Don't Miss!
- News Karnataka LS Election 2024 LIVE: ಇಂದು ಮೊದಲ ಹಂತದ ಮತದಾನಕ್ಕೆ ಸಿದ್ಧವಾದ ರಾಜ್ಯದ 14 ಕ್ಷೇತ್ರಗಳು
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ರೀಮೇಕ್ ಚಿತ್ರದಲ್ಲಿ ಚಿರಂಜೀವಿ: ಮೋಹನ್ ರಾಜ್ ನಿರ್ದೇಶನ
ಮೆಗಾಸ್ಟಾರ್ ಚಿರಂಜೀವಿ ಇತ್ತೀಚಿನ ದಿನಗಳಲ್ಲಿ ರೀಮೇಕ್ ಸಿನಿಮಾಗಳ ಕಡೆ ಹೆಚ್ಚು ಒಲವು ತೋರುತ್ತಿದ್ದಾರೆ. ರಾಜಕೀಯ ಕಾರಣಕ್ಕಾಗಿ ಸಿನಿಮಾ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದ ಚಿರಂಜೀವಿ ಖೈದಿ 150 ಚಿತ್ರದ ಮೂಲಕ ಕಂಬ್ಯಾಕ್ ಮಾಡಿದ್ದರು. ಇದು ತಮಿಳಿನಲ್ಲಿ ವಿಜಯ್ ನಟಿಸಿದ್ದ ಕತ್ತಿ ಸಿನಿಮಾ ರೀಮೇಕ್ ಆಗಿತ್ತು.
ನಂತರ ಸೈರಾ ನರಸಿಂಹ ರೆಡ್ಡಿ ಎಂಬ ಹಿಟ್ ಚಿತ್ರ ಕೊಟ್ಟರು. ಪ್ರಸ್ತುತ ಆಚಾರ್ಯ ಸಿನಿಮಾದಲ್ಲಿ ಚಿರು ನಟಿಸುತ್ತಿದ್ದಾರೆ. ಈ ಸಿನಿಮಾ ಬಳಿಕ ಮೆಗಾಸ್ಟಾರ್ ಬಳಿ ಎರಡು ಪ್ರಾಜೆಕ್ಟ್ ಇದೆ. ಈ ಎರಡೂ ಚಿತ್ರವೂ ರೀಮೇಕ್. ಒಂದು ತಮಿಳಿನಿಂದ ರೀಮೇಕ್ ಮಾಡಲು ಮುಂದಾಗಿದ್ದರೆ, ಇನ್ನೊಂದು ಮಲಯಾಳಂ ಚಿತ್ರ. ಮುಂದೆ ಓದಿ....
ಚಿರಂಜೀವಿ ನಟನೆಯ 'ಆಚಾರ್ಯ' ಸಿನಿಮಾದ ಚಿತ್ರೀಕರಣ ಮುಂದಿನ ವರ್ಷಕ್ಕೆ ಮುಂದೂಡಿಕೆ
ಲೂಸಿಫರ್ ರೀಮೇಕ್ನಲ್ಲಿ ಮೆಗಾಸ್ಟಾರ್
ಪೃಥ್ವಿರಾಜ್ ಸುಕುಮಾರನ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿದ್ದ ಲೂಸಿಫರ್ ಸಿನಿಮಾವನ್ನು ತೆಲುಗಿನಲ್ಲಿ ರೀಮೇಕ್ ಮಾಡುವ ತಯಾರಿ ನಡೆಯುತ್ತಿದ್ದು, ಮೆಗಾಸ್ಟಾರ್ ಚಿರಂಜೀವಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಟಾಲಿವುಡ್ನಲ್ಲಿ ಸದ್ದು ಮಾಡ್ತಿದೆ.
ಮೋಹನ್ ಲಾಲ್ ಪಾತ್ರದಲ್ಲಿ ಚಿರು
ಲೂಸಿಫರ್ ಚಿತ್ರದಲ್ಲಿ ಮೋಹನ್ ಲಾಲ್ ಮುಖ್ಯ ಪಾತ್ರ ನಿರ್ವಹಿಸಿದ್ದರು. ಸದ್ಯದ ಮಾಹಿತಿ ಪ್ರಕಾರ ಮೋಹನ್ ರಾಜು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವ ಸಾಧ್ಯತೆ ಇದೆ ಎನ್ನಲಾಗಿದೆ. ಜಯಂ, ಥನಿ ಒರುವನ್, ವೇಲೈಕಾರನ್ ಅಂತಹ ಚಿತ್ರಗಳನ್ನು ನಿರ್ದೇಶಿಸಿರುವ ಮೋಹನ್ ರಾಜ್ ಲೂಸಿಫರ್ ತೆಲುಗಿಗೆ ಡೈರೆಕ್ಷನ್ ಮಾಡಬಹುದು.
ತಮಿಳು ಸಿನಿಮಾದ ರಿಮೇಕ್ ನಲ್ಲಿ ನಟಿಸಲು ಇಷ್ಟೊಂದು ಕೋಟಿ ಸಂಭಾವನೆ ಪಡೆಯುತ್ತಿದ್ದಾರಾ ಚಿರಂಜೀವಿ?
ಮುಂದಿನ ವರ್ಷಕ್ಕೆ ಸೆಟ್ಟೇರಬಹುದು
'ಅಂಧಾದುನ್' ತೆಲುಗು ರೀಮೇಕ್ ಚಿತ್ರವನ್ನು ಮೋಹನ್ ರಾಜ್ ನಿರ್ದೇಶಿಸಬೇಕಿತ್ತು. ಆದ್ರೆ, ಆ ಚಿತ್ರದಿಂದ ಹೊರಗೆ ಬಂದಿದ್ದಾರೆ. ಇದೀಗ, ಚಿರಂಜೀವಿ ನಟನೆಯ ಲೂಸಿಫರ್ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಮುಂದಿನ ವರ್ಷದ ಆರಂಭದಲ್ಲಿ ಈ ಸಿನಿಮಾ ಸೆಟ್ಟೇರಬಹುದು ಎಂಬ ಮಾಹಿತಿ ಇದೆ.
Recommended Video
ವೇದಾಲಂ ರೀಮೇಕ್!
ತಮಿಳಿನಲ್ಲಿ ಅಜಿತ್ ಕುಮಾರ್ ನಟಿಸಿದ್ದ ಸೂಪರ್ ಹಿಟ್ ಚಿತ್ರ ವೇದಾಲಂ ತೆಲುಗಿಗೆ ರೀಮೇಕ್ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದಲ್ಲಿ ಚಿರಂಜೀವಿ ನಟಿಸುವ ಲೆಕ್ಕಾಚಾರ ಟಾಲಿವುಡ್ನಲ್ಲಿದೆ. ಬಹುಶಃ ಈ ಚಿತ್ರಕ್ಕೂ ಚಿರಂಜೀವಿ ಗ್ರೀನ್ ಸಿಗ್ನಲ್ ಕೊಡುವ ನಿರೀಕ್ಷೆ ಇದೆ.