ಅವಾಚ್ಯ ಶಬ್ಧಗಳಿಂದ ಬೈದ್ರಾ ದರ್ಶನ್ ? "ಓಹ್ ಡಿ ಬಾಸ್" ಎಂದವರು ಯಾರು? ವೈರಲ್ ವೀಡಿಯೋ ಅಸಲಿಯತ್ತೇನು?

By ಫಿಲ್ಮಿಬೀಟ್ ಡೆಸ್ಕ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೆಸರು ಪದೇ ಪದೇ ವಿವಾದದಲ್ಲಿ ಸಿಲುಕಿಕೊಳ್ಳುತ್ತಲೇ ಇರುತ್ತದೆ. ಈ ಹಿಂದೆ ದರ್ಶನ್ ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ ಎನ್ನಲಾಗುತ್ತಿದ್ದ ಸಾಕಷ್ಟು ಆಡಿಯೋ ಕ್ಲಿಪ್‌ಗಳು ವೈರಲ್ ಆಗಿತ್ತು. ಇದೀಗ ಅಂಥದ್ದೇ ಮತ್ತೊಂದು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಆದರೆ ಆ ವಿಡಿಯೋದಲ್ಲಿ ದರ್ಶನ್ ಕಾಣಿಸುತ್ತಿಲ್ಲ. ಬದಲಿಗೆ ಅವರದ್ದು ಎನ್ನಲಾಗುತ್ತಿರುವ ವಾಯ್ಸ್ ಕೇಳಿಸುತ್ತಿದೆ.

ದರ್ಶನ್ ಅಂದರೆ ರಫ್ ಅಂಡ್ ಟಫ್. ಮುಚ್ಚುಮರೆ ಇಲ್ಲ. ಎಲ್ಲವನ್ನೂ ನೇರವಾಗಿ ಹೇಳಿಬಿಡುತ್ತಾರೆ. ಒಳಗೊಂದು ಹೊರಗೊಂದು ಇರುವುದಿಲ್ಲ. ಇತ್ತೀಚೆಗೆ ದರ್ಶನ್ ಅವರ ಕೆಲ ಹೇಳಿಕೆಗಳು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಅಭಿಮಾನಿಗಳು ಮಾತ್ರ ನಮ್ಮ ಬಾಸ್ ಹೇಳಿದ ಅರ್ಥ ಬೇರೆ ಎಂದು ವಾದಿಸಿದರು. ತಮ್ಮ ಅಭಿಮಾನಿಗಳ ಬಗ್ಗೆ ಮಾತನಾಡುತ್ತಾ ಪುನೀತ್ ರಾಜ್‌ಕುಮಾರ್ ಹೆಸರು ತೆಗೆದುಕೊಂಡಿದ್ದು ಕೂಡ ದೊಡ್ಡ ಚರ್ಚೆ ಹುಟ್ಟಾಕ್ಕಿತ್ತು. ಇನ್ನು ಇತ್ತೀಚೆಗೆ ಅದೃಷ್ಟ ದೇವತೆ ಬಗ್ಗೆ ದರ್ಶನ್ ಕೊಟ್ಟ ಹೇಳಿಕೆ ಕೂಡ ಕೆಲವರ ಅಸಮಾಧಾನಕ್ಕೆ ಕಾರಣವಾಗಿತ್ತು. ಕಳೆದ ವರ್ಷ ಮೈಸೂರಿನ 'ಸಂದೇಶ್ ಪ್ರಿನ್ಸ್' ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ವಿಚಾರ ದೊಡ್ಡದಾಗಿ ಸದ್ದು ಮಾಡಿತ್ತು.

ಇನ್ನು ನಟ ದರ್ಶನ್ ಮಾಧ್ಯಮದವರನ್ನು ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ ಎನ್ನಲಾದ ಆಡಿಯೋ ಕೂಡ ಭಾರೀ ಸದ್ದು ಮಾಡಿತ್ತು. ಸದ್ಯ ವೈರಲ್ ಆಗಿರುವ ವಿಡಿಯೋದಲ್ಲಿ ದರ್ಶನ್ ಯಾರಿಗೋ ಬೈದಿದ್ದಾರೆ ಎನ್ನಲಾಗುತ್ತಿದೆ. ಮೈಸೂರಿನ ಪಬ್‌ವೊಂದರಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ.

ವಿಡಿಯೋದಲ್ಲಿ ಏನಿದೆ?

ವಿಡಿಯೋದಲ್ಲಿ ಏನಿದೆ?

