Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
RRR ಚಿತ್ರದಲ್ಲಿ ಕ್ರಾಂತಿಕಾರಿ ಭಗತ್ ಸಿಂಗ್ ಪಾತ್ರದಲ್ಲಿ ಬಾಲಿವುಡ್ ನಟ ಅಜಯ್ ದೇವ್ಗನ್.?
'ಬಾಹುಬಲಿ' ಬಳಿಕ ಟಾಲಿವುಡ್ ನಿರ್ದೇಶಕ ಎಸ್.ಎಸ್.ರಾಜಮೌಳಿ ಕೈಗೆತ್ತಿಕೊಂಡಿರುವ ಚಿತ್ರ 'ಆರ್.ಆರ್.ಆರ್'. ಐತಿಹಾಸಿಕ ಆಕ್ಷನ್ ಸಿನಿಮಾ ಇದಾಗಿದ್ದು, 'ಆರ್.ಆರ್.ಆರ್' ಚಿತ್ರದ ಚಿತ್ರೀಕರಣ ಹೈದರಾಬಾದ್ ನಲ್ಲಿ ಬಿರುಸಿನಿಂದ ಸಾಗುತ್ತಿದೆ.
ಜೂನಿಯರ್ ಎನ್.ಟಿ.ಆರ್, ರಾಮ್ ಚರಣ್ ತೇಜ, ಆಲಿಯಾ ಭಟ್, ಸಮುದ್ರಖಣಿ, ರಾಹುಲ್ ರಾಮಕೃಷ್ಣ, ರೇ ಸ್ಟೀವೆನ್ಸನ್, ಓಲಿವಿಯಾ ಮೊರಿಸ್ ಸೇರಿದಂತೆ ದೊಡ್ಡ ತಾರಾಬಳಗ ಹೊಂದಿರುವ 'ಆರ್.ಆರ್.ಆರ್' ಚಿತ್ರತಂಡದಕ್ಕೆ ಇದೀಗ ಬಾಲಿವುಡ್ ನಟ ಅಜಯ್ ದೇವ್ಗನ್ ಸೇರಿಕೊಂಡಿದ್ದಾರೆ.
ನಿನ್ನೆಯಷ್ಟೇ ಹೈದರಾಬಾದ್ ಗೆ ಬಂದಿಳಿದ ಅಜಯ್ ದೇವ್ಗನ್, 'ಆರ್.ಆರ್.ಆರ್' ಚಿತ್ರದ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದಾರೆ. ಸಿನಿಮಾದ ವಿಶೇಷ ಪಾತ್ರದಲ್ಲಿ ಅಜಯ್ ದೇವ್ಗನ್ ಕಾಣಿಸಿಕೊಳ್ಳಲಿದ್ದಾರೆ ಎಂದಷ್ಟೇ ಚಿತ್ರತಂಡ ಹೇಳಿಕೊಂಡಿದೆ.
ರಾಜಮೌಳಿ ಅಡ್ಡದಲ್ಲಿ ಕಾಣಿಸಿಕೊಂಡ ಅಜಯ್ ದೇವಗನ್
ಆದ್ರೀಗ ಹೊರಬಿದ್ದಿರುವ ಮಾಹಿತಿ ಪ್ರಕಾರ, 'ಆರ್.ಆರ್.ಆರ್' ಚಿತ್ರದಲ್ಲಿ ಅಜಯ್ ದೇವ್ಗನ್ 'ಕ್ರಾಂತಿಕಾರಿ ಭಗತ್ ಸಿಂಗ್' ಪಾತ್ರಕ್ಕೆ ಜೀವ ತುಂಬಲಿದ್ದಾರಂತೆ. ಸ್ವಾತಂತ್ರ್ಯ ಹೋರಾಟದ ಸುತ್ತ ಹೆಣೆದಿರುವ 'ಆರ್.ಆರ್.ಆರ್' ಚಿತ್ರಕಥೆಯಲ್ಲಿ ಭಗತ್ ಸಿಂಗ್ ಆಗಿ ಅಜಯ್ ದೇವ್ಗನ್ ಮಿಂಚಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆರ್.ಆರ್.ಆರ್ ಚಿತ್ರಕ್ಕೆ ಎಂಟ್ರಿ ಕೊಟ್ಟ ಬಾಲಿವುಡ್ ನ ಮತ್ತಿಬ್ಬರು.!
'ಆರ್.ಆರ್.ಆರ್' ಚಿತ್ರದಲ್ಲಿ ಬ್ರಿಟೀಷರ ವಿರುದ್ಧ ಸಮರ ಸಾರಿದ್ದ ಸ್ವಾತಂತ್ರ್ಯ ಹೋರಾಟಗಾರ ಕೋಮರಾಮ್ ಭೀಮ್ ಆಗಿ ಜೂ.ಎನ್.ಟಿ.ಆರ್ ಕಾಣಿಸಿಕೊಂಡರೆ, ಅಲ್ಲುರಿ ಸೀತಾರಾಮರಾಜು ಪಾತ್ರಕ್ಕೆ ರಾಮ್ ಚರಣ್ ತೇಜಾ ಬಣ್ಣ ಹಚ್ಚಿದ್ದಾರೆ.
ರಾಜಮೌಳಿ 'RRR' : ಕತೆ, ನಾಯಕಿ, ಬಿಡುಗಡೆ ದಿನಾಂಕ ಬಹಿರಂಗ!
ಡಿ.ವಿ.ವಿ ದಾನಯ್ಯ ನಿರ್ಮಾಣ ಮಾಡುತ್ತಿರುವ 'ಆರ್.ಆರ್.ಆರ್' 400 ಕೋಟಿ ರೂಪಾಯಿ ಬಜೆಟ್ ನಲ್ಲಿ ಸಿದ್ಧವಾಗುತ್ತಿದೆ. ಎಂ.ಎಂ.ಕೀರವಾಣಿ ಸಂಗೀತ ನೀಡಲಿರುವ ಈ ಚಿತ್ರ ಇದೇ ವರ್ಷದ ಜುಲೈ ತಿಂಗಳಲ್ಲಿ ತೆರೆಗೆ ಬರಲಿದೆ.