕಟ್ಟಿಕೊಂಡಿರುವ ಸಲಗ ಕಿಕ್ಕೇರಿಸುವಂತಹ ಕಲಾವಿದರನ್ನ ಆಯ್ಕೆ ಮಾಡಿಕೊಂಡಿದೆ.
'ಟಗರು' ಅಡ್ಡಾದಲ್ಲಿ ಕಾಣಿಸಿಕೊಂಡ 'ಸಲಗ': ಇಲ್ಲಿದೆ ಕಾರಣ
ಧನಂಜಯ್, ಕಾಕ್ರೋಚ್ ಖ್ಯಾತಿಯ ಸುಧೀ ಮುಖ್ಯ ಪಾತ್ರಗಳಲ್ಲಿ ನಟಿಸಲಿದ್ದಾರೆ. 'ಟಗರು' ಸಿನಿಮಾಗೆ ಸಂಭಾಷಣೆ ಬರೆದಿದ್ದು ಮಾಸ್ತಿ ಸಲಗ ಚಿತ್ರಕ್ಕೂ ಡೈಲಾಗ್ ಹೊಣೆ ಹೊತ್ತಿದ್ದಾರೆ. ಅದರ ಜೊತೆಗೆ ಇಬ್ಬರು ಸಂಗೀತ ನಿರ್ದೇಶಕರಿದ್ದು, ಚರಣ್ ರಾಜ್ ಮತ್ತು ನವೀನ್ ಸಜ್ಜು ಮ್ಯೂಸಿಕ್ ವಿಭಾಗದ ಸಾರಥಿಗಳಾಗಿದ್ದಾರೆ.
'ಸಲಗ' ದುನಿಯಾ ವಿಜಿ ಜೊತೆ ಸೇರಿದ ಟಗರು ಟೀಂ
ಇಷ್ಟೆಲ್ಲಾ ಹೇಳಿದ್ಮೇಲೆ ನಿರ್ದೇಶಕ ಯಾರು ಎಂಬುದು ಮಾತ್ರ ಕುತೂಹಲವಾಗಿಯೇ ಉಳಿದುಕೊಂಡಿದೆ. ಮೊದಲು ರಘು ಶಿವಮೊಗ್ಗ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ ಎನ್ನಲಾಗಿತ್ತು. ನಂತರ ಅವರ ಬದಲು ಮತ್ತೊಬ್ಬ ಹೊಸ ನಿರ್ದೇಶಕ ಬರಲಿದ್ದಾರೆ ಎನ್ನಲಾಯ್ತು. ಇದೀಗ, ದುನಿಯಾ ವಿಜಯ್ ಅವರೇ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ ಎನ್ನಲಾಗುತ್ತಿದೆ.
ಒಂದು ವೇಳೆ ಇದು ನಿಜವಾಗಿದ್ದೇ ಆದ್ರೆ ಪ್ರಪ್ರಥಮ ಬಾರಿಗೆ ದುನಿಯಾ ವಿಜಯ್ ನಿರ್ದೇಶಕರಾಗಿ ಕೆಲಸ ಮಾಡಲಿದ್ದಾರೆ. ನಟ, ನಿರ್ಮಾಪಕರಾಗಿದ್ದ ವಿಜಿ ಡೈರೆಕ್ಟರ್ ಆಗಿಯೂ ಪ್ರಮೋಟ್ ಆಗಲಿದ್ದಾರೆ.