ನಟ ದರ್ಶನ್ ಹೋದಲ್ಲಿ ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇದು ಕಳೆದ ಶನಿವಾರ ರಾತ್ರಿ ಮೈಸೂರಿನ ಸೋಶಿಯಲ್ ಪಬ್‌ನಲ್ಲಿ ನಡೆದಿರುವ ಘಟನೆ ಎನ್ನಲಾಗುತ್ತಿದೆ. ದರ್ಶನ್ ಪಬ್ ಒಳಗೆ ಈ ರೀತಿ ಕೂಗಾಡಿದ್ದಾರೆ. ಯಾರನ್ನೋ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗುತ್ತಿದೆ. ಸಣ್ಣ ಮಟ್ಟಿಗೆ ಗಲಾಟೆ ಕೂಡ ನಡೆದಿರುವಂತೆ ಕಾಣುತ್ತಿದೆ. ಸಾಕಷ್ಟು ಜನ ಅಭಿಮಾನಿಗಳು ಹೋಟೆಲ್‌ ಹೊರಗೂ ಜಮಾಯಿಸಿದ್ದರು.

ವಿಡಿಯೋ ಫುಲ್ ವೈರಲ್

ವಿಡಿಯೋ ಫುಲ್ ವೈರಲ್

ಸದ್ಯ ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಡುವೆ ಅಭಿಮಾನಿಯೊಬ್ಬರು 'ಓಹ್ ಡಿಬಾಸ್' ಎನ್ನುವುದು ಕೂಡ ಕೇಳಿಸುತ್ತಿದೆ. ಹಾಗಾಗಿ ಇದು ದರ್ಶನ್ ಅವರದ್ದೇ ವಾಯ್ಸ್ ಎಂದು ಕೆಲವರು ಹೇಳುತ್ತಿದ್ದಾರೆ. ಈ ಹಿಂದೆ ಇಂತದ್ದೇ ಆಡಿಯೋ ಕ್ಲಿಪ್‌ಗಳು ವೈರಲ್ ಆದಾದ ಅದೆಲ್ಲಾ ಫೇಕ್, ಯಾರೋ ದರ್ಶನ್ ರೀತಿ ಮಿಮಿಕ್ರಿ ಮಾಡಿರೋದು ಎಂದು ಕೆಲವರು ವಾದಿಸಿದ್ದರು. ಕೆಲವರು ಈ ವಿಡಿಯೋ ಬಗ್ಗೆ ಕೂಡ ಅದೇ ರೀತಿ ಮಾತನಾಡುತ್ತಿದ್ದಾರೆ.

ಬೊಮ್ಮನಹಳ್ಳಿಯಲ್ಲಿ ದರ್ಶನ್ ಹವಾ

ಬೊಮ್ಮನಹಳ್ಳಿಯಲ್ಲಿ ದರ್ಶನ್ ಹವಾ

ಸೋಮವಾರ ಬೊಮ್ಮನಹಳ್ಳಿ ಶಾಸಕರಾದ ಸತೀಶ್ ರೆಡ್ಡಿ ಹುಟ್ಟುಹಬ್ಬದ ಸಂಭ್ರಮಾಚರಣೆದಲ್ಲಿ ನಟ ದರ್ಶನ್ ಭಾಗಿ ಆಗಿದ್ದರು. ಭರ್ಜರಿ ರೋಡ್ ಶೋ ಕೂಡ ನಡೆಸಿದ್ದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿ ನೆಚ್ಚಿನ ನಟನಿಗೆ ಜೈಕಾರ ಹಾಕಿದ್ದರು. ಈ ಬಾರಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬೊಮ್ಮನಹಳ್ಳಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿ ಆಗಿದ್ದಾರೆ. ಹಿಂದೆ ಆತ್ಮೀಯ ಸ್ನೇಹಿತರಾಗಿದ್ದ ದರ್ಶನ್ ಹಾಗೂ ಉಮಾಪತಿ ಈಗ ದೂರಾಗಿದ್ದಾರೆ. ಸತೀಶ್ ರೆಡ್ಡಿ ಜೊತೆ ದರ್ಶನ್ ರೋಡ್ ಶೋ ನಡೆಸಿ ಉಮಾಪತಿಗೆ ಖಡಕ್ ಸಂದೇಶ ರವಾನಿಸಿದಂತಿದೆ.

'ಕ್ರಾಂತಿ' ಬಿಡುಗಡೆಗೆ ದಿನಗಣನೆ

'ಕ್ರಾಂತಿ' ಬಿಡುಗಡೆಗೆ ದಿನಗಣನೆ

ವಿ. ಹರಿಕೃಷ್ಣ ನಿರ್ದೇಶನದಲ್ಲಿ ದರ್ಶನ್ ನಟನೆಯ 'ಕ್ರಾಂತಿ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಶೈಲಜಾ ನಾಗ್ ಹಾಗೂ ಬಿ. ಸುರೇಶ ದಂಪತಿ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ಈ ಸಿನಿಮಾ ಪ್ರೇಕ್ಷಕರ ಮುಂದೆ ಬರ್ತಿದೆ. ಈಗಾಗಲೇ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಜನವರಿ 26ಕ್ಕೆ ಥಿಯೇಟರ್‌ಗಳಲ್ಲಿ ದರ್ಶನ್ 'ಕ್ರಾಂತಿ' ಶುರುವಾಗಲಿದೆ.

More from Filmibeat

English summary
Kranti Actor Darshan fire on irritating fans Video Goes Viral. Darshan Starrer Kranti Movie all Set To Release on January 26. know more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X