Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ದ್ರೌಪದಿ ಅಲ್ಲ.! ಮತ್ತೇನು.?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸಲು ಒಪ್ಪಿಕೊಂಡಿರುವ ಬಹುನಿರೀಕ್ಷಿತ 'ಕುರುಕ್ಷೇತ್ರ' ಚಿತ್ರಕ್ಕೆ ಕನ್ನಡದ ನಟಿ ಹರಿಪ್ರಿಯಾ ಎಂಟ್ರಿಕೊಟ್ಟಿರುವ ಸುದ್ದಿಯನ್ನ ಇದೇ 'ಫಿಲ್ಮಿಬೀಟ್ ಕನ್ನಡ' ಪುಟದಲ್ಲಿ ನೀವು ಓದಿರಬಹುದು.
'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ನಟಿಸುವುದು ಬಹುತೇಕ ಖಚಿತ ಎನ್ನಲಾಗಿದೆ. ಹಾಗೇ, ನಟಿ ಹರಿಪ್ರಿಯಾ ರವರು ನಿರ್ವಹಿಸಲು ಒಪ್ಪಿಕೊಂಡಿರುವ ಪಾತ್ರ ಕೂಡ ಚಿತ್ರತಂಡ ಗುಟ್ಟಾಗಿ ಇಟ್ಟಿದೆ.
ಹೀಗಿರುವಾಗಲೇ, 'ಕುರುಕ್ಷೇತ್ರ' ಚಿತ್ರದಲ್ಲಿ ನಟಿ ಹರಿಪ್ರಿಯಾ ಯಾವ ಪಾತ್ರ ನಿರ್ವಹಿಸಬಹುದು ಎನ್ನುವ ಕುರಿತು ಊಹಾಪೋಹ ಶುರು ಆಗಿದೆ. ಮುಂದೆ ಓದಿರಿ...
'ದ್ರೌಪದಿ' ಅಲ್ಲವಂತೆ.!
ಕೆಲ ವರದಿಗಳ ಪ್ರಕಾರ, 'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿ ಹರಿಪ್ರಿಯಾ 'ದ್ರೌಪದಿ' ಅಲ್ಲವಂತೆ.
ದರ್ಶನ್ 'ಕುರುಕ್ಷೇತ್ರ'ಕ್ಕೆ ಬಲಗಾಲಿಟ್ಟು ಬಂದ ಮೊದಲ ನಟಿ!
ಮತ್ತೆ ಯಾವ ಪಾತ್ರ.?
'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ನರ್ತಕಿ ಆಗಿ ಕಾಣಿಸಿಕೊಳ್ಳಲಿದ್ದಾರಂತೆ. ಹಾಗಂತ ಕೆಲ ಪತ್ರಿಕೆಗಳು ವರದಿ ಮಾಡಿವೆ.
ಅಧಿಕೃತ ಘೋಷಣೆ ಆಗಿಲ್ಲ.!
'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿ ಹರಿಪ್ರಿಯಾ ನಟಿಸುವ ಬಗ್ಗೆ ಹಾಗೂ ಅವರ ಪಾತ್ರದ ಕುರಿತು ಚಿತ್ರತಂಡ ಅಧಿಕೃತ ಘೋಷಣೆ ಮಾಡುವವರೆಗೂ ಇಂತಹ ಊಹಾಪೋಹಗಳು ಸರ್ವೇ ಸಾಮಾನ್ಯ.
ಇಲ್ಲಿಯವರೆಗೂ ಪಕ್ಕಾ ಆಗಿರುವವರು...
ದರ್ಶನ್ ಜೊತೆಗೆ ಕ್ರೇಜಿ ಸ್ಟಾರ್ ರವಿಚಂದ್ರನ್, ಶ್ರೀನಿವಾಸ್ ಮೂರ್ತಿ ಹಾಗೂ ಶ್ರೀನಾಥ್ 'ಕುರುಕ್ಷೇತ್ರ' ಸಿನಿಮಾದಲ್ಲಿ ನಟಿಸುವುದು ಪಕ್ಕಾ ಆಗಿದೆ.
ರೆಜಿನಾ ಹೆಸರೂ ಓಡಾಡುತ್ತಿದೆ.!
ಇನ್ನೂ 'ಕುರುಕ್ಷೇತ್ರ' ಸಿನಿಮಾದ ಪಾತ್ರವೊಂದಕ್ಕೆ ನಟಿ ರೆಜಿನಾ ಕೂಡ ಸೆಲೆಕ್ಟ್ ಆಗಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ಕೊನೆಗೂ 'ಕುರುಕ್ಷೇತ್ರ' ಚಿತ್ರಕ್ಕೆ ನಾಯಕಿಯಾದ ಪರಭಾಷಾ ನಟಿ..!
ಇದೇ ತಿಂಗಳು ಮುಹೂರ್ತ
ಇದೇ ತಿಂಗಳ ಅಂತ್ಯದಲ್ಲಿ, ಅಂದ್ರೆ... ನಿರ್ಮಾಪಕ ಮುನಿರತ್ನ ಹುಟ್ಟುಹಬ್ಬದ ಪ್ರಯುಕ್ತ 'ಕುರುಕ್ಷೇತ್ರ' ಚಿತ್ರದ ಮುಹೂರ್ತ ನಡೆಯಲಿದೆ. ಚಿತ್ರಕ್ಕೆ ನಾಗಣ್ಣ ಆಕ್ಷನ್ ಕಟ್ ಹೇಳಲಿದ್ದಾರೆ.