Don't Miss!
- News Big Offer for Bengaluru Voters: ಮತದಾರರಿಗೆ ಗುಡ್ ನ್ಯೂಸ್.. ರಿಯಾಯಿತಿ ದರದಲ್ಲಿ ತಿಂಡಿ ವ್ಯವಸ್ಥೆ
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರೀಲ್ಸ್ ಬೆಡಗಿಗೆ ದುನಿಯಾ ವಿಜಯ್ ಭೀಮ ಚಿತ್ರದಲ್ಲಿ ಸಿಕ್ತು ಚಾನ್ಸ್; ಕೆಟ್ಟ ಆಯ್ಕೆ ಎಂದ ಫ್ಯಾನ್ಸ್!
ಸಲಗ ಚಿತ್ರದ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆದ ನಟ ವಿಜಯ್ ಕುಮಾರ್ ತಮ್ಮ ಮೊದಲ ನಿರ್ದೇಶನದಲ್ಲಿಯೇ ಯಶಸ್ಸು ಸಾಧಿಸಿದ್ದರು. ಬೆಂಗಳೂರು ರೌಡಿಸಂನ ಚಿತ್ರಕತೆಯನ್ನು ಹೊಂದಿದ್ದ ಸಲಗ ಭರ್ಜರಿ ಯಶಸ್ಸನ್ನು ಸಾಧಿಸಿತ್ತು. ಹೀಗೆ ನಿರ್ದೇಶಕನ ಕ್ಯಾಪ್ ತೊಟ್ಟು ಗೆದ್ದ ವಿಜಯ್ ಕುಮಾರ್ ಇದೀಗ ತಮ್ಮ ಮುಂದಿನ ಚಿತ್ರವನ್ನೂ ಸಹ ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಭೀಮ ಎಂದು ಶೀರ್ಷಿಕೆಯನ್ನು ಇಡಲಾಗಿದ್ದು, ಚಿತ್ರಕ್ಕೆ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ಬಂಡವಾಳ ಹೂಡಿದ್ದಾರೆ. ಸಲಗ ಚಿತ್ರದಲ್ಲಿ ಬೊಂಬಾಟ್ ಸಂಗೀತ ನೀಡಿದ್ದ ಚರಣ್ ರಾಜ್ ಈ ಸಿನಿಮಾಗೂ ಸಹ ಸಂಗೀತ ನೀಡಿದ್ದಾರೆ.
ಇನ್ನು ಈ ಚಿತ್ರದಲ್ಲಿಯೂ ದುನಿಯಾ ವಿಜಯ್ ನಾಯಕ ನಟನಾಗಿ ಅಭಿನಯಿಸುತ್ತಿದ್ದು, ಚಿತ್ರದ ಶೀರ್ಷಿಕೆ ಅನಾವರಣಗೊಂಡಾಗ ಚಿತ್ರದಲ್ಲಿ ಯಾರು ಯಾರು ಅಭಿನಯಿಸಲಿದ್ದಾರೆ ಎಂಬ ಮಾಹಿತಿಯನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಒಂದೊಂದಾಗಿ ಚಿತ್ರದ ಪಾತ್ರಗಳನ್ನು ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಘೋಷಿಸುತ್ತಿರುವ ಚಿತ್ರತಂಡ ಇತ್ತೀಚಿಗಷ್ಟೆ ಗಿರಿಜಾ ಎಂಬ ಕಲಾವಿದೆಯನ್ನು ಪೊಲೀಸ್ ಪಾತ್ರಕ್ಕೆ ಆಯ್ಕೆ ಮಾಡಿ ಪರಿಚಯಿಸಿತ್ತು ಹಾಗೂ ನಂತರ ಸಲಗ ಚಿತ್ರದಲ್ಲಿ ಸಾವಿತ್ರಿ ಪಾತ್ರ ಮಾಡಿದ್ದ ಸುಧಿ ಅವರನ್ನು ಈ ಚಿತ್ರಕ್ಕೂ ಆಯ್ಕೆ ಮಾಡಿ ಶುಠಿ ಅಲಿಯಾಸ್ ಜಿಂಜರ್ ಎಂದು ಪರಿಚಯ ಮಾಡಲಾಯಿತು.
ಇದೀಗ ಮತ್ತೋರ್ವ ಕಲಾವಿದೆಯನ್ನು ಭೀಮ ತಂಡ ಪರಿಚಯಿಸಿದ್ದು, ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಆಗಿದ್ದ ಆಶ್ ಮೆಲೊ ಸ್ಕೈಲರ್ ತಾರಾಗಣಕ್ಕೆ ಸೇರ್ಪಡೆಪಡಿಸಿಕೊಂಡಿದೆ. ಈಕೆ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯಳಾಗಿದ್ದು, ಹೆಚ್ಚಾಗಿ ರೀಲ್ಸ್ ಮಾಡಿ ಅನುಯಾಯಿಗಳನ್ನು ಪಡೆದು ಫೇಮ್ ಗಿಟ್ಟಿಸಿಕೊಂಡಿದ್ದಾಳೆ. ಸದ್ಯ ಈಕೆಯನ್ನು ಆಯ್ಕೆ ಮಾಡಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಕೆಲವರು ಈ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಈ ಆಯ್ಕೆ ಸರಿಯಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನು ಸಲಗ ಚಿತ್ರದಲ್ಲಿ ಇದೇ ರೀತಿ ಹಲವು ಹೊಸ ಕಲಾವಿದರಿಗೆ ಅವಕಾಶ ನೀಡಿ ಭೇಷ್ ಎನಿಸಿಕೊಂಡಿದ್ದ ವಿಜಯ್ ಅವರ ಮೇಲೆ ಈ ಬಾರಿಯೂ ಸಹ ದೊಡ್ಡ ನಿರೀಕ್ಷೆ ಮತ್ತು ನಂಬಿಕೆಯಿದೆ.