Don't Miss!
- News ಬಂಡೀಪುರ: ಹುಲಿ ದಾಳಿಯಿಂದ ಮರಿಯಾನೆ ಸಾವು, ನಡುರಸ್ತೆಯಲ್ಲೇ ಮುಗಿಲು ಮುಟ್ಟಿದ ತಾಯಿಯ ಆಕ್ರಂದನ, ವಿಡಿಯೋ ವೈರಲ್
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Automobiles ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೇತನ್-ಮೇಘನಾ ರಾಜ್ ಜೋಡಿಯ 'ನೂರೊಂದು ನೆನಪು' ಸದ್ಯಕ್ಕಿಲ್ಲ.!
ಎಲ್ಲ ಅಂದುಕೊಂಡಂತೆ ಆಗಿದ್ದರೇ ಮೇ 19ಕ್ಕೆ ಸ್ಯಾಂಡಲ್ ವುಡ್ ನಲ್ಲಿ ಡಬಲ್ ಧಮಾಕ ಆಗಬೇಕಿತ್ತು. ಆದ್ರೀಗ, ಚಿತ್ರಪ್ರೇಮಿಗಳಿಗೆ ಸ್ವಲ್ಪ ನಿರಾಸೆ ಆಗಿದೆ. ಅದಕ್ಕೆ ಕಾರಣ 'ನೂರೊಂದು ನೆನಪು'.
ಹೌದು, ಮೇ 19 ರಂದು ಸೆಂಚುರಿಸ್ಟಾರ್ ಶಿವರಾಜ್ ಕುಮಾರ್ ಅಭಿನಯದ 'ಬಂಗಾರ ಸನ್ ಆಫ್ ಬಂಗಾರದ ಮನುಷ್ಯ' ಚಿತ್ರ ಬಿಡುಗಡೆಯಾಗುತ್ತಿದೆ. ಅದೇ ದಿನ 'ಆ ದಿನಗಳು' ಚೇತನ್ ಹಾಗೂ ನಟಿ ಮೇಘನಾ ರಾಜ್ ಅಭಿನಯದ 'ನೂರೊಂದು ನೆನಪು' ಚಿತ್ರವೂ ತೆರೆಕಾಣಬೇಕಿತ್ತು. ಆದ್ರೆ, ಅಂತಿಮ ಕ್ಷಣದಲ್ಲಿ 'ನೂರೊಂದು ನೆನಪು' ಮುಂದೋಗಿದೆ.[ಮೇ 19ರಂದು ಬೆಳ್ಳಿತೆರೆಯಲ್ಲಿ ಚಿತ್ತಾರಗೊಳ್ಳಲಿದೆ 'ನೂರೊಂದು ನೆನಪು' ]
ಅಷ್ಟಕ್ಕೂ, ನೂರೊಂದು ನೆನಪು ಪೋಸ್ಟ್ ಪೋನ್ ಆಗಿರುವುದು ಯಾಕೆ ಎಂಬ ನಿಖರ ಮಾಹಿತಿಯಿಲ್ಲ. ಸದ್ಯದ ಮಾಹಿತಿ ಪ್ರಕಾರ ಜೂನ್ 9 ರಂದು ಚಿತ್ರ ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆಯಂತೆ.[ಟ್ರೈಲರ್: ನೆನಪುಗಳನ್ನ ಹೊತ್ತು ಬರುತ್ತಿದೆ 'ನೂರೊಂದು ನೆನಪು']
ಅಂದ್ಹಾಗೆ, 'ನೂರೊಂದು ನೆನಪು' ಮರಾಠಿಯ 'ದುನಿಯಾ ದಾರಿ' ಕಾದಂಬರಿ ಆಧಾರಿತ ಚಿತ್ರ. ಖ್ಯಾತ ಬರಹಗಾರ ಸುಹಾಸ್ ಶಿರ್ವ್ಕಾರ್ ಬರೆದಿರುವ ಮರಾಠಿ ಕಥೆಯನ್ನ ತಮ್ಮ ನೆಟಿವಿಟಿಗೆ ತಕ್ಕಂತೆ ಬದಲಿಸಿ ಸಿನಿಮಾ ಮಾಡಲಾಗಿದೆ.['ನೂರೊಂದು ನೆನಪು'ಗಳಲ್ಲಿ ಚೇತನ್-ಮೇಘನಾ ರಾಜ್]
'ಆ ದಿನಗಳು' ಖ್ಯಾತಿಯ ಚೇತನ್ ಹಾಗೂ ನಟಿ ಮೇಘನಾ ರಾಜ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ. ಇವರ ಜೊತೆಯಲ್ಲಿ ಡಿಂಗ್ರಿ ನಾಗರಾಜ್ ಅವರ ಮಗ ರಾಜ್ ವರ್ಧನ್, ಸುಶ್ಮಿತಾ ಜೋಶಿ, ಅರ್ಚನಾ ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಕುಮಾರೇಶ್ ಎಂಬುವರು ಆಕ್ಟನ್ ಕಟ್ ಹೇಳಿದ್ದು, ಇದು ಇವರಿಗೆ ಚೊಚ್ಚಲ ಚಿತ್ರ. ಬೆಳಗಾವಿ ಮೂಲದ ಸೂರಜ್ ದೇಸಾಯಿ, ಮನೀಶ್ ದೇಸಾಯಿ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. ಗಗನ್ ಬದೇರಿಯಾ ಸಂಗೀತ ಸಂಯೋಜನೆ ಮಾಡಿದ್ದಾರೆ.