ಕನ್ನಡದ 'ಯುವರಾಜ್'ಗಾಗಿ ಬಂದಳು ಮಿಸ್‌ವರ್ಲ್ಡ್ ಮಾನುಷಿ ಚಿಲ್ಲರ್!

ಕನ್ನಡದ ಹೆಸರಾಂತ ನಿರ್ಮಾಣ ಸಂಸ್ಥೆ ಹೊಂಬಾಳೆ ಮತ್ತೊಂದು ಹೊಸ ಪ್ರಯೋಗಕ್ಕೆ ಕೈ ಹಾಕಿದಂತಿದೆ. ಈಗಾಗಲೇ ಸಾಕಷ್ಟು ಸಿನಿಮಾಗಳ ನಿರ್ಮಾಣಕ್ಕೆ ಹೊಂಬಾಳೆ ಮುಂದಾಗಿದೆ. ಸಾಕಷ್ಟು ನಿರೀಕ್ಷಿತ ಸಿನಿಮಾಗಳನ್ನೆ ಮಾಡುತ್ತಿದೆ ಹೊಂಬಾಳೆ ಸಂಸ್ಥೆ. ಅವುಗಳಲ್ಲಿ ಯುವರಾಜ್ ಕುಮಾರ್ ಸಿನಿಮಾ ಕೂಡ ಒಂದು.

ಈಗ ವಿಶ್ವಸುಂದರಿ ಮಾನುಷಿ ಚಿಲ್ಲರ್ ಜೊತೆಗೆ ಹೊಂಬಾಳೆ ಕೈ ಜೋಡಿಸಿದಂತೆ ಇದೆ. ಮಾನುಷಿ ಚಿಲ್ಲರ್ ನಿರ್ಮಾಪಕ ವಿಜಯ್ ಕಿರಂಗಂದೂರು ಅವರನ್ನು ಭೇಟಿ ಮಾಡಿದ್ದು ಈ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

ಅಷ್ಟಕ್ಕೂ ಮಾನುಷಿ ಚಿಲ್ಲರ್ ಇಲ್ಲಿ ತನಕ ಹೊಂಬಾಳೆ, ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಯಾವುದೇ ಸುಳಿವು ಇರಲಿಲ್ಲ. ಆದರೆ ಈಗ ಇದ್ದಕ್ಕಿದ್ದ ಹಾಗೆ ಹೊಂಬಾಳೆ ನಿರ್ಮಾಪಕರನ್ನು ಭೇಟಿ ಮಾಡಿರುದು ಅಚ್ಚರಿ ಮೂಡಿಸಿದೆ. ಇದಕ್ಕೆ ಕಾರಣ ಯುವರಾಜ್ ಸಿನಿಮಾ ಎನ್ನಲಾಗಿದೆ.

ಹೊಂಬಾಳೆ ಕಚೇರಿಯಲ್ಲಿ ಮಾನುಷಿ ಚಿಲ್ಲರ್!

ಮಾನುಷಿ ಚಿಲ್ಲರ್ ಸದ್ಯ ಬೆಂಗಳೂರಿನಲ್ಲಿ ಪ್ರತ್ಯಕ್ಷವಾಗಿದ್ದಾರೆ. ಅದು ಕೂಡ ಹೊಂಬಾಳೆ ಫಿಲ್ಮ್ಸ್ ನಿರ್ಮಾಪಕರನ್ನು ಭೇಟಿಯಾಗಿದ್ದಾರೆ ಎನ್ನುವುದು ವಿಶೇಷ. ಹಾಗಂತ ಅಚಾನಕ್ಕಾಗಿ ನಿರ್ದೇಶಕ ವಿಜಯ್ ಕಿರಗಂದೂರುಗೆ ಮಾನುಷಿ ಚಿಲ್ಲರ್ ಸಿಕ್ಕಿದ್ದಲ್ಲ. ಬದಲಿಗೆ ಮಾನುಷಿ ಚಿಲ್ಲರ್ ಬೆಂಗಳೂರಿನಲ್ಲಿರುವ ಹೊಂಬಾಳೆ ನಿರ್ಮಾಣ ಸಂಸ್ಥೆಯ ಕಚೇರಿಗೆ ಭೇಟಿ ನೀಡಿದ್ದಾರೆ. ನಿರ್ಮಾಪಕ ವಿಜಯ್ ಕಿರಗಂದೂರು ಮಾನಸಿಗೆ ಹೂ ಗುಚ್ಛವನ್ನು ಕೊಟ್ಟು ಸ್ವಾಗತಿಸಿ ಮಾತುಕತೆ ನಡೆಸಿದ್ದಾರೆ. ಅವರ ಭೇಟಿಯ ಫೋಟೋವನ್ನು ಕೂಡ ಹೊಂಬಾಳೆ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದೆ. ಈ ಫೋಟೋ ಸಾಕಷ್ಟು ಕುತೂಹಲಗಳಿಗೆ ಕಾರಣವಾಗಿದೆ.

ಯುವರಾಜ್‌ಗೆ ಮಾನುಷಿ ಚಿಲ್ಲರ್ ನಾಯಕಿ!

ಯುವರಾಜ್‌ಗೆ ಮಾನುಷಿ ಚಿಲ್ಲರ್ ನಾಯಕಿ!

