Don't Miss!
- News Bank Holidays in April: ಏಪ್ರಿಲ್ನಲ್ಲಿ 14 ದಿನಗಳ ಕಾಲ ಬ್ಯಾಂಕ್ ರಜೆ, ಪಟ್ಟಿ ಇಲ್ಲಿದೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿರಾಗಾಂಧೀ ಸೊಸೆ ಕುರಿತ ಚಿತ್ರ ಬಿಡುಗಡೆಗೆ ಸಿದ್ಧ
ಕಾಂಗ್ರೆಸ್ ಅಧಿನಾಯಕಿ ಸೋನಿಯಾಗಾಂಧಿ ಜೀವನ ಆಧರಿಸಿ ನಿರ್ಮಿಸಲಾಗಿರುವ ಹಿಂದಿ ಚಿತ್ರ 'ಸೋನಿಯಾ-ಸೋನಿಯಾ' ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದ ಕೆಲ ದೃಶ್ಯಗಳಿಗೆ ಕತ್ತರಿ ಹಾಕಿರುವ ಸೆನ್ಸಾರ್ ಮಂಡಳಿಯೂ ಚಿತ್ರ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಿದೆ. ಈ ಮೂಲಕ ಸುಮಾರು ಮೂರು ವರ್ಷಗಳ ಕಾಲ ಕಾನೂನು ಸಮರ ನಡೆಸಿದ ಚಿತ್ರದ ನಿರ್ಮಾಪಕ ದಿನೇಶ್ ಕುಮಾರ್ ಠಾಕೂರ್ ಕೊನೆಗೂ ನಿಟ್ಟುಸಿರು ಬಿಡುವಂತಾಗಿದೆ.
ಕೇಂದ್ರ ಚಲನಚಿತ್ರ ಸೆನ್ಸಾರ್ ಮಂಡಳಿಯು ಚಿತ್ರದ ಮೇಲಿದ್ದ ನಿಷೇಧವನ್ನು ಹಿಂತೆಗೆದುಕೊಂಡಿದ್ದು, ಕಾಂಗ್ರೆಸ್ ನಾಯಕಿ ಸೋನಿಯಾ ಅವರಿಂದ ತಕರಾರು ರಹಿತ ಪ್ರಮಾಣಪತ್ರ ಸಲ್ಲಿಸುವಂತೆ ಚಿತ್ರ ನಿರ್ಮಾಪಕರಿಗೆ ಹೇಳಿದ್ದ ಕಾರಣ ಸಮಸ್ಯೆ ಇಷ್ಟೊಂದು ಜಟಿಲವಾಗಿತ್ತು. ಸೆನ್ಸಾರ್ ಮಂಡಳಿಯು ಈಗಾಗಲೇ ಚಿತ್ರಕ್ಕೆ 'ಯು' ಪ್ರಮಾಣ ಪತ್ರ ನೀಡಿದೆ. ಚಿತ್ರವನ್ನು ಮಾಜಿ ಪ್ರಧಾನಮಂತ್ರಿ ಜವಾಹರ್ ಲಾಲ್ ಅವರ ಹುಟ್ಟುಹಬ್ಬದ ದಿನವಾದ ನವೆಂಬರ್ 14 ರಂದು ಚಿತ್ರ ಬಿಡುಗಡೆಯಾಗುವುದು ಎಂದು ದಿನೇಶ್ ಕುಮಾರ್ ತಿಳಿಸಿದ್ದರು.
ಕಳೆದ 2005ರಲ್ಲಿ ಸೆನ್ಸಾರ್ ಮಂಡಳಿಯ ಮುಂದೆ ಚಿತ್ರ ಬಂದಿತು. ಆದರೆ ಎಐಸಿಸಿ ಅಧ್ಯಕ್ಷರು ಸೋನಿಯಾ ಗಾಂಧಿ ಅವರಿಂದ ತಕರಾರು ರಹಿತ ಪ್ರಮಾಣಪತ್ರವನ್ನು ಮಂಡಳಿಗೆ ಸಲ್ಲಿಸಬೇಕು ಎಂದು ಮಂಡಳಿಯ ಅಧಿಕಾರಿಗಳು ಸೂಚಿಸಿದ್ದರು. ಆದರೆ ಮಂಡಳಿಯ ಕ್ರಮವನ್ನು ಖಂಡಿಸಿದ ದಿನೇಶ್ ಕುಮಾರ್ ಮುಂಬೈ ಹೈಕೋರ್ಟ್ ನಲ್ಲಿ ಪ್ರಕರಣವನ್ನು ದಾಖಲು ಮಾಡಿದ್ದರು. ವಿಚಾರಣೆ ನಡೆಸಿದ ನ್ಯಾಯ ಮಂಡಳಿ ಚಿತ್ರ ಬಿಡುಗಡೆಗೆ ಪೂರ್ವ ಷರತ್ತು ಕೇಳುವುದು ಸರಿಯಾದ ಕ್ರಮವಲ್ಲ. ಆದ್ದರಿಂದ ಚಿತ್ರ ಬಿಡುಗಡೆ ಅನುವು ಮಾಡಿಕೊಡಬೇಕು ಎಂದು ಸೆನ್ಸಾರ್ ಮಂಡಳಿಗೆ ಆದೇಶ ನೀಡಿದೆ. ನ್ಯಾಯಾಲಯದ ತೀರ್ಪಿನಿಂದ ಸಂತಸ ವ್ಯಕ್ತಪಡಿಸಿದ ದಿನೇಶ್ ಕುಮಾರ್ ಕಳೆದ ಮೂರು ವರ್ಷಗಳಲ್ಲಿ ಅಪಾರ ಪ್ರಮಾಣದ ಹಣವನ್ನು ಕಳೆದುಕೊಂಡಿದ್ದೆ, ಇದೀಗ ನ್ಯಾಯಾಲಯ ಚಿತ್ರ ಬಿಡುಗಡೆಗೆ ಅವಕಾಶ ನೀಡಿರುವುದು ಸಂತಸವಾಗಿದೆ ಎಂದು ಅವರು ಹೇಳಿದರು.
(ದಟ್ಸ್ ಕನ್ನಡಸಿನಿವಾರ್ತೆ)