ಮಾನುಷಿ ಚಿಲ್ಲರ್ ನಿರ್ಮಾಪಕ ವಿಜಯ್ ಕಿರಗಂದೂರು ಅವರನ್ನು ಭೇಟಿ ಮಾಡಿದ ಹಿನ್ನೆಲೆ, ಹೊಂಬಾಳೆ ನಿರ್ಮಾಣದ ಸಿನಿಮಾದಲ್ಲಿ ಮಾನುಷಿ ಅಭಿನಯಿಸುತ್ತಾರೆ ಎನ್ನಲಾಗುತ್ತಿದೆ. ಸದ್ಯ ಹೊಂಬಾಳೆ ಸಿನಿಮಾ ಕೈಗೆತ್ತಿಕೊಂಡಿರುವ ಚಿತ್ರಗಳಲ್ಲಿ ಬಹುನಿರೀಕ್ಷೆಯ ಮತ್ತು ಹೆಚ್ಚಿನ ಆದ್ಯತೆ ಪಡೆದುಕೊಂಡಿರುವ ದೊಡ್ಡ ಸಿನಿಮಾ ಎಂದರೆ ಅದು ಯುವರಾಜ್ ಕುಮಾರ್‌ಗಾಗಿ ಹೊಂಬಾಳೆ ಮಾಡುತ್ತಿರುವ ಸಿನಿಮಾ. ಈ ಚಿತ್ರಕ್ಕಾಗಿ ರಾಘವೇಂದ್ರ ರಾಜಕುಮಾರ್ ಪುತ್ರ, ರಾಜ್ ಕುಟುಂಬದ ಕುಡಿ ಯುವರಾಜ್ ಕುಮಾರ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ. ಹಾಗಾಗಿ ಯುವರಾಜ್ ಕುಮಾರ್ ಜೊತೆಗೆ ನಟಿಸುವ ನಾಯಕಿ ಯಾರು ಎನ್ನುವ ಕುತೂಹಲ ಇತ್ತು. ಅದಕ್ಕೀಗ ಮಾನುಷಿ ಚಿಲ್ಲರ್ ಉತ್ತರವಾಗಿದ್ದಾರೆ. ಯುವರಾಜ್ ಕುಮಾರ್ ಮೊದಲ ಸಿನಿಮಾದಲ್ಲಿ ಮಾನುಷಿ ಚಿಲ್ಲರ್ ನಾಯಕಿಯಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡ್ತಾರೆ ಎನ್ನಲಾಗುತ್ತಿದೆ.

ಮಾನುಷಿ ಚಿಲ್ಲರ್ ಗೆ 2ನೇ ಚಿತ್ರ!

ಮಾನುಷಿ ಚಿಲ್ಲರ್ ಗೆ 2ನೇ ಚಿತ್ರ!

ಮಾನುಷಿ ಚಿಲ್ಲರ್ 2017ರಲ್ಲಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದರು. ಬಳಿಕ ಕೊಂಚ ತಡವಾಗಿಯೇ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟರು. ಮೊದಲು ಬಾಲಿವುಡ್ ಸಿನಿಮಾದಲ್ಲಿ ಮಾನುಷಿ ಚಿಲ್ಲರ್ ಅಭಿನಯಿಸಿದ್ದಾರೆ. ಅಕ್ಷಯ್ ಕುಮಾರ್ ಜೊತೆಗೆ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದಲ್ಲಿ ನಟಿಸಿದ ಮಾನುಷಿ ಚಿಲ್ಲರ್ ಎರಡನೇ ಸಿನಿಮಾ ಯಾವುದು ಎನ್ನುವ ಕುತೂಹಲ ಹುಟ್ಟಿಕೊಂಡಿದೆ. ಈಗ ಇವರು ಕನ್ನಡಕ್ಕೆ ಬರುತ್ತಿದ್ದಾರೆ ಕನ್ನಡದಲ್ಲಿ ಎರಡನೇ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿ ಹಬ್ಬಿದ.

ಬಾಲಿವುಡ್‌ ಮೂಲಕ ಚಿತ್ರರಂಗಕ್ಕೆ ಎಂಟ್ರಿ!

ಬಾಲಿವುಡ್‌ ಮೂಲಕ ಚಿತ್ರರಂಗಕ್ಕೆ ಎಂಟ್ರಿ!

ಇದೇ ವರ್ಷ ಮಾನುಷಿ ಚಿಲ್ಲರ್ ಅಭಿನಯದ ಮೊದಲ ಸಿನಿಮಾ 'ಸಾಮ್ರಾಟ್ ಪೃಥ್ವಿರಾಜ್' ರಿಲೀಸ್ ಆಯ್ತು. ಆದರೆ ಅಂದುಕೊಂಡ ಮಟ್ಟಿಗೆ ಸಿನಿಮಾ ಯಶಸ್ಸು ಪಡೆಯಲಿಲ್ಲ. ಮಾನುಷಿ ಮೊದಲ ಚಿತ್ರವೇ ಸೋತಿದೆ. ಹಾಗಾಗಿ ಮಾನುಷಿ ಚಿಲ್ಲರ್ ಮುಂದಿನ ಆಯ್ಕೆ ಉತ್ತಮವಾಗಿರುವುದು ಮತ್ತು ಯಶಸ್ಸು ಕಾಣುವ ಅನಿವಾರ್ಯತೆ ಎದುರಾಗಿದೆ. ಇದೇ ಕಾರಣಕ್ಕೆ ಮಾನುಷಿ ಚಿಲ್ಲರ್ ಕನ್ನಡಕ್ಕೆ ಬರುತ್ತಿದ್ದಾರೆ. ಈ ಮೂಲಕ ಹೊಂಬಾಳೆ ನಿರ್ಮಾಣ ಸಂಸ್ಥೆಯ ಜೊತೆಗೆ ಕೈ ಜೋಡಿಸಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿಯನ್ನು ಚಿತ್ರತಂಡವೇ ನೀಡಬೇಕಿದೆ.

More from Filmibeat

English summary
Miss World Manushi Chillar At Hombale Office In Bengaluru, Manushi Casting With Yuvaraj Kumar,
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X